ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ನಿಶ್ಚಿತಾರ್ಥ

Monday, February 10th, 2020
nikil

ಬೆಂಗಳೂರು : ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ನಿಶ್ಚಿತಾರ್ಥ ಇಂದು ಬೆಂಗಳೂರಿನ ತಾಜ್ ವೆಸ್ಟ್ ಹೋಟೆಲ್‌ನಲ್ಲಿ ಶಾಸ್ತ್ರೋಕ್ತವಾಗಿ ನಡೆದಿದೆ. ಈ ನಿಶ್ಚಿತಾರ್ಥಕ್ಕೆ ಅನಿತಾ ಕುಮಾರಸ್ವಾಮಿ ಸಹೋದರಿಯರಾದ ಶೈಲಜಾ ಮತ್ತು ಅನುಸೂಯ, ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಮಾರ್ಗದರ್ಶನದಲ್ಲಿ ಎಲ್ಲ ತಯಾರಿಗಳು ನಡೆದಿವೆ. ತಾಜ್‌ ವೆಸ್ಟ್‌ನ ಪೂರ್ವ ದಿಕ್ಕಿಗೆ ಇರುವ ವೆಸ್ಟೆಂಡ್‌ ಕೋರ್ಟ್‌ನಲ್ಲಿ ಈ ಕಾರ್ಯಕ್ರಮ ನಡೆಯುತ್ತದೆ. ತಾಜ್‌ ವೆಸ್ಟೆಂಡ್‌ ಹೊಟೇಲ್‌ನಲ್ಲಿರುವ ಮರಗಿಡಗಳ ನಡುವೆ ನಿಶ್ಚಿತಾರ್ಥ ನಡೆಯಬೇಕು ಎಂಬುದು ನಿಖಿಲ್‌ಕುಮಾರ್‌ ಅವರ ಆಸೆಯಾಗಿತ್ತು. ನಿಶ್ಚಿತಾರ್ಥ ಸಂಪೂರ್ಣ ವೈಟ್‌ ಥೀಮ್‌ನಲ್ಲಿ […]

ಮಡಿಕೇರಿ : ಪ್ರವಾಸಿ ಬಸ್ ಮಿನಿ ಲಾರಿಗೆ ಡಿಕ್ಕಿ

Monday, February 10th, 2020
accident

ಮಡಿಕೇರಿ : ಮಡಿಕೇರಿಯಿಂದ ಮೈಸೂರಿಗೆ ತೆರಳುತ್ತಿದ್ದ ಪ್ರವಾಸಿ ಬಸ್ಸೊಂದು ಮಿನಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಲಾರಿ ಮುಂಭಾಗದ ಕಾರಿಗೆ ಡಿಕ್ಕಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿಯ ಸುಂಟಿಕೊಪ್ಪದ 7ನೇ ಮೈಲು ಬಳಿಯಲ್ಲಿ ನಡೆದಿದೆ. ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಗೆ ಡಿಕ್ಕಿಯಾದ ಪ್ರವಾಸಿ ಬಸ್ ನಂತರ ಬರೆಗೆ ಡಿಕ್ಕಿ ಹೊಡೆದು ನಿಂತಿದೆ. ಲಾರಿ ಅಳಿಕೆಯಿಂದ ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾರಿಗೂ ತೀವ್ರ ಗಾಯಗಳಾಗಿಲ್ಲ. ಅಪಘಾತದಿಂದ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ […]

ಸಕಾರಾತ್ಮಕ ಚಿಂತನೆಗಳಿಂದ ಮನುಷ್ಯ ಯಶಸ್ಸು ಕಾಣಲು ಸಾಧ್ಯ : ರಾಜಯೋಗಿನಿ ಬಿ.ಕೆ. ಶಿವಾನಿ

Monday, February 10th, 2020
shivani

ಮಂಗಳೂರು : ಸಂತೃಪ್ತಿಯ ಸಾರ್ಥಕ ಜೀವನಕ್ಕೆ  ಸಕಾರಾತ್ಮಕ ಚಿಂತನೆ ಗಳು, ಸಂತೋಷ, ಆರೋಗ್ಯ, ಆತ್ಮಶಕ್ತಿ ಕಾರಣ ವಾಗುತ್ತವೆ ಮತ್ತು ಸುಂದರ ಪರಿಸರ ಮತ್ತು ಸಮಾಜಕ್ಕೆ ಪೂರಕವಾಗುತ್ತದೆ ಎಂದು ಪ್ರಸಿದ್ಧ ವಾಗ್ಮಿ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾನಿಲಯದ ರಾಜಯೋಗಿನಿ ಬಿ.ಕೆ. ಶಿವಾನಿ ಹೇಳಿದರು. ಅವರು ರವಿವಾರ ನಗರದ ಟಿ.ಎಂ.ಎ. ಪೈ ಇಂಟರ್‌ನ್ಯಾಶನಲ್‌ ಕನ್ವೆನ್ಶನ್‌ ಸೆಂಟರ್‌ನಲ್ಲಿ ಆರೋಗ್ಯ, ಸಂತೋಷ ಮತ್ತು ಸಾಮರಸ್ಯ (ಹೆಲ್ತ್‌, ಹ್ಯಾಪಿನೆಸ್‌ ಆ್ಯಂಡ್‌ ಹಾರ್ಮನಿ) ವಿಚಾರದಲ್ಲಿ ಉಪನ್ಯಾಸ ನೀಡಿದರು. ಮನುಷ್ಯನ ಚಿಂತನೆಗಳು ಆತನ ಜೀವನಕ್ರಮವನ್ನು ನಿರ್ಧರಿಸುತ್ತವೆ, ನಕಾರಾತ್ಮಕ ಚಿಂತನೆಗಳು […]

ಕಾರಿಂಜ : ಸ್ನಾನಕ್ಕೆ ಇಳಿದಿದ್ದ ಯುವಕ ಕೆರೆಯಲ್ಲಿ ಮುಳುಗಿ ಮೃತ್ಯು

Monday, February 10th, 2020
karinja

ಬಂಟ್ವಾಳ : ಸ್ನಾನಕ್ಕೆ ಇಳಿದಿದ್ದ ಯುವಕನೋರ್ವ ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಕಾರಿಂಜದಲ್ಲಿ ನಡೆದಿದೆ. ಕಡ್ತಲಬೆಟ್ಟು ನಿವಾಸಿ ಸುಕೇಶ್ (25) ಮೃತ ಯುವಕ. ಮಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸುಕೇಶ್ ಅವರು ತನ್ನಿಬ್ಬರು ಸ್ನೇಹಿತರೊಂದಿಗೆ ರಜಾದ ಹಿನ್ನೆಲೆಯಲ್ಲಿ ಕಾರಿಂಜ ಕ್ಷೇತ್ರಕ್ಕೆ ಭಾನುವಾರ ಸಂಜೆ ಆಗಮಿಸಿದ್ದರು. ಈ ಸಂದರ್ಭ ಸ್ನಾನಕ್ಕಿಳಿದ ವೇಳೆ ಕೆರೆಯ ಆಳ ತಿಳಿಯದೆ ಮುಳುಗಿದ್ದಾರೆ. ಸ್ನೇಹಿತರು ಮತ್ತು ಸ್ಥಳೀಯರು ಕೂಡಲೇ ಅಗ್ನಿ ಶಾಮಕದಳಕ್ಕೆ ಮತ್ತು ಪೊಲೀಸರಿಗೆ ಕರೆ ಮಾಡಿದ್ದರು. […]

ಮಾಲ್ದಾರೆ ಹಂಚಿತಿಟ್ಟು ಗ್ರಾಮದಲ್ಲಿ ಕಾಡಾನೆ ದಾಳಿಗೆ ಬೆಳೆಗಾರ ಬಲಿ

Monday, February 10th, 2020
kaadane

ಮಡಿಕೇರಿ : ಕಾಡಾನೆ ದಾಳಿಯಿಂದ ಬೆಳೆಗಾರರೊಬ್ಬರು ದಾರುಣವಾಗಿ ಮೃತ ಪಟ್ಟಿರುವ ಘಟನೆ ವಿರಾಜಪೇಟೆ ತಾಲೂಕಿನ ಮಾಲ್ದಾರೆ ಸಮೀಪ ಹಂಚಿತಿಟ್ಟು ಗ್ರಾಮದಲ್ಲಿ ನಡೆದಿದೆ. ಅವರೆಗುಂದ ಗ್ರಾಮದ ನಿವಾಸಿ ಪೆಮ್ಮಯ್ಯ(68) ಎಂಬುವವರೇ ಕಾಡಾನೆ ದಾಳಿಗೆ ಬಲಿಯಾದ ದುರ್ದೈವಿಯಾಗಿದ್ದಾರೆ. ಮಾಲ್ದಾರೆ ಹಂಚಿತಿಟ್ಟು ಮಾರ್ಗದ ರಸ್ತೆ ಬದಿಯಲ್ಲಿ ಮೃತದೇಹ ಕಂಡ ಸ್ಥಳೀಯರು ತಕ್ಷಣ ಅರಣ್ಯ ಇಲಾಖೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂದರ್ಭ ಕಾಡಾನೆ ದಾಳಿ ಮಾಡಿರುವುದು ಖಾತ್ರಿಯಾಯಿತು. ಎದೆ, ತಲೆ ಹಾಗೂ ಕಾಲಿನ ಭಾಗಕ್ಕೆ […]

ಶ್ರದ್ಧಾ ಭಕ್ತಿಯಿಂದ ನಡೆಯುತ್ತಿರುವ ಲಿಂಗರೂಪಿ ಶ್ರೀದುರ್ಗಾ ಭಗವತಿ ದೇವಾಲಯದ ಬ್ರಹ್ಮ ಕಲಶೋತ್ಸವ

Monday, February 10th, 2020
madikeri

ಮಡಿಕೇರಿ : ತಾಳತ್ತಮನೆಯ ಪುರಾತನ ಲಿಂಗರೂಪಿ ಶ್ರೀದುರ್ಗಾ ಭಗವತಿ ದೇವಾಲಯದ ಪುನರ್ ಪ್ರತಿಷ್ಠಾಪನೆ ಹಾಗೂ ಬ್ರಹ್ಮ ಕಲಶೋತ್ಸವ ಪ್ರಯುಕ್ತ ದೇವರಿಗೆ ಗಣಪತಿ ಹೋಮ, ಪ್ರೋಕ್ತಹೋಮ, ಪ್ರಾಯಶ್ಚಿತ ಹೋಮ, ಬಿಂಬ ಶುದ್ಧಿ, ಅಂಕುರ ಪೂಜೆ ಶ್ರದ್ಧಾಭಕ್ತಿಯಿಂದ ಜರುಗಿತು. ಮಧ್ಯಾಹ್ನ ಮಹಾಪೂಜೆ ನಂತರ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಿತು. ಸಂಜೆ ಸುಳ್ಯದ ಧರ್ಮಾರಣ್ಯದ ಶ್ರೀ ಗುರು ಗಣಪತಿ ಭಕ್ತಜನ ಭಜನಾ ಮಂಡಳಿಯಿಂದ ಭಜನೆ, ಅರಂತೋಡು ಮಲ್ಲಿಕಾರ್ಜುನಾ ದೇವಸ್ಥಾನದ ಪ್ರಧಾನ ಅರ್ಚಕರಾದ ಕೇಶವಮೂರ್ತಿ ಅವರು ಉಪನ್ಯಾಸ ನೀಡಿದರು. ರಾತ್ರಿ ಮೈಸೂರಿನ ಸುಮಂತ್ ವಸಿಷ್ಠ […]

ಮಂಗಳೂರಿನಲ್ಲಿ ಜಿಲ್ಲಾ ಹಿಂದೂ ಮಟ್ಟದ ಹಿಂದೂ ರಾಷ್ಟ್ರ ಅಧಿವೇಶನ ಭಾವಪೂರ್ಣ ವಾತಾವರಣದಲ್ಲಿ ಸಂಪನ್ನವಾಯಿತು

Monday, February 10th, 2020
hindhu janajagruti

ಮಂಗಳೂರು : “ಆಧ್ಯಾತ್ಮಿಕ ಸಾಧನೆಯ ಬಲದಿಂದ ಹಿಂದೂ ರಾಷ್ಟ್ರದ ಶಿವಧನಸ್ಸನ್ನು ಎತ್ತಲು ಸಾಧ್ಯ‌.” ಎಂದು ಧರ್ಮ ಪ್ರಸಾರಕಿ, ಸನಾತನ ಸಂಸ್ಥೆ ಸೌ.ಮಂಜುಳಾ ಗೌಡ ರವರು ಹೇಳಿದರು. ಸೌ.ಮಂಜುಳಾ ಗೌಡ ಇವರು ಮಾತನಾಡಿ ” ಮನುಷ್ಯ ಜನ್ಮದ ಸಾರ್ಥಕತೆ ಈಶ್ವರ ಪ್ರಾಪ್ತಿ ಯಾಗಿದೆ‌ ಅದಕ್ಕಾಗಿ ಮಾಡುವುದಕ್ಕೆ ಸಾಧನೆ ಎನ್ನುತ್ತಾರೆ. ಹಿಂದೂ ರಾಷ್ಟ್ರದ ಸ್ಥಾಪನೆ ಮಾಡಲು ಸಾಧನೆಯ ಅವಶ್ಯಕತೆ ಇದೆ‌‌.ಇದಕ್ಕಾಗಿ ಭಗವಂತನ ಕೃಪೆ ಮತ್ತು ಸಾಧನೆಯು ಅವಶ್ಯಕ. ಸಾಧನೆಯನ್ನು ಮಾಡಿ ಧರ್ಮಾಭಿಮಾನವನ್ನು ಹೆಚ್ಚಿಸಬೇಕು‌.ಭಗವಂತ ಧರ್ಮಸಂಸ್ಥಾಪನೆಗಾಗಿ ಅವತಾರ ತಾಳುತ್ತಾರೆ.ಹಾಗಾಗಿ ಹಿಂದೂ ರಾಷ್ಟ್ರ […]

“ಹಿಂದೂ ಧರ್ಮವು ಜೀವನದ ಅಂಗವಾಗಬೇಕು ” : ಸೌ.ವಿದ್ಯಾಲಕ್ಮೀ, ಶ್ರೀ ರಾಮ ಚಂದ್ರಾಪುರ ಮಠ

Monday, February 10th, 2020
hindhu-janajagruti

ಮಂಗಳೂರು : ಸನಾತನ ಹಿಂದೂ ಧರ್ಮವೆಂದರೆ ಅವಿನಾಶಿ ಮತ್ತು ಅಜರಾಮರವೇ ಆಗಿದೆ. ಹಿಂದೂ ಧರ್ಮವು ಜೀವನದ ಅಂಗವಾಗಿದೆ.ಹಿಂದೂ ಧರ್ಮವು ಎಲ್ಲಾ ಜೀವಿಗಳಲ್ಲಿಯೂ ದೇವರನ್ನು ಕಾಣುವ ಅತ್ಯಂತ ಶ್ರೇಷ್ಠ ಧರ್ಮವಾಗಿದೆ‌.ಇಂದು ಇಂದಿನ ಪೀಳಿಗೆಗೆ ಧರ್ಮಶಿಕ್ಷಣವನ್ನು ನೀಡಬೇಕಾಗಿದೆ ಉಡುಪುಗಳಾಗಿರಲಿ, ಉತ್ಸವಗಳಾಗಿರಲಿ ಪಾಶ್ಚಾತ್ಯರಂತೆ ಅಲ್ಲ ಹಿಂದೂ ಧರ್ಮದಂತೆ ಆಚರಿಸಿ ಧರ್ಮದ ರಕ್ಷಣೆಯನ್ನು ಮಾಡಿ ಎಂದು  ಸೌ.ವಿದ್ಯಾಲಕ್ಮೀ ರವರು ವಿಚಾರವನ್ನು ಮಂಡಿಸಿದರು. “ಭಾರತವು ವಿಶ್ವಗುರುವಾಗ ಬೇಕಾದರೆ 4ಜಿ ಬಲಿಷ್ಠವಾಗಬೇಕು !(ಗೋವು, ಗ್ರಾಮ, ಗಂಗೆ, ಗುರುಕುಲ)”ಎಂದು ನ್ಯಾ‌. ಚಂದ್ರಶೇಖರ ರಾವ್ ರವರು ಹೇಳಿದರು. ನ್ಯಾಯವಾದಿಗಳಾದ ಶ್ರೀ.ಚಂದ್ರಶೇಖರ್ ರಾವ್ […]

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸವಿದೆ : ಸಂಸದೆ ಶೋಭಾ ಕರಂದ್ಲಾಜೆ

Saturday, February 8th, 2020
shobha

ಚಿಕ್ಕಮಗಳೂರು : ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸವಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದರು. ಶನಿವಾರ ನಗರಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಅಶಾಂತಿ ಸೃಷ್ಟಿಸಿ ಕೇಂದ್ರ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಹುನ್ನಾರ ನಡೆಸುತ್ತಿದೆ ಎಂದರು. ದೆಹಲಿ ಶಾಹಿನ್ ಬಾಗ್ ನಲ್ಲಿ ನಡೆಯುತ್ತಿರುವಪೌರತ್ವ ಕಾಯ್ದೆ ವಿರೋಧಿಸಿ ನಡೆಸುತ್ತಿರುವ ಹೋರಾಟಕ್ಕೆ ಜನರನ್ನು ಹಣ ಕೊಟ್ಟು ಕರೆ ತಂದಿದ್ದಾರೆ ಎಂದರು. ಜಿಲ್ಲೆಯಲ್ಲಿ ಕರೊನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮ […]

ಭೀಕರ ಅಪಘಾತ : ಸೇತುವೆ ಮೇಲಿಂದ ಟ್ರ್ಯಾಕ್ಟರ್ ಪಲ್ಟಿ; ಆರು ಜನ ದುರ್ಮರಣ

Saturday, February 8th, 2020
belagavi

ಬೆಳಗಾವಿ : ಕೂಲಿ ಕೆಲಸಕ್ಕೆ ಕಾರ್ಮಿಕರನ್ನು ತುಂಬಿಕೊಂಡು ಹೊರಟಿದ್ದ ಟ್ರ್ಯಾಕ್ಟರ್ ಒಂದು ಬೋಗೂರ ಗ್ರಾಮದ ಬಳಿಯ ಸೇತುವೆ ಮೇಲಿಂದ ಪಲ್ಟಿಯಾಗಿ ಬಿದ್ದು ಸುಮಾರು ಆರು ಜನ‌ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಬೋಗೂರ ಗ್ರಾಮದ ಸಾವಿತ್ರಿ ಬಾಬು ಹುಣಸಿಕಟ್ಟಿ, ತಂಗೆವ್ವ ಯಲ್ಲಪ್ಪ ಹುಣಸೀಕಟ್ಟಿ, ಅಶೋಕ ಫಕೀರ ಕೇದಾರಿ, ಶಾಂತಮ್ಮ ಯಲ್ಲಪ್ಪ ಜುಂಜರಿ, ಶಾಂತವ್ವ ಹನುಮಂತ ಅಳಗುಂಡಿ, ನಾಗವ್ವ ಯಶವಂತ ಮಾಠೋಳ್ಳಿ ಮೃತಪಟ್ಟವರು. ಖಾನಾಪುರ ತಾಲೂಕಿನ ಬೋಗೂರ ಗ್ರಾಮದಿಂದ ಕಾರ್ಮಿಕರು ಕೂಲಿ […]