ಜಿಲ್ಲೆಯ ಯಾವುದೇ ಶಾಲೆಗೆ ಉಡುಪಿ ಜಿಲ್ಲಾಡಳಿತ ರಜೆ ಘೋಷಣೆ ಮಾಡಿಲ್ಲ: ಪ್ರಿಯಾಂಕಾ ಮೇರಿ

Saturday, July 7th, 2018
priyanka

ಉಡುಪಿ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಯಾವುದೇ ಶಾಲೆಗೆ ಉಡುಪಿ ಜಿಲ್ಲಾಡಳಿತ ರಜೆ ಘೋಷಣೆ ಮಾಡಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಆದರೆ ಮಳೆಯ ತೀವ್ರತೆಗೆ ಅನುಗುಣವಾಗಿ ನೆರೆ ಭೀತಿ ಇರುವ ಶಾಲೆಗಳಿಗೆ ರಜೆ ನೀಡುವ ಅಧಿಕಾರವನ್ನು ಸಂಬಂಧಿಸಿದ ಶಾಲಾ ಮುಖ್ಯೋಪಾಧ್ಯಾಯ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಾಗೂ ಶಾಲಾ ಅಭಿವೃದ್ಧಿ ಸಮಿತಿಗೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.

ಚಿಕ್ಕಮಗಳೂರಲ್ಲಿ ಭಾರಿ ಮಳೆ..ಭದ್ರಾ ನದಿ ಸುತುವೆ ಮುಳುಗಡೆಯ ಸಾಧ್ಯತೆ!

Saturday, July 7th, 2018
chikmagaluru

ಚಿಕ್ಕಮಗಳೂರು: ಚಿಕ್ಕಮಗಳೂರಲ್ಲಿ ನಿನ್ನೆಯಿಂದ ಸುರಿಯುತ್ತಿರುವ ಭಾರಿ ಮಳೆಗೆ ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಹೊರನಾಡು ಸಮೀಪದ ಹೆಬ್ಬಾಳೆ ಸೇತುವೆಗೆ ಭದ್ರಾ ನದಿಯ ನೀರು ಅಪ್ಪಳಿಸುತ್ತಿರುವ ಹಿನ್ನೆಲೆಯಲ್ಲಿ ಸುತುವೆ ಮುಳುಗಡೆಯ ಸಾಧ್ಯತೆ ಕಂಡುಬರುತ್ತಿದೆ. ಹೆಬ್ಬಾಳೆ ಸೇತುವೆ ಮುಳುಗಡೆಯಾದಲ್ಲಿ ಕಳಸ – ಹೊರನಾಡು ರಸ್ತೆ ಸಂಚಾರಕ್ಕೆ ಸಾಧ್ಯವಾಗದೆ ಸಂಪರ್ಕಕ್ಕೆ ತಡೆಯಾಗಲಿದೆ. ಶುಕ್ರವಾರ ರಾತ್ರಿಯಿಂದ ಕುದುರೆಮುಖ, ಕಳಸ, ಹೊರನಾಡು ಸುತ್ತಮುತ್ತ ನಿರಂತರ ಮಳೆಯ ಹಿನ್ನೆಲೆಯಲ್ಲಿ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ. ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ಹಲವೆಡೆ ರಸ್ತೆ ಸಂಪರ್ಕ […]

ಮೀನಿನಲ್ಲಿ ರಾಸಾಯನಿಕ ಅಂಶ.. ಪತ್ತೆ ಹಚ್ಚುವ ಕಿಟ್‌ ಇದೀಗ ಮಂಗಳೂರಿಗೆ!

Saturday, July 7th, 2018
fisheries

ಮಂಗಳೂರು: ಇತ್ತೀಚೆಗೆ ಮೀನುಗಳಿಗೆ ರಾಸಾಯನಿಕ ಸಿಂಪಡಿಸಿ ತಾಜಾವಾಗಿಡಲಾಗುತ್ತಿದೆ ಎಂಬ ಸುದ್ದಿಗಳು ಹರಡುತ್ತಿರುವುದರಿಂದ ಕರಾವಳಿಯಲ್ಲಿ ಮೀನು ಪ್ರೀಯರು ಆತಂಕಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಮೀನಿನ ತಾಜಾತನ ಕಾಪಾಡುವುದಕ್ಕೆ “ಫಾರ್ಮಾಲಿನ್‌’ ಅಥವಾ “ಅಮೋನಿಯಾ’ ರಾಸಾಯನಿಕ ವಸ್ತುಗಳನ್ನು ಪತ್ತೆ ಹಚ್ಚುವ ಕಿಟ್‌ ಇದೀಗ ಮಂಗಳೂರಿಗೂ ಬಂದಿದೆ. ಈ ಕಿಟ್‌ ಅನ್ನು ಕೇರಳದ ಕೊಚ್ಚಿಯಲ್ಲಿರುವ ಕೇಂದ್ರ ಮೀನುಗಾರಿಕೆ ತಂತ್ರಜ್ಞಾನ ಸಂಸ್ಥೆಯಿಂದ ತರಿಸಿಕೊಳ್ಳಲಾಗಿದೆ. ಜಿಲ್ಲೆಯ ಆಹಾರ ಇಲಾಖೆಯ ಅಧಿಕಾರಿಗಳಿಗೆ ಈ ಕಿಟ್ ಹಸ್ತಾಂತರಿಸಲಾಗಿದ್ದು ಮಾರುಕಟ್ಟೆ ಪ್ರದೇಶದಲ್ಲಿ, ಮೀನು ಮಾರಾಟವಾಗುವ ಜಾಗಗಳಲ್ಲಿ ರಾಸಾಯನಿಕ ಮಿಶ್ರಣ ಕುರಿತಂತೆ ತಪಾಸಣೆ […]

ಕಡಲ್ಕೊರೆತಕ್ಕೆ ಸಿಗದ ಶಾಶ್ವತ ಪರಿಹಾರ…ಕಡಲಿನ ಒಡಲು ಸೇರುತ್ತಿರುವ ಭೂಭಾಗಗಳು!

Saturday, July 7th, 2018
parmanent

ಉಡುಪಿ: ಮಳೆಗಾಲ ಬಂತಂದ್ರೆ ಸಾಕು ಕಡಲತಡಿಯ ನಿವಾಸಿಗಳಲ್ಲಿ ಆತಂಕ ಮನೆ ಮಾಡುತ್ತವೆ.. ಕಡಲ್ಕೊರೆತಕ್ಕೆ ಸಿಕ್ಕಿ ತಡಿಯ ಭೂಭಾಗವು ಕಡಲಿನ ಒಡಲನ್ನು ಸೇರುತ್ತವೆ. ಈ ಬಾರಿಯೂ ಆ ಆತಂಕ ಮತ್ತೆ ಮುಂದುವರೆದಿದ್ದು, ಮನೆ-ಮಠಗಳು ಕಡಲಗರ್ಭ ಸೇರಿದರೆ ಅಚ್ಚರಿಯಿಲ್ಲ. ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ಒದಗಿಸದ ಹೊರತು, ಕಾಟಾಚಾರದ ಪರಿಹಾರ ನೀರಲ್ಲಿಟ್ಟ ಹೋಮದಂತಾಗಿದೆ.. ಈಗ ಉಡುಪಿಯ ಪಡುಕೆರೆ ಪ್ರದೇಶದ ಕಡಲತೀರದಲ್ಲಿ ಕಡಲ್ಕೊರೆತ ಸಂಭವಿಸಿ ಬಹುಭಾಗ ಕಡಲಿನ ಒಡಲು ಸೇರಿದ್ದು ಇದಕ್ಕೊಂದು ಉದಾಹರಣೆ. ಮಳೆಗಾಲದಲ್ಲಿ ಪ್ರತಿ ವರ್ಷ ಸಮುದ್ರ ತೀರದಲ್ಲಿ ಕಡಲ್ಕೊರೆತ ಸಂಭವಿಸುತ್ತದೆ. […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ..ಕಾಂಪೌಂಡ್ ಕುಸಿದು ಇಬ್ಬರು ಸಾವು!

Saturday, July 7th, 2018
collapse

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆಯಿಂದ ಸುರಿಯುತ್ತಿರುವ ಭಾರಿ ಮಳೆಗೆ ಇಬ್ಬರು ಮೃತಪಟ್ಟಿದ್ದಾರೆ. ಪುತ್ತೂರು ತಾಲೂಕಿನ ಹೆಬ್ಬಾರ್ ಬೈಲ್ ಎಂಬಲ್ಲಿ ಗುಡ್ಡದ ಬದಿಯಲ್ಲಿದ್ದ ಮನೆಗೆ ಗುಡ್ಡ, ಕಾಂಪೌಂಡ್ ಕುಸಿದು ಮನೆಯಲ್ಲಿ ‌ಮಲಗಿದ್ದ ಇಬ್ಬರು ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಪಾರ್ವತಿ (70), ಧನುಷ್ (11) ಎಂದು ಗುರುತಿಸಲಾಗಿದೆ. ಪುತ್ತೂರು ‌ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಗೆ‌ ನದಿಗಳು ತುಂಬಿದ್ದು ತಗ್ಗು ಪ್ರದೇಶಗಳು ಜಲಾವೃತವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬೆಳ್ತಂಗಡಿ, ಸುಳ್ಯ, ಮೂಡಬಿದ್ರೆಯಲ್ಲಿ ಶಾಲೆಗಳಿಗೆ ರಜೆ […]

ಉಜಿರೆ : ತಮ್ಮ ತಲೆಯ ಕೂದಲನ್ನು ಕೈಯಿಂದ ಎಳೆದು ತೆಗೆದ ವೀರ ಸಾಗರ ಮುನಿ

Friday, July 6th, 2018
Sagara Muni

ಉಜಿರೆ: ಹೊಸ್ಮಾರಿನ ಸಿದ್ದರವನ ಕ್ಷೇತ್ರದಲ್ಲಿ ಶುಕ್ರವಾರ ವೀರ ಸಾಗರ ಮುನಿ ಮಹಾರಾಜರ ಕೇಶಲೋಚನ ಕಾರ್ಯಕ್ರಮ ನಡೆಯಿತು. ಜೈನಧರ್ಮದ ಸಂಪ್ರದಾಯದಂತೆ ದಿಗಂಬರ ಮುನಿಗಳು ತಮ್ಮ ತಲೆಯ ಕೂದಲನ್ನು ಕೈಯಿಂದ ಎಳೆದು ತೆಗೆಯುವುದಕ್ಕೆ ಕೇಶಲೋಚನ ಎನ್ನುತ್ತಾರೆ. ಊರ-ಪರವೂರ ಶ್ರಾವಕ – ಶ್ರಾವಕಿಯರು ಪವಿತ್ರ ಕಾರ್ಯವನ್ನು ವೀಕ್ಷಿಸಿದರು. ಚಾತುರ್ಮಾಸ: 108 ಶ್ರೀ ವೀರ ಸಾಗರ ಮುನಿ ಮಹಾರಾಜರು ಕಾರ್ಕಳದಲ್ಲಿ ಚಾತುರ್ಮಾಸ ವೃತಾಚರಣೆ ಮಾಡಲಿದ್ದು ಇದೇ 11 ರಂದು ಬುಧವಾರ ಕಾರ್ಕಳ ಪುರಪ್ರವೇಶ ಮಾಡಲಿದ್ದಾರೆ. ಕಾರ್ಕಳದ ಜೈನಮಠದ ಲಲಿತಕೀರ್ತಿ ಭಟ್ಟಾರಕರ ನೇತೃತ್ವದಲ್ಲಿ ವಿವಿಧ ಸಮಿತಿಗಳನ್ನು ರಚಿಸಿದ್ದು […]

ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆಳ್ವಾಸ್ ಪ್ರಗತಿ ವರದಾನವಾಗಿದೆ : ಸಂಸದ ನಳಿನ್

Friday, July 6th, 2018
Alvas pragathi

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಕ್ಯಾಂಪಸ್‍ನಲ್ಲಿ ಎರಡು ದಿನಗಳು ನಡೆಯುವ 10ನೇ ಆವೃತ್ತಿಯ ಅಳ್ವಾಸ್ ಪ್ರಗತಿ- ಬೃಹತ್ ಉದ್ಯೋಗ ಮೇಳಕ್ಕೆ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು. ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಆಳ್ವಾಸ್ ಪ್ರಗತಿಗೆ ಚಾಲನೆ ನೀಡಿ ಮಾತನಾಡಿ, ತಮ್ಮ ಅರ್ಹತೆಗೆ ಅನುಗುಣವಾಗಿ ಉದ್ಯೋಗ ಪಡೆಯಲು ನಾಡಿನ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆಳ್ವಾಸ್ ಪ್ರಗತಿ ವರದಾನವಾಗಿದೆ. ಪಾರದರ್ಶಕವಾಗಿ ನಡೆಯುವ ಉದ್ಯೋಗಮೇಳದಿಂದಾಗಿ ಯುವಜನರು ಉದ್ಯೋಗ ಪಡೆಯಲು ಬೇಕಾದ ಆತ್ಮವಿಶ್ವಾಸವನ್ನು […]

ಪ್ರಜ್ವಲ್ ಯುವಕ ಮಂಡಲಕ್ಕೆ ವಿಂಶತಿ ಸಂಭ್ರಮ

Friday, July 6th, 2018
Prajwal youth club

ಮಂಗಳೂರು  : ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾರಂಗದಲ್ಲಿ ನಿರಂತರವಾಗಿ ತೊಡಗಿಸಿಕೊಂಡ ಪ್ರಜ್ವಲ್ ಯುವಕ ಮಂಡಲ (ರಿ) ಈಗ ಇಪ್ಪತ್ತು ವರ್ಷದ ಸಂಭ್ರಮದಲ್ಲಿದೆ. ಮಂಗಳೂರು ನಗರದ ಸೂಟರ್ ಪೇಟೆಯಲ್ಲಿ ಯುವಕರ ಸಂಘಟನೆ ಯೊಂದು ಇಪ್ಪತ್ತು ವರ್ಷಗಳ ಹಿಂದೆ ಸ್ಥಾಪನೆಗೊಂಡು ನಿರಂತರವಾಗಿ ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ಮಹಾನ್ ಸಾಧನೆಯೇ ಸರಿ. 1998ರ ಜೂನ್ -28ರಂದು ಉದ್ಘಾಟನೆಗೊಂಡ ಪ್ರಜ್ವಲ್ ಯುವಕ ಮಂಡಲ ತನ್ನ ಇಪ್ಪತ್ತು ವರ್ಷಗಳನ್ನು ಪೂರೈಸಿದ ವಿಂಶತಿ ಸಂಭ್ರಮವನ್ನು ಜುಲೈ-8ರಂದು ಆಚರಿಸುತ್ತಿದೆ. ಒಂದು ಅರ್ಥಪೂರ್ಣ ಕಾರ್ಯಕ್ರಮದ ಜೊತೆಗೆ […]

ಮಕ್ಕಳ ಕಳ್ಳ ಎಂದು ಭಾವಿಸಿ ಮಗುವಿನ ಅಪ್ಪನ ಮೇಲೆ ಹಲ್ಲೆ..!

Friday, July 6th, 2018
mangaluru

ಮಂಗಳೂರು: ಮಕ್ಕಳ ಕಳ್ಳ ಎಂದು ಭಾವಿಸಿ ಮಗುವಿನ ಅಪ್ಪನ ಮೇಲೆ ಹಲ್ಲೆ ನಡೆಸಿದ ಪ್ರಕರಣ ಬೆಳಕಿಗೆ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಈ ಘಟನೆ ಸಂಭವಿಸಿದೆ. ಮಗುವಿನ ಜೊತೆ ಹೋಟೆಲ್ ನಲ್ಲಿ ಕೂತಿದ್ದ ವ್ಯಕ್ತಿಯನ್ನು ನೋಡಿದ ಸ್ಥಳೀಯರು ಅನುಮಾನಗೊಂಡು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತ ಅನುಮಾನಸ್ಪದವಾಗಿ ಉತ್ತರಿಸಿದ್ದಾನೆ. ಅಷ್ಟೇ ಅಲ್ಲ ಆತ ವಿಪರೀತವಾಗಿ ಕುಡಿದಿದ್ದ. ಇದನ್ನೆಲ್ಲಾ ಗಮನಿಸಿದ ಸಾರ್ವಜನಿಕರು ಈತ ಮಕ್ಕಳ ಕಳ್ಳನಿರಬೇಕೆಂದು ಭಾವಿಸಿ ಥಳಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ […]

ಶಾಲೆ ಬಿಟ್ಟ ನಂತರ ಅಮ್ಮನ ಜೊತೆ ಟ್ರಾಫಿಕ್ ಸಿಗ್ನಲ್​ನ ಗೂಡಿನಲ್ಲಿ..ಸಾಮಾಜಿಕ ಜಾಲತಾಣದಲ್ಲಿ ವೈರಲ್!

Friday, July 6th, 2018
trafic-police

ಮಂಗಳೂರು: ಮಹಿಳಾ ಪೊಲೀಸ್ ಒಬ್ಬರು ಟ್ರಾಫಿಕ್ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಶಾಲೆಗೆ ಹೋಗುವ ಅವರ ಮಗು ಶಾಲೆ ಬಿಟ್ಟ ನಂತರ ಅಮ್ಮನ ಜೊತೆ ಟ್ರಾಫಿಕ್ ಸಿಗ್ನಲ್ನ ಗೂಡಿನಲ್ಲಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುಳ್ಯದಲ್ಲಿ ಇತ್ತೀಚೆಗೆ ಯೋಗಿತ ಎಂಬುವರನ್ನು ಟ್ರಾಫಿಕ್ ಪೊಲೀಸ್ ಆಗಿ ನಿಯೋಜಿಸಲಾಗಿತ್ತು. ಯೋಗಿತ ಅವರು ಅನಾರೋಗ್ಯದ ಕಾರಣ ಒಂದು ತಿಂಗಳು ರಜೆ ತೆಗೆದುಕೊಂಡು ಜೂನ್ 17 ಕ್ಕೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಈ ಸಂದರ್ಭದಲ್ಲಿ ಅವರನ್ನು ಟ್ರಾಫಿಕ್ ಪೊಲೀಸ್ ಆಗಿ ನಿಯೋಜಿಸಲಾಗಿತ್ತು. ಯೋಗಿತ ಅವರ […]