ಲವ್ ಜಿಹಾದ್ ಗೆ ಒಪ್ಪದಕ್ಕೆ ಗುಂಡಿಕ್ಕಿ ಯುವತಿಯ ಕೊಲೆ

Tuesday, October 27th, 2020
paridhabadh

ಚಂಡೀಗಢ: ತನ್ನ ಧರ್ಮಕ್ಕೆ ಮತಾಂತರವಾಗುವಂತೆ ಮೂರು ವರ್ಷದಿಂದ ಯುವತಿಗೆ ಬಲವಂತ ಮಾಡಿ ಕೊನೆಗೆ ಹುಡುಗಿ ಒಪ್ಪದೇ ಇದ್ದುದಕ್ಕೆ ಏಕಾಏಕಿ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ ಪ್ರಕರಣ ಹರಿಯಾಣದ ಫರಿದಾಬಾದ್ ನಲ್ಲಿ ನಡೆದಿದೆ. ಇದು ಲವ್ ಜಿಹಾದ್ ಎಂದು ಯುವತಿಯ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿನಿ ಪರೀಕ್ಷೆ ಮುಗಿಸಿ ಕಾಲೇಜಿನಿಂದ ಹೊರಗೆ ಬರುತ್ತಿದ್ದಂತೆ ದುರುಳರು ಆಕೆಯ ಮೇಲೆ ದಾಳಿ ನಡೆಸಿದ್ದಾರೆ. ಆರಂಭದಲ್ಲಿ ಅಪಹರಿಸಲು ಮುಂದಾಗಿದ್ದು, ಈ ವೇಳೆ ಯುವತಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾಗ ಗುಂಡು […]

ಸುರೇಂದ್ರ ಬಂಟ್ವಾಳ್ ಕೊಲೆ ಆರೋಪಿ ಸತೀಶ್ ಕುಲಾಲ್ ಮತ್ತು ಇನ್ನೊಬ್ಬ ಸಹಚರನ ಬಂಧನ

Sunday, October 25th, 2020
Surendra Bantwal

ಬಂಟ್ವಾಳ : ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆ.20ರಂದು ರಾತ್ರಿ ಸುರೇಂದ್ರ ಬಂಟ್ವಾಳ್ ನನ್ನು ಬಿ.ಸಿ.ರೋಡಿನ ಪ್ಲ್ಯಾಟ್ ನಲ್ಲಿ ಚೂರಿಯಿಂದ ಇರಿದು ಹತ್ಯೆಗೈದ ಪ್ರಕರಣದ ಪ್ರಮುಖ ಆರೋಪಿಗಳಾದ ಸುರೇಂದ್ರನ ಆಪ್ತ ಸ್ನೇಹಿತ ಬಂಟ್ವಾಳ ನಿವಾಸಿ ಸತೀಶ್ ಕುಲಾಲ್ ಮತ್ತು ಕಿನ್ನಿಗೋಳಿ ನಿವಾಸಿ ಗಿರೀಶ್ ಯಾನೆ ಗಿರಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಬ್ಬರು ಕಾಸರಗೋಡು ಕಡೆಯಿಂದ ಬಾಡಿಗೆ ವಾಹನದಲ್ಲಿ ಬಂಟ್ವಾಳ ಕಡೆ ಶನಿವಾರ ರಾತ್ರಿ ಬರುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ಡಿವೈಎಸ್ಪಿ […]

ಸುರೇಂದ್ರ ಬಡ್ಡಿ ವ್ಯವಹಾರದ ಪಾಪದ ಹಣವನ್ನು ಕಿಶನ್ ಹೆಗ್ಡೆ ಕೊಲೆಗೆ ಬಳಸಿದ್ದ, ಅದಕ್ಕಾಗಿ ಕೊಲೆ ಶಂಕೆ

Thursday, October 22nd, 2020
suresh Kulal

ಬಂಟ್ವಾಳ : ಕಿಶನ್ ಹೆಗ್ಡೆ ಕೊಲೆಗೆ ಪ್ರತಿಕಾರವಾಗಿ ಸುರೇಂದ್ರ ಬಂಟ್ವಾಳ್ ಅವರನ್ನು ಕೊಲೆ ಮಾಡಲಾಗಿದೆ ಎನ್ನುವ ಬಗ್ಗೆ ಮಹತ್ವದ ಸುಳಿವು ಸಿಕ್ಕಿದ್ದು,  ಸುರೇಂದ್ರನ ಆಪ್ತ ಸ್ನೇಹಿತ  ಎಂದು ಹೇಳಿಕೊಂಡು ಒಬ್ಬ ವ್ಯಕ್ತಿ ಆಡಿಯೋ ಕಳಿಸಿದ್ದು ಪೊಲೀಸರು ಸುಳಿವಿನ ಬೆನ್ನು ಹತ್ತಿದ್ದಾರೆ. ರೌಡಿ ಶೀಟರ್, ನಟ ಸುರೇಂದ್ರ ಭಂಡಾರಿ ಬಂಟ್ವಾಳ್ ಹತ್ಯೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು ಎರಡು ಪ್ರತ್ಯೇಕ ತಂಡ ರಚಿಸಿ ಹಂತಕರ ಬೇಟೆ ಆರಂಭಿಸಿದ್ದಾರೆ. ಸುರೇಂದ್ರ ಬಂಟ್ವಾಳ್ ಅವರ ಆಪ್ತ ಸ್ನೇಹಿತ ಸತೀಶ್ ಕುಲಾಲ್ ಎಂದು ಹೇಳಿಕೊಂಡು ಒಬ್ಬ ವ್ಯಕ್ತಿ ಆಡಿಯೋ ಸಂದೇಶದ  […]

ಬೈಕ್ ನಲ್ಲಿ ಬಂದು ಬಾರ್ ಮಾಲೀಕನನ್ನ ಹತ್ಯೆಗೈದ ದುಷ್ಕರ್ಮಿಗಳು

Friday, October 16th, 2020
Manish Shetty

ಬೆಂಗಳೂರು: ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಬಾರ್ ಮಾಲೀಕನನ್ನ ಹತ್ಯೆಗೈದಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ರಾತ್ರಿ ನಡೆದಿದೆ. ನಗರದ ಪ್ರತಿಷ್ಠಿತ ಬ್ರಿಗೇಡ್ ರಸ್ತೆಗೆ ಹೊಂದಿಕೊಂಡಿರುವ ಆರ್‌.ಎಚ್‌.ಪಿ ರಸ್ತೆಯಲ್ಲಿರುವ ಡ್ಯೂಯೆಟ್ ಬಾರ್‌ ಮಾಲೀಕ ಮನೀಶ್ ಶೆಟ್ಟಿ (45 ವರ್ಷ) ಎಂಬುವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮೂಲಗಳ ಪ್ರಕಾರ ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಮನೀಷ್ ಅವರ ಬಾರ್ ಮುಂಭಾಗದಲ್ಲೇ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಅವರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಗುಂಡೇಟಿನಿಂದ […]

ಕೋಳಿ ಫಾರಂನಲ್ಲಿ ಕೂಡಿಹಾಕಿ 17 ವರ್ಷದ ಬಾಲಕಿಯ ಸಾಮೂಹಿಕ ಅತ್ಯಾಚಾರ

Thursday, October 15th, 2020
Rape

ಕಟಕ್ : ಮನೆಯಿಂದ ಓಡಿಹೋಗಿದ್ದ 17 ವರ್ಷದ ಬಾಲಕಿಯನ್ನು ಕೋಳಿ ಫಾರಂನಲ್ಲಿ ಕೂಡಿಹಾಕಿ 22 ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಒಡಿಶಾದಲ್ಲಿ ನಡೆದಿದೆ. ಕಟಕ್ ನಲ್ಲಿ ಕೋಳಿ ಸಾಕಣೆ ಕೇಂದ್ರಕ್ಕೆ ಹುಡುಗಿಯನ್ನು ಕರೆದೊಯ್ದು ಕೂಡಿಹಾಕಿ ಅತ್ಯಾಚಾರ ಎಸಗಲಾಗಿದೆ. ಜಗತ್ ಸಿಂಗ್ ಪುರ್ ಜಿಲ್ಲೆಯ ಟಿರ್ಟಾಲ್ ನಿವಾಸಿಯಾಗಿರುವ ಹುಡುಗಿ ಪೋಷಕರೊಂದಿಗೆ ಜಗಳವಾಡಿ ಮನೆಯಿಂದ ಓಡಿ ಹೋಗಿದ್ದಾಳೆ. ಓಎಂಸಿ ಸ್ಕ್ವೇರ್ ನಲ್ಲಿರುವ ಬಸ್ ನಿಲ್ದಾಣದ ಬಳಿ ವ್ಯಕ್ತಿಯೊಬ್ಬ ಆಕೆಯನ್ನು ಮನೆಗೆ ಕರೆದುಕೊಂಡು ಹೋಗುವುದಾಗಿ ಭರವಸೆ ನೀಡಿದ್ದಾನೆ. ಆದರೆ […]

80 ವರ್ಷದ ಅಜ್ಜಿಯನ್ನು ಕೊಲೆ ಮಾಡಿ, ಅಂಗಾಂಗಗಳನ್ನು ಕೋಣೆಯಲ್ಲಿ ಹರಡಿ ವಿಕೃತಿ ಮೆರೆದ ಮೊಮ್ಮಗ

Wednesday, October 14th, 2020
rossi

ಮುಂಬೈ:  ಮೊಮ್ಮಗನೊಬ್ಬ ತನ್ನ ಅಜ್ಜಿಯ ಕತ್ತು ಸೀಳಿ ಕೊಲೆ ಮಾಡಿದ್ದಲ್ಲದೇ ಆಕೆಯ ದೇಹದ ಅಂಗಾಂಗಗಳನ್ನು ಕೋಣೆಯ ತುಂಬಾ ಹರಡಿ ವಿಕೃತಿ ಮೆರೆದ ಘಟನೆಯೊಂದು ಮುಂಬೈನಲ್ಲಿ ನಡೆದಿದೆ. ಆರೋಪಿಯನ್ನು ಕ್ರಿಸ್ಟೋಫರ್ ಡಯಾಸ್ (25 ) ಎಂದು ಗುರುತಿಸಲಾಗಿದೆ. ಈತ ಸೋಮವಾರ ಪುನರ್ವಸತಿ ಕೇಂದ್ರದಿಂದ ಹಿಂದಿರುಗಿದ ಬಳಿಕ ತನ್ನ ಅಜ್ಜಿಯನ್ನು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕ್ರಿಸ್ಟೋಫರ್ ಪೋಷಕರು ಇಸ್ರೆಲ್ ನಲ್ಲಿ ನೆಲೆಸಿದ್ದಾರೆ. ಈತ ಪುನರ್ವಸತಿ ಕೇಂದ್ರದಿಂದ ವಾಪಸ್ಸಾದ ಬಳಿಕ ಅಜ್ಜಿ ಜೊತೆ ವಾಸವಾಗಿದ್ದನು ಎಂಬುದಾಗಿ ವರದಿಯಾಗಿದೆ. ಊಟಕ್ಕೆ ಬಂದಿದ್ದ […]

65 ವರ್ಷದ ದಲಿತ ವೃದ್ಧನ ಮೇಲೆ ಹಲ್ಲೆಗೈದು, ಮೂತ್ರ ಕುಡಿಸಿ ವಿಕೃತಿ ಮೆರೆದ ಯುವಕ

Tuesday, October 13th, 2020
amar

ಲಕ್ನೋ: ಮಗನ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿದಕ್ಕೆ ಪೊಲೀಸರಿಗೆ ದೂರು ನೀಡಿದ 65 ವರ್ಷದ ದಲಿತ ವೃದ್ಧನ ಮೇಲೆ ಹಲ್ಲೆಗೈದು, ಬಲವಂತವಾಗಿ ಮೂತ್ರ ಕುಡಿಸಿ ವಿಕೃತಿ ಮೆರೆದ ಘಟನೆ ಉತ್ತರಪ್ರದೇಶದ ಲಲಿತಪುರ ಗ್ರಾಮದ ರೊಡಾ ಎಂಬಲ್ಲಿ ನಡೆದಿದೆ. ಮೂತ್ರ ಕುಡಿಸಿದ  ಆರೋಪಿಯನ್ನು ಸೋನು ಯಾದವ್ ಎಂದು ಗುರುತಿಸಲಾಗಿದೆ. ಈತ ಕೆಲ ದಿನಗಳ ಹಿಂದೆ ವೃದ್ಧನ ಮಗನ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿದ್ದನು. ಹೀಗಾಗಿ ತಂದೆ- ಮಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಸೋನು ವಿರುದ್ಧ ದೂರು ದಾಖಲಿಸಿದ್ದರು. ದೂರು ದಾಖಲಾಲಾದ  […]

ಮನೆ ಕಟ್ಟುವ ವಿಚಾರವಾಗಿ ಜಗಳವಾಡಿ ಇಬ್ಬರು ಮಕ್ಕಳ ಜೊತೆ ಕಾಲುವೆಗೆ ಜಿಗಿದ ಪ್ರೌಢಶಾಲೆಯ ಶಿಕ್ಷಕಿ

Tuesday, October 13th, 2020
sri Devi

ದಾವಣಗೆರೆ: ಮನೆ ಕಟ್ಟುವ ವಿಚಾರವಾಗಿ ಪತಿಯ ಜೊತೆ ಜಗಳ ಮಾಡಿಕೊಂಡ ಮಹಿಳೆಯೊಬ್ಬರು ಇಬ್ಬರು ಮಕ್ಕಳ ಜೊತೆ ತುಂಗಭದ್ರಾ ಕಾಲುವೆಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ. ಶ್ರೀದೇವಿ (38), ಅನುಷಾ (10), ನೂತನ್ (08) ಆತ್ಮಹತ್ಯೆಗೆ ಶರಣಾದ ತಾಯಿ ಮಕ್ಕಳು. ದಾವಣಗೆರೆ ನಗರದ ಹೊರವಲಯದ ಎಚ್ ಕಲ್ಪನಹಳ್ಳಿ ಬಳಿ ತುಂಗಭದ್ರ ಕಾಲುವೆಯಲ್ಲಿ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಾವಣಗೆರೆಯ ಜಯನಗರದಲ್ಲಿ ವಾಸವಾಗಿದ್ದ ಶ್ರೀದೇವಿ  ವೃತ್ತಿಯಲ್ಲಿ ಪ್ರೌಢಶಾಲೆಯ ಶಿಕ್ಷಕಿಯಾಗಿದ್ದರು. ಪತಿ ಜೊತೆ ಮನೆ ಕಟ್ಟುವ ವಿಚಾರವಾಗಿ ಜಗಳ ಮಾಡಿಕೊಂಡಿ ಆತ್ಮಹತ್ಯೆಯ ನಿರ್ಧಾರಕ್ಕೆ ಮುಂದಾಗಿದ್ದರು. […]

ವರದಕ್ಷಿಣೆಗಾಗಿ ಪತ್ನಿಯ ಗುಪ್ತಾಂಗಕ್ಕೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಪತಿ

Sunday, October 11th, 2020
suraj Singh

ಬೆಂಗಳೂರು : 15 ಲಕ್ಷ ರು. ವೆಚ್ಚ ಮಾಡಿ ಮದುವೆ ಮಾಡಿದರೂ ಪದೇ ಪದೇ ವರದಕ್ಷಿಣೆಗಾಗಿ ಕಿರುಕುಳ ನೀಡಿ ಕೊನೆಗೆ ಪತ್ನಿಯ ಗುಪ್ತಾಂಗಕ್ಕೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದ ಪತಿ ಸೇರಿದಂತೆ ನಾಲ್ವರನ್ನು ರಾಮಮೂರ್ತಿನಗರ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯ ಪತಿ ಸೂರಜ್‌ ಸಿಂಗ್‌ ಮತ್ತು ಆರೋಪಿಗೆ ಪ್ರಚೋದಿಸಿದ ಆತನ ತಂದೆ ಲೌನೇಶ್‌, ತಾಯಿ ಮತ್ತು ಮತ್ತೊಬ್ಬ ಮಹಿಳೆಯನ್ನು ಟಿ.ಸಿ.ಪಾಳ್ಯದ ನಿವಾಸಿದಿಂದ ಬಂಧಿಸಲಾಗಿದೆ. ಸಂತ್ರಸ್ತೆಯು ತೀವ್ರ ಆಘಾತಗೊಂಡು  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೀಡಾ ಅಂಗಡಿಯನ್ನಿಟ್ಟುಕೊಂಡಿದ್ದ  ಸೂರಜ್‌ ಸಿಂಗ್  ಕಳೆದ ಒಂದು ವರ್ಷದ […]

ಮಾನಸಿಕವಾಗಿ ನೊಂದ ಹದಿಮೂರರ ಬಾಲಕಿ ಆತ್ಮಹತ್ಯೆಗೆ ಶರಣು

Thursday, October 8th, 2020
pooja

ಮೂಡುಬಿದಿರೆ : ಸಹೋದರಿ ಬುದ್ದಿ ಮಾತು ಹೇಳಿದ ಕಾರಣ  ಮಾನಸಿಕವಾಗಿ ನೊಂದ ಬಾಲಕಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಮೂಡುಮಾರ್ನಾಡಿನ ಗುಡ್ಡದ ಮೇಲು ಎಂಬಲ್ಲಿ ಗುರುವಾರ ನಡೆದಿದೆ. ಕರುಣಾಕರ ಹಾಗೂ ಸುಶೀಲಾ ದಂಪತಿಯ ಪುತ್ರಿ ಪೂಜಾ(13) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಪೂಜಾ ಮಧ್ಯಾಹ್ನ ತನ್ನ ಸಂಬಂಧಿಕರ ಮಕ್ಕಳೊಂದಿಗೆ ಆಟವಾಡುತ್ತಾ ಅವರೊಂದಿಗೆ ಜಗಳವಾಡಿ ಹೊಡೆದು ತೊಂದರೆ ನೀಡುತ್ತಿದ್ದಳು. ಸಣ್ಣ ಮಕ್ಕಳಿಗೆ ತೊಂದರೆ ಕೊಡಬಾರದು ಎಂದು ಸಹೋದರಿ ಬುದ್ಧಿ ಮಾತು ಹೇಳಿದ್ದಾರೆ. ಇದರಿಂದಾಗಿ ಖಿನ್ನತೆಗೆ ಒಳಗಾದ ಪೂಜಾ ಮನೆ ಬಳಿ ಇರುವ ಹಾಡಿಯಲ್ಲಿ ಮರದ […]