ರೈತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿ.ಸಿ. ಕಚೇರಿಗೆ ಮುತ್ತಿಗೆ

Thursday, April 7th, 2011
ರಾಜ್ಯ ರೈತ ಸಂಘ

ಮಂಗಳೂರು : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯು, ದ.ಕ, ಉಡುಪಿ, ಉ.ಕ., ಕೊಡಗು ಜಿಲ್ಲೆ ಅಡಿಕೆ ಬೆಳೆಗಾರರ ಎಲ್ಲಾ ಕೃಷಿ ಸಾಲ ಮನ್ನಾ-ಪನರ್ವಸತಿ ಪ್ಯಾಕೇಜ್ ನೀಡಲು ಮತ್ತು ಅಭಿವೃದ್ಧಿ ಹೆಸರಿನಲ್ಲಿ ಕೃಷಿ ಭೂಮಿ ಸ್ವಾಧೀನದ ವಿರುದ್ಧ ಇಂದು ಮಧ್ಯಾಹ್ನ ದಕ್ಷಿಣ ಕನ್ನಡ ಡಿ.ಸಿ. ಕಚೇರಿಗೆ ಮುತ್ತಿಗೆ ಹಾಕಿತು. ನಗರದ ಜ್ಯೋತಿ ವೃತ್ತದಿಂದ ಮೆರವಣಿಗೆಯಲ್ಲಿ ಜಿಲ್ಲೆಯ ವಿವಿದೆಡೆಗಳಿಂದ ಬಂದ ರೈತರು ದ.ಕ ಜಿಲ್ಲಾಧಿಕಾರಿ ಕಛೇರಿ ಬಳಿ ಬೇಡಿಕೆಗಾಗಿ ಪ್ರತಿಭಟನೆ ನಡೆಸಿದರು. ರಾಜ್ಯ ರೈತ ಸಂಘದ […]

11 ಮರಳು ಸಾಗಣೆ ಲಾರಿ ವಶ

Thursday, April 7th, 2011
ಮರಳು ಸಾಗಣೆ ಲಾರಿ ವಶ

ಮಂಗಳೂರು : ಮಂಗಳೂರು ತಾಲೂಕು ವ್ಯಾಪ್ತಿಯ ಅಡ್ಯಾರ್, ಉಳಾಯಿಬೆಟ್ಟು ಮತ್ತು ಬಂಟ್ವಾಳ ತಾಲೂಕಿನ ಪೊಳಲಿ, ಬರಿಮಾರ್ನಲ್ಲಿ ಅಕ್ರಮವಾಗಿ ಮರಳು ಸಾಗಾಣಿಕೆ ನಡೆಸುತ್ತಿದ್ದ 11 ಲಾರಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. 5 ಮರಳು ತುಂಬಿದ ಲಾರಿಗಳು ಮತ್ತು 6 ಖಾಲಿ ಲಾರಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು ಕಂದಾಯ ಇಲಾಖೆ ಈ ದಾಳಿಯ ನೇತೃತ್ವ ವಹಿಸಿತ್ತು. ಗಣಿ ಇಲಾಖೆ ಅಧಿಕಾರಿಗಳು ಬಳಿಕ ಘಟನಾ ಸ್ಥಳಕ್ಕೆ ತಲುಪಿ ಕಾನೂನು ಕ್ರಮಕೈಗೊಂಡಿದ್ದಾರೆ. 420, 379 ನಿಯಮಗಳಡಿ ಎಫ್ ಐ ಆರ್ ದಾಖಲಿಸಿದ್ದು, ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. […]

ಕೃಷಿಗೆ ಆದ್ಯತೆ ನೀಡಿ-ಪಿ.ಶಿವಶಂಕರ್

Wednesday, April 6th, 2011
ಪಿ.ಶಿವಶಂಕರ್

ಮಂಗಳೂರು : ಜಿಲ್ಲೆಯಲ್ಲಿ ಕೃಷಿ ಹಾಗೂ ಕೃಷಿ ಪೂರಕ ಚಟುವಟಿಕೆಗಳ ಪ್ರೋತ್ಸಾಹಕ್ಕಾಗಿ ಜಿಲ್ಲಾ ಸಾಲ ಯೋಜನೆ 2011-12 ರಲ್ಲಿ ಹೆಚ್ಚಿನ ಅನುದಾನವನ್ನು ನಿಗಧಿಪಡಿಸುವ ಮೂಲಕ ಕೃಷಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಶ್ರೀ ಪಿ.ಶಿವಶಂಕರ್ ಜಿಲ್ಲೆಯ ಬ್ಯಾಂಕಿಂಗ್ ಕ್ಷೇತ್ರದ ಮುಖ್ಯಸ್ಥರಿಗೆ ಕರೆ ನೀಡಿದ್ದಾರೆ. ಅವರು ಇಂದು ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ 2011-12 ನೇ ಸಾಲಿನ ಜಿಲ್ಲಾ ಬ್ಯಾಂಕಿಂಗ್ ಸಾಲಯೋಜನೆ ಬಿಡುಗಡೆ ಮಾಡಿ ಮಾತನಾಡುತ್ತಿದ್ದರು. 2010-11 ನೇ ಸಾಲಿನಲ್ಲಿ […]

ಸೇನಾ ನೇಮಕಾತಿ ರಾೄಲಿಗೆ 3800ಕ್ಕೂ ಹೆಚ್ಚು ಆಕಾಂಕ್ಷಿಗಳು ಹಾಜರ್

Wednesday, April 6th, 2011
ಭಾರತೀಯ ಸೇನೆಯ ವಿವಿಧ ಹುದ್ದೆಗಳ ನೇಮಕಾತಿ

ಮಂಗಳೂರು : ಭಾರತೀಯ ಸೇನೆಯ ವಿವಿಧ ಹುದ್ದೆಗಳ ನೇಮಕಾತಿಗಾಗಿ ಎಪ್ರಿಲ್ 1 ರಿಂದ ಆರಂಭವಾಗಿರುವ ನೇಮಕಾತಿ ರಾೄಲಿಗೆ ರಾಜ್ಯದ 11 ಜಿಲ್ಲೆಗಳಿಂದ ಸುಮಾರು 3800 ಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗಿದ್ದಾರೆಯೆಂದು ನೆಮಕಾತಿ ರ್ಯಾಲಿಯ ಮುಖ್ಯ ಬ್ರಿಗೇಡಿಯರ್ ಎಂ.ಎಂ.ಗುಪ್ತಾ ಪತ್ರಕರ್ತರಿಗೆ ಈ ವಿಷಯ ತಿಳಿಸಿದರು. ಅವರು ಮಂಗಳಾ ಕ್ರೀಡಾಂಗಣದಲ್ಲಿ ಇಂದು ನಡೆದ ಅಭ್ಯರ್ಥಿಗಳ ಸಂದರ್ಶನದ ವೇಳೆಯಲ್ಲಿ ಮಾತನಾಡಿ, ಭಾರತೀಯ ಸೇನೆಗೆ ನೇಮಕ ವಾದಲ್ಲಿ ಆರಂಭದಲ್ಲೆ ರೂ.15,000 ಮೇಲ್ಪಟ್ಟು ವೇತನ ಸಿಗಲಿದೆ.ಇದರ ಜೊತೆಗೆ ಆಕರ್ಷಕ ಭತ್ಯೆಗಳು ದೊರೆಯಲಿವೆ. ಮೈಸೂರಿನ ಚಾಮುಂಡಿ […]

ಪ್ರಗತಿಪರಿಶೀಲನೆ: ಪೂರ್ವಭಾವಿ ಸಭೆ

Wednesday, April 6th, 2011
ಇಲಾಖೆಗಳ ಪ್ರಗತಿ ಪರಿಶೀಲನೆ

ಮಂಗಳೂರು : ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪನವರು ಏಪ್ರಿಲ್ 8ರಂದು ಜಿಲ್ಲೆಯ ಪ್ರಗತಿ ಪರಿಶೀಲನೆ ನಡೆಸಲಿದ್ದು, ಈ ಸಂಬಂಧ ಪೂರ್ವಭಾವಿಯಾಗಿ ಜಿಲ್ಲಾಧಿಕಾರಿ ಶ್ರೀ ಸುಬೋಧ್ ಯಾದವ್ ಅವರ ಅಧ್ಯಕ್ಷತೆಯಲ್ಲಿ ಎಲ್ಲ ಇಲಾಖೆಗಳ ಪ್ರಗತಿ ಪರಿಶೀಲನೆ ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಸಲಾಯಿತು. ಮಹಾನಗರಪಾಲಿಕೆ, ಜಿಲ್ಲಾ ಪಂಚಾಯತ್ ಒಳಗೊಂಡಂತೆ ಎಲ್ಲ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಯ ವಿಶೇಷ ಸಾಧನೆ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಮಾಹಿತಿಯನ್ನು ಜಿಲ್ಲಾಧಿಕಾರಿಗಳಿಗೆ ನೀಡಿದರು. ಸಭೆಯಲ್ಲಿ ಮಹಾನಗರಪಾಲಿಕೆ ಆಯುಕ್ತರಾದ ಡಾ ಕೆ ಎನ್ ವಿಜಯಪ್ರಕಾಶ್, […]

ನಿವೇಶನ ಕೊಡುವುದಿರಲಿ, ಬಿಡಿಎಗೆ ನಿರ್ದೇಶನ ನೀಡಲು ಕೂಡ ಸರಕಾರಕ್ಕೆ ಅಧಿಕಾರವಿಲ್ಲ

Tuesday, April 5th, 2011
ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು  : ದೇಶಾಭಿಮಾನದಿಂದ ಭಾರತ ವಿಶ್ವಕಪ್ ಗೆದ್ದಾಗ ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪನವರ ಉತ್ಸಾಹ ಮಿತಿಮೀರಿತ್ತು, ಅದೇ ಉತ್ಸಾಹದಲ್ಲಿ ಕ್ರಿಕೆಟ್ ಆಟಗಾರರರಿಗೆ 50×80 ಬಿಡಿಎ ನಿವೇಶನ ನೀಡುವುದಾಗಿ ಘೋಷಿಸಿಯೂಬಿಟ್ಟರು. ಇಂಥ ವಾಗ್ದಾನವನ್ನು ನೀಡಲು  ಮುಖ್ಯಮಂತ್ರಿಗಳಿಗೆ ಅಧಿಕಾರವೇ ಇಲ್ಲ. ಸರಕಾರ ನಿವೇಶನ ಕೊಡುವುದಿರಲಿ, ಬಿಡಿಎಗೆ ನಿರ್ದೇಶನ ನೀಡಲು ಕೂಡ ಸರಕಾರಕ್ಕೆ ಅಧಿಕಾರವಿಲ್ಲ. ಏಕೆಂದರೆ, ಬಿಡಿಎ ಒಂದು ಸ್ವಾಯತ್ತ ಸಂಸ್ಥೆಯಾಗಿದೆ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರಿಗೆ ನೀಡಲಾಗಿದ್ದ ಬಿಡಿಎ ನಿವೇಶನಕ್ಕೆ ಸಂಬಂಧಿಸಿದಂತೆ ಹೈಕೋರ್ಟಿನಲ್ಲಿ […]

ವಿಶ್ವ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಟೀಂ ಇಂಡಿಯಾ

Sunday, April 3rd, 2011
ವಿಶ್ವ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಟೀಂ ಇಂಡಿಯಾ

ಮುಂಬೈ : 28 ವರ್ಷಗಳ ಬಳಿಕ ಭಾರತವು  ಮುಂಬೈಯ ಕಿಕ್ಕಿರಿದ ವಾಂಖೇಡೆ ಕ್ರೀಡಾಂಗಣದಲ್ಲಿ 2011ರ ಕ್ರಿಕೆಟ್ ವಿಶ್ವಕಪ್ ಅನ್ನು ಮುಡಿಗೇರಿಸಿಕೊಂಡಿತು. ಶನಿವಾರ ನಡೆದ ಫೈನಲ್ ಪಂದ್ಯವು ಏಷ್ಯಾದ ಪ್ರಬಲ ತಂಡಗಳೆರಡರ  ಹೋರಾಟಕ್ಕೆ ಸಾಕ್ಷಿಯಾಗಿ ಭಾರತವು 1983ರ ಏಪ್ರಿಲ್ 2ರ ಶನಿವಾರ ಮಾಡಿದ ಸಾಧನೆಯನ್ನೇ ಅದೇ ವಾರ ಅದೇ ತಾರೀಕಿನಲ್ಲಿ 28 ವರ್ಷಗಳ ಬಳಿಕ ಪುನರಾವರ್ತಿಸಿ, ಏಕದಿನ ಕ್ರಿಕೆಟ್ ನಲ್ಲಿ ನಂ.1 ಪಟ್ಟಕ್ಕೇರಿತು. ಶ್ರೀಲಂಕಾ ಒಡ್ಡಿದ 275 ರನ್ನುಗಳ ಬೆಂಬತ್ತಿದ ಭಾರತ, ಅಂತಿಮವಾಗಿ 48.2 ಓವರುಗಳಲ್ಲಿ 4 ವಿಕೆಟ್ […]

ವ್ಯವಸ್ಥಿತ ಅಗ್ನಿಶಾಮಕದಳದಿಂದ ನಿರ್ಭೀತಿ : ಪಾಲೆಮಾರ್

Friday, April 1st, 2011
ಪಾಂಡೇಶ್ವರ ಅಗ್ನಿಶಾಮಕ ಠಾಣೆ

ಮಂಗಳೂರು : ನಾಗರೀಕ ಸಮಾಜದಲ್ಲಿ ನೆಮ್ಮದಿಯ ನಿರ್ಭಯ ವಾತಾವರಣ ಮೂಡಬೇಕಾದರೆ ವ್ಯವಸ್ಥಿತ, ಸುಸ್ಸಜ್ಜಿತ ಪೊಲೀಸ್ ಮತ್ತು ಅಗ್ನಿಶಾಮಕದಳಗಳಿರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜೀವಿಶಾಸ್ತ್ರ, ಬಂದರು ಮತ್ತು ಒಳನಾಡು ಜಲಸಾರಿಗೆ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಶ್ರೀ ಜೆ. ಕೃಷ್ಣ ಪಾಲೆಮಾರ್ ಅವರು ಹೇಳಿದರು. ಅವರಿಂದು ಮಂಗಳೂರು ನಗರದ ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ನೂತನ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಮಂಗಳೂರು ನಗರ ದಿನೇ ದಿನೇ ಬೆಳವಣಿಗೆಯನ್ನು ಕಾಣುತ್ತಿದ್ದು, ಬಹು ಅಂತಸ್ತುಗಳ ಕಟ್ಟಡಗಳು ವ್ಯಾಪಕವಾಗಿದೆ; ಅಗ್ನಿಶಾಮಕ […]

ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗೆ 691ಅಭ್ಯರ್ಥಿಗಗಳ ಗೈರುಹಾಜರಿ

Friday, April 1st, 2011
ಎಸ್ಎಸ್ಎಲ್ಸಿ ಪರೀಕ್ಷೆ

ಮಂಗಳೂರು  : ಇಂದಿನಿಂದ ದಿನಾಂಕ 1-4-11 ಜಿಲ್ಲೆಯ 94 ಪರೀಕ್ಷಾ ಕೇಂದ್ರಗಳಲ್ಲಿ ಆರಂಭವಾದ ಎಸ್ಎಸ್ಎಲ್ಸಿ ಪರೀಕ್ಷೆಗೆ 691 ಅಭ್ಯರ್ಥಿಗಳು ಗೈರುಹಾಜರಾಗಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಶ್ರೀ ಚಾಮೇಗೌಡ ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 32742 ವಿದ್ಯಾರ್ಥಿಗಳು ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ನೊಂದಾಯಿಸಿಕೊಂಡಿದ್ದರು. ಅತೀ ಹೆಚ್ಚು ಗೈರು ಹಾಜರಾದ 388 ವಿದ್ಯಾರ್ಥಿಗಳು ಮಂಗಳೂರು ನಗರ ಪ್ರದೇಶದಲ್ಲಾದರೆ ಮೂಡಬಿದ್ರೆಯಲ್ಲಿ ಕನಿಷ್ಠ 17 ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ. ಉಳಿದಂತೆ ಮಂಗಳೂರು ತಾಲೂಕಿನಲ್ಲಿ 92, ಬಂಟ್ವಾಳದಲ್ಲಿ 71, ಪುತ್ತೂರಿನಲ್ಲಿ […]

ಎಪ್ರಿಲ್ 1 ರಿಂದ ಶೇ.15 ಆಸ್ತಿ ತೆರಿಗೆ ಏರಿಕೆ : ಮೇಯರ್

Friday, April 1st, 2011
ಮೇಯರ್ ಪ್ರವೀಣ್

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ನಗರ ಬೆಳವಣಿಗೆ ಹಾಗೂ ಅಭಿವೃದ್ಧಿ ದೃಷ್ಠಿಯಿಂದ ನಿಯಮಾನುಸಾರ 3 ವರ್ಷಕ್ಕೊಮ್ಮೆ ಆಸ್ತಿ ತೆರಿಗೆ ಪರಿಷ್ಕರಿಸುವ ನಿಯಮದಂತೆ ಕನಿಷ್ಠ ಶೇಕಡಾ 15 ರಷ್ಟು ಆಸ್ತಿ ತೆರಿಗೆಯನ್ನು ಎಪ್ರಿಲ್ 1 ರಿಂದ ಜಾರಿಗೆ ಬರುವಂತೆ ಏರಿಸಲಾಗಿದೆಯೆಂದು ಮಂಗಳೂರು ಮಹಾನಗರಪಾಲಿಕೆ ಮಹಾ ಪೌರರಾದ ಶ್ರೀ  ಪ್ರವೀಣ್ ರವರು ತಿಳಿಸಿದ್ದಾರೆ. ಅವರು ಇಂದು ತಮ್ಮ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ ಈ ವಿಷಯ ತಿಳಿಸಿದರು.  ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ 2008-09ನೇ ಸಾಲಿನಿಂದ ಸ್ವಯಂ ಘೋಷಿತ ಆಸ್ತಿ ತೆರಿಗೆಯನ್ನು […]