ಆತ್ಮಹತ್ಯೆ ಮಾಡಿಕೊಂಡ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಮೊಮ್ಮಗಳು

Friday, January 28th, 2022
Soundarya

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳು ಡಾ.ಸೌಂದರ್ಯ ಆತ್ಮಹತ್ಯೆ ಮಾಡಿಕೊಂಡು ದುರಂತ ಅಂತ್ಯ ಕಂಡಿದ್ದಾರೆ. ಸೌಂದರ್ಯರನ್ನು ಉಳಿಸಿಕೊಳ್ಳಲು ಕೊನೇ ಕ್ಷಣದಲ್ಲಿ ಕುಟುಂಬಸ್ಥರು ಮತ್ತು ವೈದ್ಯರು ಯತ್ನಿಸಿದ್ದರಾದರೂ ಫಲಿಸಲಿಲ್ಲ ಎಂಬ ವಿಚಾರ ತಿಳಿದುಬಂದಿದೆ. ಬಿಎಸ್ವೈ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ ವೈದ್ಯೆಯಾಗಿದ್ದರು. 3 ವರ್ಷದ ಹಿಂದಷ್ಟೇ ಅಂದ್ರೆ 2018ರಲ್ಲಿ ಅಬ್ಬಿಗೆರೆಯ ಪದ್ಮ ಮತ್ತು ಶಿವಕುಮಾರ್ ದಂಪತಿ ಪುತ್ರ ಡಾ.ನೀರಜ್ ಎಂಬುವರ ಜತೆ ಸೌಂದರ್ಯ ಮದ್ವೆ ಅದ್ದೂರಿಯಾಗಿ ನೆರವೇರಿತ್ತು. ಡಾ.ನೀರಜ್ 7 ವರ್ಷದಿಂದ ರೇಡಿಯಾಲಜಿಸ್ಟ್ ಆಗಿ ಕೆಲಸ […]

ಸರ್ಕಾರಿ ಅಧಿಕಾರಿಗಳ ಮನೆಗೆ ಎಸಿಬಿ ಅಧಿಕಾರಿಗಳ ದಾಳಿ, ಬಾತ್‌ ರೂಮ್ ಪೈಪಿನಲ್ಲೂ ಹಣ

Wednesday, November 24th, 2021
Jewarshi

ಬೆಂಗಳೂರು : ಬುಧವಾರ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ಸರ್ಕಾರಿ ಅಧಿಕಾರಿಗಳಿಗೆ ಸೇರಿದ ಒಟ್ಟು 68 ಸ್ಥಳಗಳಲ್ಲಿ 503 ಅಧಿಕಾರಿ ಹಾಗೂ ಸಿಬ್ಬಂದಿ ದಾಳಿ ನಡೆಸಿದರು. ಸರ್ಕಾರಿ ನೌಕರರು ಹೊಂದಿರುವ ಆಸ್ತಿಗಳ ಮೌಲ್ಯ, ಅವರು ಹೊಂದಿರುವ ಚಿನ್ನಾಭರಣಗಳು, ಇತರೆ, ಬ್ಯಾಂಕ್ ಠೇವಣಿಗಳ ಕುರಿತ ವಿವರಗಳು ಇಲ್ಲಿದೆ. 1) ಎಂ. ಆರಾದರ್, ಕಿರಿಯ ಇಂಜಿನಿಯರ್, ಲೋಕೋಪಯೋಗಿ ಇಲಾಖೆ, ಜೇವರ್ಗಿ ಕಲಬುರಗಿಯಲ್ಲಿ 2 ವಾಸದ ಮನೆಗಳು, ಬೆಂಗಳೂರು ನಗರದಲ್ಲಿ 1 ನಿವೇಶನ, 3 ವಿವಿಧ ಕಂಪನಿಯ ಕಾರುಗಳು, 1 ದ್ವಿಚಕ್ರ ವಾಹನ, 1 […]

ಕಾಲೇಜು ವಿದ್ಯಾರ್ಥಿಯೋರ್ವ ಪ್ರೇಮ ವೈಫಲ್ಯದಿಂದ ರೈಲ್ವೇ ಹಳಿಗೆ ಬಿದ್ದು ಆತ್ಮಹತ್ಯೆ

Sunday, September 19th, 2021
Basayya Vastrada

ಹುಬ್ಬಳ್ಳಿ:  ಕಾಲೇಜು ವಿದ್ಯಾರ್ಥಿಯೋರ್ವ ಪ್ರೇಮ ವೈಫಲ್ಯದಿಂದ ರೈಲ್ವೇ ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಅಮರಗೋಳದ ಬಸಯ್ಯ ವಸ್ತ್ರದ ಎಂಬ ಯುವಕ ರೈಲು ಹಳಿಗೆ ತೆಲೆ ಕೊಟ್ಟ ಸಾವನಪ್ಪಿದ ಪ್ರೇಮಿಯಾಗಿದ್ದಾನೆ. ಪಿಯುಸಿ ವ್ಯಾಸಂಗ ಮಾಡಿರುವ ಬಸಯ್ಯ, ಅಮರಗೋಳ ಪ್ರದೇಶದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಯುವತಿ ಬಸಯ್ಯನ ಪ್ರೀತಿಯನ್ನು ನಿರಾಕರಣೆ ಮಾಡಿದ್ದರಿಂದಲೇ ರೈಲು ಹಳಿಗೆ ತೆಲೆ ಕೊಟ್ಟು ಸಾವನಪ್ಪಿದ್ದಾನೆ ಎಂದು ಶಂಕಿಸಲಾಗಿದೆ. ಈತನ ತಂದೆ ಸಿಎಂ ಬಸವರಾಜ ಬೊಮ್ಮಾಯಿಯವರ ತಂದೆ-ತಾಯಿಯವರನ್ನು ಅಂತ್ಯಕ್ರಿಯೆ ಮಾಡಿದ ಪುತ್ಥಳಿ ಕಾವಲು […]

ಪೋಲಿಸರ ಕೈಗೆ ಸಿಕ್ಕಿ ಬಿದ್ದ ಗಾಂಜಾ ವ್ಯಾಪಾರ ಮಾಡುತಿದ್ದ ಸಾಫ್ಟ್ ವೇರ್ ಉದ್ಯೋಗಿ ಯುವತಿ

Friday, June 18th, 2021
Renuka

ಬೆಂಗಳೂರು : ಚನ್ನೈನಲ್ಲೇ ಸಾಫ್ಟ್ ವೇರ್ ಉದ್ಯೋಗಿ ಯುವತಿಯೊಬ್ಬಳು ಪ್ರಿಯಕರನ ಮಾತು ಕೇಳಿ  ಗಾಂಜಾ ವ್ಯಾಪಾರಕ್ಕೆ ಕೈ ಹಾಕಿ ಬೆಂಗಳೂರಿನಲ್ಲಿ ಪೋ ಲಿಸರ ಕೈಗೆ ಸಿಕ್ಕಿ ಹಾಕಿ ಕೊಂಡಿದ್ದಾಳೆ. ಆಂಧ್ರಪ್ರದೇಶ ಶ್ರೀಕಾಕುಳಂನ ರೇಣುಕಾ(25) ಚೆನೈನಲ್ಲಿ ಎಂಜಿನಿಯರಿಂಗ್ ಮಾಡುವಾಗ ಕಡಪದ ಸಿದ್ದಾರ್ಥ್ ಜೊತೆಗೆ ಲವ್ ಆಗಿತ್ತು. ವಿದ್ಯಾಭ್ಯಾಸ ಮುಗಿದ ಬಳಿಕ ಸಿದ್ಧಾರ್ಥ್ ತವರು ರಾಜ್ಯಕ್ಕೆ ಹೋಗಿದ್ದ. ಯುವತಿ ರೇಣುಕಾ ಚನ್ನೈನಲ್ಲೇ ಸಾಫ್ಟ್ ವೇರ್ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದಳು. ಪ್ರೀತಿಗಾಗಿ ಪೋಷಕರನ್ನ ದೂರಮಾಡಿ ಪ್ರಿಯತಮನಿಗಾಗಿ ಯುವತಿ ಗಾಂಜಾ ಮಾರಾಟಕ್ಕಿಳಿದ್ದಳು. ಹಣದಾಸೆಗೆ ಪ್ರಿಯತಮೆಯನ್ನೂ ಗಾಂಜಾ ಮಾರಾಟಕ್ಕೆ ಇಳಿಸಿದ್ದ. […]

ಅಂಗವೈಕಲ್ಯವಿದೆ ಎಂದು ಜನಿಸಿರುವ ಮಗುವನ್ನು ಆಸ್ಪತ್ರೆಯ ನೀರಿನ ತೊಟ್ಟಿಗೆ ಹಾಕಿದ ದಂಪತಿ

Sunday, June 13th, 2021
infant

ಚಾಮರಾಜನಗರ : ಅಂದಾಜು 6 ದಿನದ ಗಂಡು ಶಿಶುವನ್ನು ಅಂಗವೈಕಲ್ಯ ಹೊತ್ತುಕೊಂಡು ಜನಿಸಿರುವ ಕಾರಣ ಹೆತ್ತವರು  ಮಗುವನ್ನು ಪ್ಲಾಸ್ಟಿಕ್ ಕವರ್ ನಲ್ಲಿ ಹಾಕಿ ಖಾಸಗಿ ಆಸ್ಪತ್ರೆಯ ಖಾಲಿ ನೀರಿನ ತೊಟ್ಟಿಯಲ್ಲಿ ಎಸೆದ ಘಟನೆ  ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಕಾಮಗೆರೆಯ ಹೋಲಿ ಕ್ರಾಸ್ ಆಸ್ಪತ್ರೆಯಲ್ಲಿ ನಡೆದಿದೆ. ಅಂದಾಜು 6 ದಿನದ ಗಂಡು ಶಿಶು ಇದಾಗಿದ್ದು, ಕರುಳಬಳ್ಳಿ ಕತ್ತರಿಸದೇ ಹಾಗೆ ಬಿಟ್ಟಿದ್ದು ಕಂಡುಬಂದಿದೆ. ಆಸ್ಪತ್ರೆ ಶವಾಗಾರದ ಬಳಿ ಪ್ಲಾಸ್ಟಿಕ್ ಕವರಿನಲ್ಲಿ ಶಿಶು ಶವ ಪತ್ತೆಯಾಗಿದೆ. ಸಿಬ್ಬಂದಿ ಹೋದಾಗ ದುರ್ನಾತ […]

ಬಡ್ಡಿಯವನಿಂದ ಸಾಲಪಡೆದು ಕಿರುಕುಳ ತಾಳಲಾರದೆ ಮಹಿಳೆ ಮನೆಯಲ್ಲೇ ಆತ್ಮಹತ್ಯೆ

Saturday, June 12th, 2021
Gowramma

ಶಿವಮೊಗ್ಗ: ಬಡ್ಡಿಯವನಿಂದ ಸಾಲಪಡೆದು  ಮರು ಪಾವತಿಸಿದರೂ  ಕಿರುಕುಳ ತಾಳಲಾರದೆ ಮನನೊಂದ ಮಹಿಳೆ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಸಿದ್ಲಿಪುರ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಗೌರಮ್ಮ (55) ಎಂದು ಗುರುತಿಸಲಾಗಿದೆ. ಗೌರಮ್ಮ ಪತಿ ಮಲ್ಲಿಕಾರ್ಜುನಪ್ಪ ಇದೇ ಗ್ರಾಮದ ಲಂಕೇಶ್ ನಾಯ್ಕ್ ನಿಂದ 10 ರೂ. ಬಡ್ಡಿಯಂತೆ 20 ಸಾವಿರ ರೂ ಸಾಲ ಪಡೆದಿದ್ದರು. ಈ 20 ಸಾವಿರ ರೂ. ಹಣ ನೀಡುವಾಗ ಲಂಕೇಶ್ ನಾಯ್ಕ ಬಡ್ಡಿಯ ಹಣ 2 ಸಾವಿರ ಕಡಿತಗೊಳಿಸಿ ಕೊಟ್ಟಿದ್ದನಂತೆ. ಬಡ್ಡಿ ಕೊಟ್ಟ […]

ಅಕ್ರಮ ದಂಧೆ – ‘ಮುಂಗಾರು ಮಳೆ-2’ ಚಿತ್ರದ ನಟಿ ನೇಹಾ ಶೆಟ್ಟಿ ತಂದೆಯ ಬಂಧನ

Saturday, June 5th, 2021
Neha-Shetty

ಬೆಂಗಳೂರು:  ನಗರದಲ್ಲಿ ಜೂಜು ಅಡ್ಡೆನಿರ್ಮಿಸಿ ಕಾನೂನು ಬಾಹಿರ ಕೃತ್ಯ ಆರೋಪದಡಿಯಲ್ಲಿ ‘ಮುಂಗಾರು ಮಳೆ-2’ ಚಿತ್ರದ ನಟಿ ನೇಹಾ ಶೆಟ್ಟಿ ತಂದೆ ಹರಿರಾಜ್ ಶೆಟ್ಟಿಯನ್ನು ಸಿಸಿಬಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಹರಿರಾಜ್ ಶೆಟ್ಟಿಯನ್ನು ನಗರದ ಪ್ರಮುಖ ಜೂಜುಕೋರ ಅಂತಾ ಗೂಂಡಾ ಕಾಯ್ದೆಯಡಿ ಬಂಧನ ಮಾಡಲಾಗಿದೆ.  ಹರಿರಾಜ ಶೆಟ್ಟಿ ವಿರುದ್ಧ ಇಲ್ಲಿತನಕ 13 ಕೇಸ್‍ಗಳು ದಾಖಲಾಗಿದೆ. ಬೆಂಗಳೂರಿನಲ್ಲಿ ಪೂಲ್ ಎನ್, ರಿ ಕ್ರಿಯೇಷನ್ ಕ್ಲಬ್ ಹೆಸರಿನಲ್ಲಿ ಹತ್ತಾರು ಕಡೆ ನಡೆಸ್ತಿದ್ದ, ಗೇಮ್ ಗಳು ಬ್ಯಾನ್ ಇರುವ ಸ್ಕಿಲ್ ಗೇಮ್, ವೀಡಿಯೋ ಗೇಮ್ […]

ಬೆಂಗಳೂರಲ್ಲಿ ನಡೆದ ಸಾಮೂಹಿಕ ರೇಪ್, ಪ್ರಮುಖ ಆರೋಪಿಯನ್ನು ಗುಂಡುಹಾರಿಸಿ ಬಂದಿಸಿದ ಪೊಲೀಸರು

Wednesday, June 2nd, 2021
Saboob

ಬೆಂಗಳೂರು : ನಗರದಲ್ಲಿ ನಡೆದ ಯುವತಿಯ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಶೂಬೂಜ್ ಪೇಪರ್ ಆಯುವವರ ಶೆಡ್ ನಲ್ಲಿ ಇರುವ ಬಗ್ಗೆ ಮಾಹಿತಿ ಕಲೆ ಹಾಕಿದ್ದ ಪೊಲೀಸರು ಆತನನ್ನು ಅಲ್ಲಿಂದ ವಶಕ್ಕೆ ಪಡೆದಿದ್ದಾರೆ.  ಆದರೆ ಆತ ಪೊಲೀಸರಿಂದ ತಪ್ಪಿಸಲೆತ್ನಿಸಿದಾಗ ಆತನ ಮೇಲೆ ಗುಂಡು ಹಾರಿಸಿದ್ದಾರೆ. ಶೂಬೂಜ್ ಯುವತಿಯ ಗುಪ್ತಾಂಗಕ್ಕೆ ಕಾಲಲ್ಲಿ ಒದ್ದು, ವಿಕೃತಿ ಮೆರೆದಿದ್ದ.   ಆತನನ್ನು ಕರೆ ತರುವಾಗ ಮೂತ್ರ ಬರುತ್ತಿದೆ ಎಂದು ಹೇಳಿದ್ದ ಒಂದು ವೇಳೆ ನಿಲ್ಲಿಸದೇ ಇದ್ದರೆ ಜೀಪ್ ಒಳಗಡೆಯೇ ಮೂತ್ರ ಮಾಡುತ್ತೇನೆ ಎಂದು ಪೊಲೀಸರಿಗೆ ಧಮ್ಕಿ ಹಾಕಿದ್ದ. ಆರ್ […]

ಬಾಂಗ್ಲಾದೇಶಿಗಳಿಂದ ಅತ್ಯಾಚಾರಕ್ಕೊಳಗಾದ ಸಂತ್ರಸ್ತ ಯುವತಿಯನ್ನು ಪತ್ತೆ ಹಚ್ಚಿದ ಪೊಲೀಸರು

Saturday, May 29th, 2021
Bangla Deshi

ಬೆಂಗಳೂರು : ನಗರದ ಎನ್ ಆರ್ ಐ ಲೇಔಟ್‌ನಲ್ಲಿರುವ ನಡೆದಿದ್ದ ಸಾಮೂಹಿಕ ಅತ್ಯಾಚಾರದ ಸಂತ್ರಸ್ತ ಯುವತಿ ಕೇರಳದ ಕ್ಯಾಲಿಕಟ್‌ನಲ್ಲಿ ಪತ್ತೆಯಾಗಿದ್ದಾಳೆ. ಆಕೆಯನ್ನು ವೇಶ್ಯಾವಾಟಿಕೆಗೆ ತಳ್ಳಲು ಎಂಟು ಮಂದಿ ವಿಕೃತರು ಸತತ ಒಂದು ಗಂಟೆ ಕಾಲ ಹಿಂಸೆ ನೀಡಿರುವ ವಿಡಿಯೋ ತುಣುಕು ಬಹಿರಂಗವಾಗಿದೆ. ಎಂಟು ಮಂದಿ ಬಾಂಗ್ಲಾ ನಿವಾಸಿಗಳು ಯುವತಿ ಮೇಲೆ ಹಲ್ಲೆ ಮಾಡಿದ್ದಾರೆ. ಕಾಲು ಹಿಡಿದು ಪರಿಪರಿಯಾಗಿ ಬೇಡಿಕೊಂಡರೂ ಬಿಡದೇ ಹಲ್ಲೆ ನಡೆಸಿದ್ದಾರೆ. ವೇಶ್ಯಾವಾಟಿಕೆ ವೃತ್ತಿಗೆ ಒಳಗಾಗದಿದ್ದರೆ ಹೀಗೇ ಹಿಂಸೆ ನೀಡುವುದಾಗಿ ಹೆದರಿಸಿದ್ದಾರೆ. ತದನಂತರದಲ್ಲಿ ಹಲ್ಲೆಗೆ ಒಳಗಾದ […]

ಲಾಕ್‍ಡೌನ್ ನಡುವೆ ಗ್ರಾಮ ಪಂಚಾಯತ್ ಸದಸ್ಯನ ಮಗಳ ಅದ್ಧೂರಿ ಮದುವೆ, ಮುಂದೇನಾಯ್ತು ನೋಡಿ !

Monday, May 24th, 2021
Ambagilu Marraige

ಮಂಡ್ಯ:  ಬಿ.ಹೊಸೂರು ಗ್ರಾಮದ ಹೊರ ಹೊಲಯದಲ್ಲಿರುವ ಅಂಬೆಗಾಲು ಕೃಷ್ಣ ದೇವಾಲಯದಲ್ಲಿ ಗ್ರಾ.ಪಂ ಸದಸ್ಯರೊಬ್ಬರು ಲಾಕ್‍ಡೌನ್ ನಿಯಮ ಮೀರಿ  ಮಗಳ ಮದುವೆಯನ್ನು ಅದ್ಧೂರಿಯಾಗಿ ನಡೆಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮದುವೆಗೆ ಯಾವುದೇ ಅನುಮತಿ ಪಡೆಯದೆ ಗ್ರಾ.ಪಂ ಸದಸ್ಯ ಮಹೇಶ್ ಎಂಬವರು ಲಾಕ್‍ಡೌನ್ ನಿಯಮ ಮೀರಿ ಮದುವೆ ಕಾರ್ಯಕ್ರಮ ನಡೆಸಿದ್ದರು. ಈ ಮದುವೆ ಕಾರ್ಯಕ್ರಮದಲ್ಲಿ ಸುಮಾರು 300ಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು. ಈ ವಿಚಾರ ತಿಳಿದು ಅಧಿಕಾರಿಗಳು ಮಂಡ್ಯ ತಹಶಿಲ್ದಾರ್ ಚಂದ್ರಶೇಖರ್ ಶಂಗಾಳಿ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಮದುವೆ ಕಾರ್ಯಕ್ರಮದ ಮೇಲೆ ದಾಳಿ ಮಾಡಿದ ತಹಶೀಲ್ದಾರ್ […]