ಪತ್ರಕರ್ತರಿಗೆ ನಿವೇಶನ ನೀಡಲು ತಕ್ಷಣ ಕ್ರಮ : ಭರವಸೆ ನೀಡಿದ ಆರ್.ಅಶೋಕ್

Tuesday, October 22nd, 2019
R-Ashok

ಮಂಗಳೂರು : ಪತ್ರಕರ್ತರಿಗೆ ನಿವೇಶನ ನೀಡಲು ಸರಕಾರ ತಕ್ಷಣ ಕ್ರ‌ಮ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಭರವಸೆ ನೀಡಿದ್ದಾರೆ. ಪತ್ರಕರ್ತರಿಗೆ ನಿವೇಶನ ಒಸಗಿಸುವುದಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಸಚಿವರು ಪತ್ರಕರ್ತರಿಗೆ ನಿವೇಶನ ನೀಡುವ ಕುರಿತು ಬೆಂಗಳೂರಿನಿಂದಲೂ ಮನವಿ ಬಂದಿದ್ದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಈ ಸಂದರ್ಭದಲ್ಲಿ ಶಾಸಕರಾದ […]

ಸೂರಲ್ಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಎನ್ನೆಸ್ಸಸ್ ಶಿಬಿರ ಸಮಾರೋಪ

Tuesday, October 22nd, 2019
NSS

ಮಂಗಳೂರು : ವಿದ್ಯಾರ್ಥಿದೆಸೆಯಿಂದಲೇ ಮಕ್ಕಳಿಗೆ ನಾಯಕತ್ವ ಗುಣ, ಕೂಡಿಬಾಳುವುದು, ಸಾಮರಸ್ಯದ ಪ್ರಜ್ಞೆಯನ್ನು ಮೂಡಿಸುವ ನಿಟ್ಟಿನಲ್ಲಿ ಶಿಕ್ಷಣ. ಇಲಾಖೆಯ ನಿರ್ದೇಶನದಂತೆ ಸೈಂಟ್ ರೈಮಂಡ್ಸ್ ಪದವಿ ಪೂರ್ವ ಕಾಲೇಜು ವಾಮಂಜೂರು ಇದರ 7 ದಿನಗಳ ವಾರ್ಷಿಕ ವಿಶೇಷ ಶಿಬಿರವು ಶುಭದ ಸಂಸ್ಥೆಯ ಸಹಯೋಗದೊಂದಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೂರಲ್ಪಾಡಿಯಲ್ಲಿ ನಡೆದು ಸಮಾರೋಪಗೊಂಡಿತು. ಸಮರೋಪ ಸಮಾರಂಭದ ಅಧ್ಯಕ್ಷತೆಯನ್ನು ಶುಭದ ಸಂಸ್ಥೆಯ ನಿರ್ದೇಶಕರಾದ ವಂ| ಭಗಿನಿ ಲೀನಾ ಪಿರೇರಾರವರು ವಹಿಸಿ, ವ್ಯಕ್ತಿತ್ವ ವಿಕಸನದೊಂದಿಗೆ ಮೌಲ್ಯಾಧಾರಿತ ಶಿಕ್ಷಣ ನೀಡುವಲ್ಲಿ ಎನ್ನೆಸ್ಸಸ್ ಸಹಾಯಕ ಎಂದರು. […]

ಮೈಸೂರು : ಜಿಂಕೆ ಬೇಟೆಯಾಡಿ ಮಾಂಸ ಮಾರಾಟ – ಆರೋಪಿ ಪರಾರಿ

Tuesday, October 22nd, 2019
deer meat

ಮೈಸೂರು : ನಾಗರಹೊಳೆ ಉದ್ಯಾನದ ಹುಣಸೂರು ವಲಯದಲ್ಲಿ ಜಿಂಕೆ ಬೇಟೆಯಾಡಿ ಮಾಂಸ ಮಾರಾಟ ಮಾಡುತ್ತಿದ್ದ ವೇಳೆ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿ ಮಾಂಸ ಹಾಗೂ ತಕ್ಕಡಿಯನ್ನು ವಶಕ್ಕೆ ಪಡೆದಿದ್ದು, ಆರೋಪಿ ಪರಾರಿಯಾದ ಘಟನೆ ನಡೆದಿದೆ. ನಾಗರಹೊಳೆ ಉದ್ಯಾನದಂಚಿನ ಪಿರಿಯಾಪಟ್ಟಣ ತಾಲೂಕಿನ ಬೂತನಹಳ್ಳಿಯ ಶಿವಣ್ಣ ಅವರ ಪುತ್ರ ಅಭಿಲಾಷ್‌ ಕುಮಾರ್‌ ತಂಬಾಕು ಹದ ಮಾಡುವ ಬ್ಯಾರನ್‌ನಲ್ಲಿ ಜಿಂಕೆ ಮಾಂಸ ಪತ್ತೆಯಾಗಿದೆ. ಖಚಿತ ಮಾಹಿತಿ ಮೇರೆಗೆ ಹುಣಸೂರು ವಲಯದ ಆರ್‌ಎಫ್‌ಒ ಹನುಮಂತರಾಜು ನೇತೃತ್ವದಲ್ಲಿ ಸಿಬ್ಬಂದಿ ದಾಳಿ ನಡೆಸಿದ ವೇಳೆ […]

ಉಡುಪಿ : ಬ್ಯಾಂಕ್‌ಗಳ ವಿಲೀನ ಕೇಂದ್ರ ಸರಕಾರದ ನಿರ್ಧಾರವನ್ನು ವಿರೋಧಿಸಿ; ಬ್ಯಾಂಕ್ ನೌಕರರಿಂದ ಮುಷ್ಕರ

Tuesday, October 22nd, 2019
Udupi-bank-mushkara

ಉಡುಪಿ : ಬ್ಯಾಂಕ್‌ಗಳ ವಿಲೀನೀಕರಣಗೊಳಿಸಿರುವ ಕೇಂದ್ರ ಸರಕಾರದ ನಿರ್ಧಾರವನ್ನು ವಿರೋಧಿಸಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ ಮತ್ತು ಬ್ಯಾಂಕ್ ಎಂಪ್ಲಾಯಿಸ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಘಟಕಗಳ ನೇತೃತ್ವದಲ್ಲಿ ಮಂಗಳವಾರ ಕಾರ್ಪೊರೇಶನ್ ಬ್ಯಾಂಕ್ ಉಡುಪಿ ವಲಯ ಕಚೇರಿ ಎದುರು ಹಮ್ಮಿಕೊಳ್ಳಲಾದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು. ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಬ್ಯಾಂಕ್‌ಗಳನ್ನು ವಿಲೀನ ಮಾಡುವ ಮೂಲಕ ಬ್ಯಾಂಕ್‌ಗಳನ್ನು ಮುಚ್ಚುವ ಹುನ್ನಾರ ನಡೆಸಲಾಗುತ್ತಿದೆ ಎಂದು ಉಡುಪಿ ಕಾರ್ಪೊರೇಶನ್ ಬ್ಯಾಂಕ್ ನೌಕರರ ಸಂಘದ ಉಪಾಧ್ಯಕ್ಷ ರಘುರಾಮಕೃಷ್ಣ ಬಲ್ಲಾಳ್ […]

ಐಎನ್ ಎಕ್ಸ್ ಮೀಡಿಯಾ ಪ್ರಕರಣ : ಪಿ ಚಿದಂಬರಂಗೆ ಸುಪ್ರೀಂ ಕೋರ್ಟ್ ಜಾಮೀನು

Tuesday, October 22nd, 2019
P.-Chidambaram

ನವದೆಹಲಿ : ಐಎನ್ ಎಕ್ಸ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐನಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಮಾಜಿ ಸಚಿವ ಪಿ ಚಿದಂಬರಂ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಲಾಗಿದೆ. ಸಿಬಿಐ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿದಂಬರಂಗೆ ಜಾಮೀನು ಸಿಕ್ಕಿದ್ದರೂ ಅವರು ಜಾರಿ ನಿರ್ದೇಶನಾಲಯದ ವಶದಲ್ಲಿರುವ ಕಾರಣ ಅವರು ತಿಹಾರ್ ಜೈಲಿನಲ್ಲೇ ಮುಂದುವರಿಯಬೇಕಾಗಿದೆ. ಸಿಬಿಐ ತಮ್ಮ ಮೇಲೆ ದಾಖಲಿಸಿರುವ ಪ್ರಕರಣದಲ್ಲಿ ಜಾಮೀನು ನೀಡುವಂತೆ ಅವರು ಸುಪ್ರೀಂ ಮೆಟ್ಟಿಲೇರಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿದಂಬರಂ ಇನ್ನೂ ಇಡಿ ವಶದಲ್ಲಿದ್ದು, ಅವರ ಬಂಧನದ ಅವಧಿ ಅಕ್ಟೋಬರ್ […]

ಕೇಂದ್ರದ ನೀತಿ ಖಂಡಿಸಿ ಇಂದು ಬ್ಯಾಂಕ್ ಮುಷ್ಕರಕ್ಕೆ ಕರೆ

Tuesday, October 22nd, 2019
Bank-Mushkara

ನವದೆಹಲಿ : 10 ರಾಷ್ಟ್ರೀಕೃತ ಬ್ಯಾಂಕ್‍ಗಳನ್ನು 4 ಬ್ಯಾಂಕುಗಳನ್ನಾಗಿ ವಿಲೀನಗೊಳಿಸುತ್ತಿರುವ ಕೇಂದ್ರ ಸರ್ಕಾರ ನಿರ್ಧಾರವನ್ನು ಖಂಡಿಸಿ ಅಖಿಲ ಭಾರತ ಬ್ಯಾಂಕ್ ಸಿಬ್ಬಂದಿ ಒಕ್ಕೂಟ (ಎಐಬಿಇಎ) ಮತ್ತು ಬ್ಯಾಂಕ್ ಉದ್ಯೋಗಿಗಳ ಫೆಡರೇಷನ್ ಆಫ್ ಇಂಡಿಯಾ (ಬಿಇಎಫ್‍ಐ) ಮಂಗಳವಾರ ಮುಷ್ಕರಕ್ಕೆ ಕರೆ ನೀಡಿವೆ. ಮುಷ್ಕರದಿಂದ ಮಂಗಳವಾರ ಸರ್ಕಾರಿ ಸ್ವಾಮ್ಯದ ಬ್ಯಾಂಕ್‍ಗಳ ಸೇವೆಯಲ್ಲಿ ಸಮಸ್ಯೆಯಾಗುವ ಸಾಧ್ಯತೆಯಿದ್ದು, ಖಾಸಗಿ ವಲಯದ ಬ್ಯಾಂಕ್‍ಗಳು ಈ ಮುಷ್ಕರದಲ್ಲಿ ಭಾಗವಹಿಸುತ್ತಿಲ್ಲ. ಮುಷ್ಕರ ನಡೆಯುವ ಪ್ರದೇಶದಲ್ಲಿ ಎಟಿಎಂಗಳನ್ನೂ ಮುಚ್ಚುವುದಾಗಿ ಸಂಘಟನೆಗಳು ತಿಳಿಸಿವೆ. ಬ್ಯಾಂಕ್ ಮುಷ್ಕರವನ್ನು ಹಿಂದಕ್ಕೆ ಪಡೆಯುವಂತೆ ಸರ್ಕಾರ […]

ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ

Tuesday, October 22nd, 2019
Red-Alert

ಮಂಗಳೂರು : ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಮುಂದಿನ 4 ದಿನಗಳವರೆಗೆ ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಅ.26ರವರೆಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಈ ಹಿನ್ನೆಲೆಯಲ್ಲಿ ದ.ಕ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆ ಸುರಿಯಲಿದೆ. ಅ.23ರಂದು ಬೆಳಗ್ಗೆ 8:30ರಿಂದ ಆರಂಭಗೊಳ್ಳುವ ರೆಡ್ ಅಲರ್ಟ್ ಅ.26ರಂದು ಬೆಳಗ್ಗೆ 8:30ರವೆಗೂ ಮುಂದುವರಿಯಲಿದೆ. ಈ ಸಂದರ್ಭ ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ […]

ಎರಡು ವಾರ ಕಳೆದರೂ ಪತ್ತೆಯಾಗದ ವಿದ್ಯಾರ್ಥಿನಿ : ಪೋಷಕರಲ್ಲಿ ಆತಂಕ

Tuesday, October 22nd, 2019
fiyoona

ಮಂಗಳೂರು : ಖಾಸಗಿ ಕಾಲೇಜು ವಿದ್ಯಾರ್ಥಿನಿಯೊರ್ವಳು ನಾಪತ್ತೆಯಾಗಿ ಎರಡು ವಾರ ಕಳೆದರೂ ಇನ್ನೂ ಪತ್ತೆಯಾಗಿಲ್ಲದಿರುವುದು ಪೋಷಕರಲ್ಲಿ ಆತಂಕ ಹೆಚ್ಚಿಸಿದೆ. ಫಿಯೋನಾ ಸ್ವೀಡಲ್ ಕುಟಿನ್ಹೋ(16) ಎಂಬ ವಿದ್ಯಾರ್ಥಿನಿ ನಾಪತ್ತೆಯಾಗಿ ಎರಡು ವಾರವಾದರೂ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಇನ್ನೂ ಯಾವುದೇ ಮಾಹಿತಿದೊರೆತಿಲ್ಲ. ಮುಡಿಪು ನಿವಾಸಿ ಫಿಯೋನಾ ಅವರು ನಗರದ ಖಾಸಗಿ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಅ.8ರಂದು ಕಾಲೇಜಿಗೆಂದು ಮನೆಯಿಂದ ಹೊರಟು ಬಂದವರು ಮರಳಿ ಮನೆಗೆ ಮರಳಿಲ್ಲ. ಆಕೆ ಮನೆಯಿಂದ ತೆರಳುವಾಗ ಮೊಬೈಲ್ ಕೂಡಾ ಕೊಂಡೊಯ್ದಿಲ್ಲದಿರುವುದರಿಂದ ಯುವತಿಯ ಕಣ್ಮರೆ ವಿಚಾರ […]

ವಿಟ್ಲ : ಕಾಶಿಮಠದಲ್ಲಿ ಯುವ ಸಮ್ಮಿಲನ ಸಾಂಸ್ಕೃತಿಕ ಹಬ್ಬ

Tuesday, October 22nd, 2019
yuva-sanmelana

ವಿಟ್ಲ : ಕಾಶಿಮಠದಲ್ಲಿ ಯುವ ಸಮ್ಮಿಲನ ಸಾಂಸ್ಕೃತಿಕ ಹಬ್ಬವು ಕರಾವಳಿ ಲೇಖಕಿಯರ-ವಾಚಕಿಯರ ಸಂಘ, ವಿಟ್ಲ ಕಾಶೀಮಠ ಶ್ರೀ ಕಾಶೀ ಮಹಿಳಾ ಮಂಡಲ ಹಾಗೂ ಶ್ರೀ ಕಾಶೀ ಯುವಕ ಮಂಡಲ ವತಿಯಿಂದ ಬೆಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ಇತ್ತೀಚೆಗೆ ನಡೆಯಿತು. ಪುತ್ತೂರು ಕ್ಷೇತ್ರದ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮಾತನಾಡಿ, ಹಳ್ಳಿಯ ಮಹಿಳೆಯರನ್ನು ಸೇರಿಸಿಕೊಂಡು ಇಂತಹ ಕಾರ್ಯಕ್ರಮ ಆಯೋಜಿಸಿವುದು ಶ್ಲಾಘನೀಯ. ಮಹಿಳೆಯರು ಬರೆಯುವ ಹವ್ಯಾಸ ಬೆಳೆಸಿಕೊಳ್ಳುವಂತೆ ಸಲಹೆ ನೀಡಿದರು. ತರಂಗ ವಾರಪತ್ರಿಕೆ ಮಾಜಿ ಸಂಪಾದಕಿ ಅನಿತಾ […]

ಬಿಸಿರೋಡು ಅಭಿವೃದ್ಧಿಗೆ ಸರ್ವ ಸಹಕಾರ : ಕಂದಾಯ ಸಚಿವ ಅಶೋಕ್

Monday, October 21st, 2019
bantwal development

ಮಂಗಳೂರು : ಬಂಟ್ವಾಳ ತಾಲೂಕಿನ ಕೇಂದ್ರಸ್ಥಾನ ಬಿ.ಸಿ. ರೋಡು ಪೇಟೆಯ ಅಭಿವೃದ್ಧಿ ಹಾಗೂ ಸೌಂದರ್ಯೀಕರಣಕ್ಕೆ ತೊಡಕಾಗಿರುವ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಿ ಪೇಟೆಯ ಅಭಿವೃದ್ಧಿಗೆ ಸಹಕಾರ ನೀಡಲಾಗುವುದು ಎಂದು ಕಂದಾಯ ಹಾಗೂ ಪೌರಾಡಳಿತ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಅವರು ಸೋಮವಾರ ಬಂಟ್ವಾಳ ಪ್ರವಾಸಿ ಮಂದಿರದಲ್ಲಿ ಬಿ.ಸಿ. ರೋಡು ಅಭಿವೃದ್ಧಿ ಕುರಿತು ಅಧಿಕಾರಿಗಳು, ಜನಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿ ಮಾತನಾಡಿದರು. ಮುಖ್ಯವಾಗಿ ಬಿ.ಸಿ. ರೋಡ್‍ನಲ್ಲಿ ರಾಷ್ಟ್ರೀಯ ಹೆದ್ದಾರಿ ಸುವ್ಯಸ್ಥಿತ ರೀತಿಯಲ್ಲಿ ಇಲ್ಲದೇ ಇರುವುದು ಪ್ರಮುಖ ಸಮಸ್ಯೆಯಾಗಿದೆ. ಈ ನಿಟ್ಟಿನಲ್ಲಿ ಹೆದ್ದಾರಿಯ […]