ಮೌಲ್ಯಮಾಪನಾ ಸಂಭಾವನೆ, ಅತಿಥಿ ಉಪನ್ಯಾಸಕರ ವೇತನ ಪಾವತಿಗೆ ವಿವಿಯಲ್ಲಿ ದುಡ್ಡಿಲ್ಲ. ರಾಜ್ಯ ಸರಕಾರ ಮಧ್ಯ ಪ್ರವೇಶಕ್ಕೆ ಡಾ.ಹರೀಶ್ ಆಚಾರ್ಯ ಆಗ್ರಹ

Thursday, April 11th, 2024
Harish-Achar

ಮಂಗಳೂರು : ಪರೀಕ್ಷಾ ಕಾರ್ಯವನ್ನು ನಿರ್ವಹಿಸಿರುವ ಉಪನ್ಯಾಸಕರಿಗೆ ಮೌಲ್ಯಮಾಪನ ಸಂಭಾವನೆಯನ್ನು ಹಾಗೂ ಅತಿಥಿ ಉಪನ್ಯಾಸಕರುಗಳಿಗೆ ಮಾಸಿಕ ವೇತನವನ್ನು ಪಾವತಿಸಲು ಮಂಗಳೂರು ವಿಶ್ವವಿದ್ಯಾನಿಲಯವು ಪರದಾಡುತ್ತಿದೆ. ಬಾಕಿ ಪಾವತಿಸಲು ಯಾವುದೇ ಸರಿಯಾದ ಯೋಜನೆಯನ್ನು ಹೊಂದದೇ ಬೇರೆ ಬೇರೆ ಸಬೂಬುಗಳನ್ನು ಹೇಳಿಕೊಂಡು ಕಾಲಹರಣ ಮಾಡುತ್ತಿರುವ ವಿವಿಯು ಹಣಕಾಸು ನಿರ್ವಹಣೆಯಲ್ಲಿ ಸಂಪೂರ್ಣ ಅಸಮರ್ಥವಾಗಿದೆ. ಆದುದರಿಂದ ರಾಜ್ಯ ಸರಕಾರವು ತಕ್ಷಣವೇ ಮಧ್ಯ ಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯರಾದ ಡಾ.ಎಸ್ ಆರ್ ಹರೀಶ್ ಆಚಾರ್ಯ ಆಗ್ರಹಿಸಿದ್ದಾರೆ. ವಿಶ್ವವಿದ್ಯಾಲಯವು ಫೆಬ್ರವರಿ […]

ದ್ವಿತೀಯ ಪಿಯುಸಿ ಫಲಿತಾಂಶ : ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ, ಉಡುಪಿ ದ್ವಿತೀಯ ಸ್ಥಾನ

Wednesday, April 10th, 2024
ದ್ವಿತೀಯ ಪಿಯುಸಿ ಫಲಿತಾಂಶ : ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ, ಉಡುಪಿ ದ್ವಿತೀಯ ಸ್ಥಾನ

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆ 97.37 ಶೇಕಡ ದೊಂದಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. 96.80 ಶೇಕಡದೊಂದಿಗೆ ಉಡುಪಿ ದ್ವಿತೀಯ ಸ್ಥಾನದಲ್ಲಿದ್ದರೆ, ಗದಗ ಜಿಲ್ಲೆ 72.86 ಶೇಕಡ ದೊಂದಿಗೆ ಕೊನೆಯ ಸ್ಥಾನದಲ್ಲಿದೆ. ಪಿಯು ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.in ಮತ್ತು pue.kar.nic ಮೂಲಕ ದ್ವಿತೀಯ ಪಿಯು ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ. ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು ಪಾಸಾಗಿದ್ದರೆ, ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ […]

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ರಂಜಾನ್​ ಹಬ್ಬ ಆಚರಣೆ

Wednesday, April 10th, 2024
eid-ul-fiter

ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮುಸ್ಲಿಮರು ರಂಜಾನ್​ ಹಬ್ಬವನ್ನು ಬುಧವಾರ ಆಚರಿಸಿದರು. ಮಂಗಳವಾರ ಚಂದ್ರ ದರ್ಶನವಾದ ಹಿನ್ನಲೆ ಮಂಗಳೂರು ಕೇಂದ್ರ ಜುಮ್ಮಾ ಮಸೀದಿ ಬಂದರು ದಕ್ಷಿಣಕನ್ನಡ ಜಿಲ್ಲಾ ಖಾಝಿಯವರಾದ ತ್ವಾಕ ಅಹಮದ್ ಮುಸ್ಲಿಯಾರ್​ ಅವರು ಬುಧವಾರ ಘೋಷಿಸಿದಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ರಂಜಾನ್​ ಆಚರಿಸಿದ್ದಾರೆ. ಮುಸ್ಲಿಮರು ಇಂದು ಬೆಳಗ್ಗೆ ಮಸೀದಿಗೆ ತೆರಳಿ ನಮಾಜ್ ಸಲ್ಲಿಸಿದರು. ಹೊಸ ಬಟ್ಟೆಗಳನ್ನು ಧರಿಸಿ ಸಂಭ್ರಮಿಸಿ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಸ್ಪೀಕರ್​ ಯು.ಟಿ. ಖಾದರ್ ಅವರು […]

ಪಂಚಾಯತ್ ಕ್ಲರ್ಕ್ ತನ್ನ ಇಬ್ಬರು ಮಕ್ಕಳ ಜೊತೆ ಆತ್ಮಹತ್ಯೆ

Tuesday, April 9th, 2024
sajina

ಕಾಸರಗೋಡು : ಪಂಚಾಯತ್ ನ ಕ್ಲರ್ಕ್ ಮತ್ತು ಅವರ ಇಬ್ಬರು ಮಕ್ಕಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಚೀಮೇನಿ ಸಮೀಪದ ಚೆಂಬ್ರಕಾನ ದಲ್ಲಿ ನಡೆದಿದೆ. ಚೆಂಬ್ರಕಾನ ದ ರಂಜಿತ್ ರವರ ಪತ್ನಿ ಸಜೀನಾ ( 34) , ಮಕ್ಕಳಾದ ಗೌತಮ್ ( 9) ಮತ್ತು ತೇಜಸ್ ( 6) ಮೃತಪಟ್ಟವರು. ಮಂಗಳವಾರ ಮಧ್ಯಾಹ್ನ ಘಟನೆ ಬೆಳಕಿಗೆ ಬಂದಿದೆ. ಮಕ್ಕಳು ವಿಷ ಸೇವಿಸಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು , ಸಜೀನಾ ಕೈ ನರ ಕತ್ತರಿಸಿ ಬಳಿಕ ನೇಣು ಬಿಗಿದು […]

ಎಪ್ರಿಲ್ 14ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ

Monday, April 8th, 2024
sunil-kumar

ಮಂಗಳೂರು: ಎಪ್ರಿಲ್ 14ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರಕ್ಕಾಗಿ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಗೆ ಸಂಜೆ 3ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ಕರ್ನಾಟಕ ಚುನಾವಣಾ ಪ್ರವಾಸದ ಹಿನ್ನೆಲೆಯಲ್ಲಿ ಆಗಮಿಸುತ್ತಿರುವ ನರೇಂದ್ರ ಮೋದಿ ಎ.14ರಂದು ಮಂಗಳೂರಿನ ಕಾರ್ಯಕ್ರಮ ಮುಗಿಸಿ ಸಂಜೆ 5.30ಕ್ಕೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ರೋಡ್ ಶೋ ದಲ್ಲಿ ಭಾಗವಹಿಸಲಿದ್ದಾರೆ ಎಂದು ಸುನಿಲ್ […]

17-ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ: ಅಂತಿಮ ಕಣದಲ್ಲಿ 9 ಅಭ್ಯರ್ಥಿಗಳು

Monday, April 8th, 2024
Brijesh Padmaprasad

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧೆ ಬಯಸಿ ಉಮೇದುವಾರಿಕೆ ಸಲ್ಲಿಸಿರುವ ಅಭ್ಯರ್ಥಿಗಳ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಏ.8ರ ಸೋಮವಾರ ಪಕ್ಷೇತರ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದ್ದ ಸತೀಶ್ ಬೂಡುಮಕ್ಕಿ ಅವರು ನಾಮಪತ್ರ ಹಿಂಪಡೆದುಕೊಂಡಿದ್ದಾರೆ. ಅದರೊಂದಿಗೆ ಅಂತಿಮವಾಗಿ 9 ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಉಳಿದಿದ್ದಾರೆ. ಅಭ್ಯರ್ಥಿಗಳ ವಿವರ ಇಂತಿದೆ. ಬಹುಜನ ಸಮಾಜ ಪಾರ್ಟಿಯ ಅಭ್ಯರ್ಥಿ ಕಾಂತಪ್ಪ ಅಲಂಗಾರ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ […]

ವರ್ಕಾಡಿಯಲ್ಲಿ ‘ಕಾವೀದ ಪುಣ್ಯೋತ್ಸವ’ ತುಳು ಭಕ್ತಿ ಗೀತೆ ಬಿಡುಗಡೆ

Friday, April 5th, 2024
kavida-punyotsava

ಮಂಜೇಶ್ವರ : ವರ್ಕಾಡಿ ಶ್ರೀ ಕಾವೀ ಸುಬ್ರಹ್ಮಣ್ಯ ದೇವಸ್ಥಾನ ಇದರ ಬ್ರಹ್ಮಕಲಶೋತ್ಸವದ ವೇದಿಕೆಯಲ್ಲಿ ಶಿವಪ್ರಸಾದ್ ತೌಡುಗೋಳಿ ಸಾಹಿತ್ಯ ಬರೆದು ನಿರ್ಮಾಣ ಮಾಡಿದ ‘ಕಾವೀದ ಪುಣ್ಯೋತ್ಸವ’ ತುಳು ಭಕ್ತಿ ಗೀತೆ ಬಿಡುಗಡೆ ಕಾರ್ಯಕ್ರಮ ಏಪ್ರಿಲ್ 3 ರ ಬುಧವಾರ ನಡೆಯಿತು. ಯತಿ ದ್ವಯರಾದ ಪರಮಪೂಜ್ಯ ಶ್ರೀ ಶ್ರೀ ತೀರ್ಥ ಶ್ರೀಪಾದರು ಶ್ರೀ ಚಿತ್ರಾಪುರ ಮಠ, ಪರಮಪೂಜ್ಯ ಶ್ರೀ ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಕೊಂಡೆಯೂರು ಇವರ ದಿವ್ಯಹಸ್ತದಿಂದ ‘ಕಾವೀದ ಪುಣ್ಯೋತ್ಸವ’ ತುಳು ಭಕ್ತಿ ಗೀತೆ ಬಿಡುಗಡೆ ನಡೆಯಿತು. […]

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

Thursday, April 4th, 2024
Brijesh-Chowta

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಗುರುವಾರ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಮುನ್ನ ಸಮೀಪದ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಬಂಟ್ಸ್ ಹಾಸ್ಟೆಲ್ ಪಕ್ಕದ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಕಚೇರಿಯಿಂದ ತೆರೆದ ವಾಹನದಲ್ಲಿ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಅವರು ನಾಮಪತ್ರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ […]

ದಕ್ಷಿಣ ಕನ್ನಡ ಕ್ಷೇತ್ರದ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ ಸಲ್ಲಿಕೆ

Wednesday, April 3rd, 2024
R-Padmaraj

ಮಂಗಳೂರು: ದಕ್ಷಿಣ ಕನ್ನಡ ಕ್ಷೇತ್ರದ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ಆರ್. ಅವರು ಬುಧವಾರ ಏಪ್ರಿಲ್ 3 ರಂದು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವ ಮುನ್ನ ಬುಧವಾರ ಬೆಳಿಗ್ಗೆ ಶರವು ಶ್ರೀ ಮಹಾಗಣಪತಿ ದೇವಸ್ಥಾನ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕಂಕನಾಡಿ ಶ್ರೀ ಬ್ತಹ್ಮಬೈದರ್ಕಳ ಗರೋಡಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಂತರ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಅರ್ಚನೆ ಸಲ್ಲಿಸಿದ ಬಳಿಕ ಮೆರವಣಿಗೆಗೆ ಚಾಲನೆ ನೀಡಲಾಯಿತು.ಗೊಂಬೆ ಬಳಗ, ಚೆಂಡೆ, ಕೊಂಬು ಸಹಿತ ಮೆರವಣಿಗೆಯಲ್ಲಿ […]

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ನೇಮಕ

Tuesday, April 2nd, 2024
Kishan-Hegde

ಉಡುಪಿ : ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ನೇಮಕ ಮಾಡಿದ್ದಾರೆ. ಏಪ್ರಿಲ್ 01 ರಂದು ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರನ್ನು ನೇಮಕಾತಿ ಮಾಡಲಾಗಿದ್ದು, ಇತ್ತೀಚೆಗಷ್ಟೇ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ಅವರನ್ನು ನೇಮಿಸಲಾಗಿತ್ತು. ಕಾಂಗ್ರೆಸ್ ಪಕ್ಷದ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರು, ಪಕ್ಷದಲ್ಲಿ ಹಲವು ವರ್ಷಗಳಿಂದ ಸಾಕಷ್ಟು ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ.