ಕೊರೊನಾ ವೈರಸ್ : ಸೌದಿ ಅರೇಬಿಯಾದಿಂದ ಆಗಮಿಸಿದ್ದ ವ್ಯಕ್ತಿ ಸಾವು

Monday, March 9th, 2020
coronavirus

ಕೋಲ್ಕತ್ತಾ : ಸೌದಿ ಅರೇಬಿಯಾದಿಂದ ಆಗಮಿಸಿದ್ದ ವ್ಯಕ್ತಿಯೋರ್ವ ಜ್ವರದಿಂದ ಸಾವನ್ನಪ್ಪಿದ್ದು, ಕೊರೊನಾ ವೈರಸ್ ಗೆ ಭಾರತದ ಮೊದಲ ಬಲಿಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. 33 ವರ್ಷದ ವ್ಯಕ್ತಿಯೋರ್ವ ಶನಿವಾರ ಕೋಲ್ಕತ್ತಾಗೆ ಬಂದಿಳಿದಿದ್ದ. ಆಗಲೇ ಈತ ಕಫ, ಜ್ವರ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ. ಭಾನುವಾರ ಬೆಳಿಗ್ಗೆ ಈತ ಆಸ್ಪತ್ರೆಗೆ ದಾಖಲಾಗಿದ್ದು, ಸಂಜೆ ನಾಲ್ಕು ಗಂಟೆಗೆ ಮೃತಪಟ್ಟಿದ್ದಾನೆ. ಈ ಬಗ್ಗೆ ಮಾತನಾಡಿದ ಅಲ್ಲಿನ ವೈದ್ಯಾಧಿಕಾರಿ, ನಾನವು ಆತನ ರಕ್ತದ ಮಾದರಿಯನ್ನು ಟೆಸ್ಟ್ ಗೆ ಕಳುಹಿಸಿದ್ದೇವೆ. ಈ ಸಾವಿನ ನಂತರ […]

ಕುಲಾಲ ಸಂಘ ಮೀರಾರೋಡ್-ವಿರಾರ್ ಸಮಿತಿಯ ಹಳದಿ ಕುಂಕುಮ

Monday, March 9th, 2020
mumbay

ಮುಂಬಯಿ : ಪುರುಷರು ವಿವಿಧ ರೀತಿಯಲ್ಲಿ ಮಹಿಳೆಯರಿಗೆ ಸಹಕರಿಸುತ್ತಿದ್ದರೂ, ಜೀವನದಲ್ಲಿ ಹೆಚ್ಚಿನ ಸಮಸ್ಯೆಗಳನ್ನು ಎದುರಿಸುವ ಶಕ್ತಿ, ತಾಳ್ಮೆ ಮಹಿಳೆಯರಿಗಿದೆ. ಹಳದಿ ಕುಂಕುಮ ಕಾರ್ಯಕ್ರಮದ ಮೂಲಕ ಕುಲಾಲ ಸಮುದಾಯದ ಮಹಿಳೆಯರು ಹೆಚ್ಚಿಗೆ ಸಂಘಟಿತರಾಗುವಂತಾಗಿದೆ ಇದು ನಿರಂತರವಾಗಿ ಮುಂದುವರಿಯುತ್ತಿರಲಿ ಎಂದು ಕುಲಾಲ ಸಂಘ ಮುಂಬಯಿಯ ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆ ಸುಚಿತಾ ಬಂಜನ್ ನುಡಿದರು. ಮಾ. 1 ರಂದು ನಾಲಾಸೋಪಾರ (ಪ.) ಗ್ಯಾಲ್ಯಾಕ್ಷಿ ಹೊಟೇಲು ಸಭಾಗೃಹದಲ್ಲಿ ಜರಗಿದ ಕುಲಾಲ ಸಂಘ ಮೀರಾರೋಡ್-ವಿರಾರ್ ಸಮಿತಿಯ ಹಳದಿ ಕುಂಕುಮದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು […]

ಕರ್ನಾಟಕ ಆಶ್ರಯದಲ್ಲಿ ದುಬೈಯಲ್ಲಿ ರಕ್ತದಾನ ಶಿಬಿರ

Saturday, March 7th, 2020
dubay

ದುಬೈ : ನ್ಯೂ ಮಾರ್ಕ್ ಸ್ಪೋರ್ಟ್ಸ್ ಆಂಡ್ ಕಲ್ಚರಲ್ ಕ್ಲಬ್ ಮಂಗಳೂರು ಮತ್ತು ಕೊಂಕಣ್ಸ್ ಬೆಲ್ಸ್ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಜಂಟಿ ಆಶ್ರಯದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರವು ದಿನಾಂಕ 06.03.2020 ನೇ ಶುಕ್ರವಾರದಂದು ಯುನೈಟೆಡ್ ಅರಬ್ ಎಮಿರೇಟ್ಸ್ ನ ದುಬೈಯ ಲತೀಫಾ ಬ್ಲಡ್ ಡೊನೇಷನ್ ಸೆಂಟರ್ ನಲ್ಲಿ ಯಶಸ್ವಿಯಾಗಿ ನಡೆಯಿತು. ರಕ್ತ ದಾನ ಶಿಬಿರದಲ್ಲಿ ಒಟ್ಟು 70 ಮಂದಿ ಭಾಗವಹಿಸಿ ಹೆಸರು ನೋಂದಾಯಿಸಿದ್ದರು. ಕಾರಣಾಂತರಗಳಿಂದ 50 ಮಂದಿಗೆ ಮಾತ್ರ ರಕ್ತದಾನ ಮಾಡಲು ಸಾಧ್ಯವಾಯಿತು. ದಾನಿಗಳಿಂದ ರಕ್ತ ಸಂಗ್ರಹಿಸುವಲ್ಲಿ ದುಬೈಯ ಲತೀಫಾ […]

ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ನಿವಾಸದ ಮೇಲೆ ಇಡಿ ದಾಳಿ

Saturday, March 7th, 2020
ran-kapoor

ಮುಂಬೈ : ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಯೆಸ್ ಬ್ಯಾಂಕ್ ಸಂಸ್ಥಾಪಕ ಹಾಗೂ ಮಾಜಿ ಸಿಇಒ ರಾಣಾ ಕಪೂರ್ ಅವರ ಮುಂಬೈ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಶುಕ್ರವಾರ ರಾತ್ರಿ ದಾಳಿ ನಡೆಸಿದ್ದಾರೆ. ನಷ್ಟದಲ್ಲಿರುವ ದಿವಾನ್ ಹೌಸಿಂಗ್ ಫೈನಾನ್ಸ್ ಕಾರ್ಪೋರೇಷನ್(ಡಿಎಚ್ಎಫ್ಎಲ್) ಜೊತೆ ಯೆಸ್ ಬ್ಯಾಂಕ್ ವ್ಯವಹಾರಕ್ಕೆ ಸಂಬಂಧಿಸಿದಂತೆ ರಾಣಾ ಕಪೂರ್ ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ ಎಂದು ಇಡಿ ತಿಳಿಸಿದೆ. ಅಕ್ರಮ ಹಣ ವಹಿವಾಟು ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ಕಪೂರ್ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದೆ. ರಾಣಾ […]

ದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾದ ಸಿಎಂ ಯಡಿಯೂರಪ್ಪ

Saturday, March 7th, 2020
rajnath-singh

ನವದೆಹಲಿ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಮಗನ ಮದುವೆಗಾಗಿ ದೆಹಲಿಗೆ ಆಗಮಿಸಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದರು. ರಾಜನಾಥ್ ಸಿಂಗ್ ಅವರ ನಿವಾಸಕ್ಕೆ ತೆರಳಿದ ಸಿಎಂ ಬಿಎಸ್ವೈ, 2021ರ ಏರೋ‌ ಇಂಡಿಯಾ ಶೋಅನ್ನು ಬೆಂಗಳೂರಿನಲ್ಲೇ ನಡೆಸುವಂತೆ ರಕ್ಷಣಾ ಸಚಿವರಲ್ಲಿ ಮನವಿ ಮಾಡಿದರು. ಹಾಗೆಯೇ, ವೆಲ್ಲಾರ ಜಂಕ್ಷನ್ನಲ್ಲಿ ಅವಶ್ಯಕತೆ ಇರುವ ರಕ್ಷಣಾ ಇಲಾಖೆಯ ಭೂಮಿಯನ್ನು ನಮ್ಮ ಮೆಟ್ರೋಗೆ ಹಸ್ತಾಂತರ ಮಾಡಬೇಕು ಅಂತ‌ ಮನವಿ ಮಾಡಿದರು. ಸಿಎಂ ಮನವಿಗೆ […]

ಯೆಸ್ ಬ್ಯಾಂಕ್ ಹೂಡಿಕೆದಾರರ ಹಣ ಸುರಕ್ಷಿತವಾಗಿದೆ : ಆತಂಕ ಬೇಡ; ನಿರ್ಮಲಾ ಸೀತಾರಾಮನ್ ಭರವಸೆ

Friday, March 6th, 2020
nirmala-seetharaman

ನವದೆಹಲಿ : ಸಂಕಷ್ಟಕ್ಕೆ ಸಿಲುಕಿರುವ ಯೆಸ್ ಬ್ಯಾಂಕ್ ಹೂಡಿಕೆದಾರರ ಹಣ ಸುರಕ್ಷಿತವಾಗಿ. ಇದರಿಂದ ಯಾವ ಹೂಡಿಕೆದಾರರು ಆತಂಕಕ್ಕೆ ಒಳಗಾಗುವುದು ಬೇಡ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ನಿರ್ಮಲಾ ಸೀತಾರಾಮನ್, ಈ ಸಮಸ್ಯೆಯನ್ನು ಶೀಘ್ರದಲ್ಲೇ ಪರಿಹರಿಸುವುದಾಗಿ ಆರ್ಬಿಐ ಗವರ್ನರ್ ನನಗೆ ಹೇಳಿದ್ದಾರೆ. ಆರ್ಬಿಐ ಮತ್ತು ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯನಿರತವಾಗಿದೆ. ಆರ್ಬಿಐ ಜೊತೆಗೆ ನಾನು ನಿರಂತರ ಸಂಪರ್ಕದಲ್ಲಿದ್ದು, ಮುಂದಿನ ಕೆಲವು ತಿಂಗಳುಗಳ ಕಾಲ ನಾನೇ ಖುದ್ದಾಗಿ ಆರ್ಬಿಐ ಜೊತೆಗೆ ಪರಿಸ್ಥಿತಿಯನ್ನು […]

ತಲೆಮರೆಸಿಕೊಂಡಿದ್ದ ತಾಹಿರ್‌ ಹುಸೇನ್‌ ದೆಹಲಿ ಪೊಲೀಸರ ವಶಕ್ಕೆ

Friday, March 6th, 2020
tahin-husen

ನವದೆಹಲಿ : ತಲೆಮರೆಸಿಕೊಂಡಿದ್ದ ಆಮ್‌ ಆದ್ಮಿ ಪಾರ್ಟಿಯ ಉಚ್ಚಾಟಿತ ನಾಯಕ ತಾಹಿರ್‌ ಹುಸೇನ್‌ರನ್ನು ದೆಹಲಿ ಪೊಲೀಸರು ಗುರವಾರ ಬಂಧಿಸಿದ್ದಾರೆ. ಗುಪ್ತಚರ ಇಲಾಖೆಯ ಸಿಬ್ಬಂದಿ ಅಂಕಿತ್‌ ಶರ್ಮಾರ ಹತ್ಯೆ ಪ್ರಕರಣದಲ್ಲಿ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ತಾಹಿರ್‌, ಗುರುವಾರ ನ್ಯಾಯಾಲಯದ ಮುಂದೆ ಹಾಜರಾಗಿ ತಾವು ಕೋರ್ಟ್‌ ಸಮ್ಮುಖದಲ್ಲಿ ಶರಣಾಗುವುದಾಗಿ ಕೇಳಿಕೊಂಡಿದ್ದರು. ಇವರ ಅರ್ಜಿಯ ವಿಚಾರಣೆ ನಡೆಸಿದ ದೆಹಲಿಯ ಹೆಚ್ಚುವರಿ ಮೆಟ್ರೋಪಾಲಿಟನ್‌ ಕೋರ್ಟ್‌ನ ಮುಖ್ಯ ನ್ಯಾಯಾಧೀಶ ವಿಶಾಲ್‌ ಪಹುಜಾ, ಅರ್ಜಿಯನ್ನು ವಜಾಗೊಳಿಸಿದರು. ಈ ಹಿನ್ನೆಲೆಯಲ್ಲಿ, ಪೊಲೀಸರು ತಾಹಿರ್‌ರನ್ನು ಬಂಧಿಸಿದ್ದಾರೆ. ಅರ್ಜಿ […]

ಮಾರ್ಚ್ 20ರಂದು ನಾಲ್ವರು ನಿರ್ಭಯಾ ಅತ್ಯಾಚಾರಿಗಳನ್ನು ಗಲ್ಲಿಗೇರಿಸಲು ದೆಹಲಿ ನ್ಯಾಯಾಲಯ ಆದೇಶ

Thursday, March 5th, 2020
Nirbhaya-case

ನವದೆಹಲಿ : ನಿರ್ಭಯಾ ಅತ್ಯಾಚಾರ ಪ್ರಕರಣದ ನಾಲ್ವರು ಆಪಾದಿತರನ್ನು ಇದೇ ತಿಂಗಳ 20ರಂದು ಮುಂಜಾನೆ 5.30ಕ್ಕೆ ಗಲ್ಲಿಗೇರಿಸುವಂತೆ ದೆಹಲಿ ನ್ಯಾಯಾಲಯ ಮತ್ತೆ ಡೆತ್ ವಾರೆಂಟ್ ಹೊರಡಿಸಿದೆ. ಈ ಮೊದಲು ಮಾರ್ಚ್ 2ರಂದು ಆಪಾದಿತರನ್ನು ಗಲ್ಲಿಗೇರಿಸಲು ದಿನಾಂಕ ನಿಗದಿಯಾಗಿತ್ತು. ಆದರೆ, ಅದರ ಹಿಂದಿನ ದಿನ ದೆಹಲಿ ನ್ಯಾಯಾಲಯ ಗಲ್ಲು ಶಿಕ್ಷೆಗೆ ತಡೆ ನೀಡಿ ಆದೇಶ ನೀಡಿತ್ತು. ಹೀಗಾಗಿ ಅಪರಾಧಿಗಳನ್ನು ಬಿಗ್ ರಿಲೀಫ್ ಪಡೆದುಕೊಂಡಿದ್ದರು. ಇದೀಗ ಮತ್ತೆ ಅತ್ಯಾಚಾರ ಆರೋಪಿಗಳನ್ನು ಮಾರ್ಚ್ 20ರಂದು ಗಲ್ಲಿಗೇರಿಸುವಂತೆ ದೆಹಲಿ ನ್ಯಾಯಾಲಯ ಹೊಸದಾಗಿ ಡೆತ್ […]

ಭಾರತದಲ್ಲಿ ಮುಂದುವರಿದ ಕೊರೋನಾ ಸೋಂಕು : ಸೋಂಕಿತರ ಸಂಖ್ಯೆ 29ಕ್ಕೆ ಏರಿಕೆ

Thursday, March 5th, 2020
virus

ನವದೆಹಲಿ : ಚೀನಾದಲ್ಲಿ ಮಹಾಮಾರಿಯಾಗಿ ಹಬ್ಬಿರುವ ಕೊರೋನಾ ವೈರಸ್ ಭಾರತಕ್ಕೂ ಕಾಲಿಟ್ಟಿದೆ. ಈಗಾಗಲೇ 29 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ, ಭಾರತದಲ್ಲಿ ಇದುವರೆಗೂ ಈ ಮಾರಣಾಂತಿಕ ವೈರಸ್ಗೆ ಬಲಿಯಾಗಿರುವ ಯಾವುದೇ ಪ್ರಕರಣ ದಾಖಲಾಗಿಲ್ಲ. ದೇಶದಲ್ಲಿ ಕೊರೋನಾ ವೈರಸ್ ಭೀತಿ ಹೆಚ್ಚಾಗಿರುವುದರಿಂದ ದೆಹಲಿಯ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳನ್ನು ಒಂದೇಕಡೆ ಸೇರಿಸುವುದನ್ನು ನಿರ್ಬಂಧಿಸಲಾಗಿದೆ. ಆದಷ್ಟು ಗುಂಪುಗೂಡುವುದನ್ನು ಕಡಿಮೆ ಮಾಡಲು ಸೂಚನೆ ನೀಡಲಾಗಿದೆ. ಒಂದುವೇಳೆ ಮಕ್ಕಳಲ್ಲಿ ಕೆಮ್ಮು, ಕಫ, ಉಸಿರಾಟದ ತೊಂದರೆ, ಜ್ವರದ ಲಕ್ಷಣಗಳು ಕಾಣಿಸಿದರೆ ತಕ್ಷಣ ವೈದ್ಯರ ಬಳಿ […]

ಭಾರತಕ್ಕೆ ಆಗಮಿಸಿರುವ 21 ಇಟಲಿ ಪ್ರವಾಸಿಗರಲ್ಲಿ 15 ಮಂದಿಗೆ ಕೊರೊನಾ ವೈರಸ್​ ಪತ್ತೆ

Wednesday, March 4th, 2020
itali

ನವದೆಹಲಿ : ಭಾರತಕ್ಕೆ ಆಗಮಿಸಿರುವ 15 ಮಂದಿ ಇಟಲಿ ಪ್ರವಾಸಿಗರಲ್ಲಿ ಕೊರೊನಾ ವೈರಸ್ ಇರುವುದು ವೈದ್ಯಕೀಯ ಪರೀಕ್ಷೆಯಿಂದ ಧೃಡಪಟ್ಟಿರುವುದಾಗಿ ದೆಹಲಿಯ ಏಮ್ಸ್ ಆಸ್ಪತ್ರೆ ಬುಧವಾರ ಖಚಿತಪಡಿಸಿದೆ. ಎಲ್ಲ 15 ಇಟಲಿ ಪ್ರವಾಸಿಗರನ್ನು ದೆಹಲಿಯ ಚಾವ್ಲಾ ಏರಿಯದಲ್ಲಿರುವ ಇಂಡೋ-ಟಿಬೆಟನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಶಿಬಿರದಲ್ಲಿ ಬಂಧಿಸಲಾಗಿದ್ದು, ಏಮ್ಸ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟು 21 ಮಂದಿ ಇಟಲಿ ಪ್ರವಾಸಿಗರು ಭಾರತಕ್ಕೆ ಆಗಮಿಸಿದ್ದರು. ಅದರಲ್ಲಿ 15 ಮಂದಿಗೆ ಪಾಸಿಟಿವ್ ಕೊರೊನಾ ವೈರಸ್ ಪತ್ತೆಯಾಗಿದೆ. ನಿನ್ನೆ ಮಧ್ಯಾಹ್ನದಿಂದ ಪ್ರತ್ಯೇಕವಾಗಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ […]