ಹತ್ತನೇ ತರಗತಿಯ ವಿದ್ಯಾರ್ಥಿನಿಯರನ್ನು ಕೋಣೆಯಲ್ಲಿಸಿರಿ ಬ್ಯಾಡ್‌ ಟಚ್‌ ಮಾಡುವ ಅಧ್ಯಾಪಕ

Friday, March 15th, 2024
Guruva-Mogera

ಮೂಡುಬಿದ್ರೆ : ಹತ್ತನೇ ತರಗತಿಯ ವಿದ್ಯಾರ್ಥಿನಿಯರಿಗೆ ಕಲ್ಲಮುಂಡ್ಕೂರು ಸರ್ಕಾರಿ ಅನುದಾನಿತ ಶಾಲೆಯ ಅಧ್ಯಾಪಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಶಾಲೆಯ ಸಹ ಅಧ್ಯಾಪಕ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ನಿವಾಸಿ ಗುರುವ ಮೊಗೇರಾ ಎಂದು ಗುರುತಿಸಲಾಗಿದೆ. ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿಯರಿಗೆ ಅಧ್ಯಾಪಕ ಗುರುವ ಮೊಗೇರಾ ಲೈಂಗಿಕ ಕಿರುಕುಳ ನೀಡಿರುವ ಕುರಿತು ಶಾಲೆಯ ಮುಖ್ಯೋಪಾಧ್ಯಾಯ ಸದಾನಂದ ಅವರು ಮೂಡುಬಿದ್ರೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಫೆ.28ರಂದು ಹತ್ತನೇ ತರಗತಿಯ ಕೆಲವು ವಿದ್ಯಾರ್ಥಿನಿಯರು ಬಂದು ಸಹ […]

ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ  ಮರಳಿ  ಬಿಜೆಪಿಗೆ ಅಧಿಕೃತ ಸೇರ್ಪಡೆ

Thursday, March 14th, 2024
ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ  ಮರಳಿ  ಬಿಜೆಪಿಗೆ ಅಧಿಕೃತ ಸೇರ್ಪಡೆ

ಬೆಂಗಳೂರು : ಕಳೆದ ಬಾರಿ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿದ್ದ ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಈ ಬಾರಿಯ ಲೋಕಸಭಾ ಅಭ್ಯರ್ಥಿ ಸ್ಥಾನ ಬದಲಾವಣೆಯಾದ ಹಿನ್ನಲೆಯಲ್ಲಿ ಕೊಟ್ಟ ಮಾತಿನಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಈ ಸಂಧರ್ಭ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಪುತ್ತೂರು ಮಂಡಲಾಧ್ಯಕ್ಷ ರಾಧಾಕೃಷ್ಣ ಆಳ್ವ, ಪಿಜಿ ಜನನ್ನಿವಾಸ ರಾವ್, ಪುತ್ತಿಲ ಪರಿವಾರದ ಮುಖ್ಯಸ್ಥ ಪ್ರಸನ್ನ ಮರ್ತಾ ಮೊದಲಾದವರು […]

ಆಳ್ವಾಸ್​ ಶಿಕ್ಷಣ ಸಂಸ್ಥೆಯ ಹಾಸ್ಟೆಲ್​ನಲ್ಲಿ ಕೋಲಾರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ, ಒಕ್ಕೂಟದಿಂದ ಪ್ರತಿಭಟನೆ

Thursday, March 14th, 2024
Alvas-student

ಮೂಡಬಿದ್ರೆ : ಆಳ್ವಾಸ್​ ಶಿಕ್ಷಣ ಸಂಸ್ಥೆಯ ಹಾಸ್ಟೆಲ್​ನಲ್ಲಿ ಕೋಲಾರ ಮೂಲದ ಸಂಜಯ್ ಭುವನ್ (16) ಎಂಬ ವಿದ್ಯಾರ್ಥಿ ಮಾ.12 ರಂದು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಡವಾಗಿ ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಕಾಲೇಜಿಗೆ ರಾಷ್ಟ್ರೀಯ ವಿದ್ಯಾರ್ಥಿಗಳ ಒಕ್ಕೂಟ (NSUI) ನ ಜಿಲ್ಲಾಧ್ಯಕ್ಷ ಸುಹಾನ್ ನೇತೃತ್ವದಲ್ಲಿ ಮುತ್ತಿಗೆ‌ ಹಾಕಲಾಗಿದೆ. ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸರಿಂದ ಕಾಲೇಜು ಬಳಿ ಭದ್ರತೆ ಒದಗಿಸಲಾಗಿದೆ. ಸಂಜಯ್ ಭುವನ್ ಚಿಲ್ಲರೆ ಹಣ ತೆಗೆದು ಆಡಳಿತ ಮಂಡಳಿಗೆ ತಿಳಿದು ಅವಮಾನಗೊಂಡು ಈ ನಿರ್ಧಾರಕೈ ಗೊಂಡಿದ್ದಾಗಿ […]

ಉಡುಪಿ ಕೊಲೆ ಆರೋಪಿ ಪ್ರವೀಣ್‌ ಚೌಗುಲೆ ಗೆ ಕಿಡ್ನಿ ಸ್ಟೋನ್‌, ವಿಚಾರಣೆ ಮಾ. 27ಕ್ಕೆ ಮುಂದೂಡಿದೆ.

Thursday, March 14th, 2024
Praveen-Arun-Chougule

ಉಡುಪಿ : ಉಡುಪಿ ನೇಜಾರಿನ ಕೊಲೆ ಆರೋಪಿ ಪ್ರವೀಣ್‌ ಚೌಗುಲೆ ಮಂಗಳವಾರ ನಡೆಯಬೇಕಿದ್ದ ಚಾರ್ಜ್‌ (ಆಪಾದನೆ ವಾಚಿಸುವ) ಪ್ರಕ್ರಿಯೆಯನ್ನು ಜಿಲ್ಲಾ ಎರಡನೇ ಹೆಚ್ಚುವರಿ ಸತ್ರ ನ್ಯಾಯಾಲಯವು ಮಾ. 27ಕ್ಕೆ ಮುಂದೂಡಿದೆ. ಮಾ. 7ರಂದು ನ್ಯಾಯಾಧೀಶ ದಿನೇಶ್‌ ಹೆಗ್ಡೆ, ಈ ಪ್ರಕರಣದಲ್ಲಿ ಆರೋಪಿ ವಿರುದ್ಧ ಆಪಾದನೆ ವಾಚಿಸಲು ಬೇಕಾದ ಸಾಕ್ಷ್ಯಾಧಾರಗಳಿವೆ ಎಂದು ತೀರ್ಮಾನಿಸಿ ಮಾ. 13ರಂದು ಚಾರ್ಜ್‌ ದಿನ ನಿಗದಿಪಡಿಸಿ ಆದೇಶ ನೀಡಿದ್ದರು. ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ಆರೋಪಿಯನ್ನು ಕೋರ್ಟ್‌ಗೆ ಹಾಜರುಪಡಿಸುವಂತೆ ಮಲ್ಪೆ ಪೊಲೀಸರಿಗೆ ನಿರ್ದೇಶಿಸಿದ್ದರು. ಆದರೆ […]

ಗ್ಯಾರೇಜ್ ನಲ್ಲಿ ನಿಂತಿದ್ದ ಮಾಲಕ ಮೇಲೆ ಬಸ್ ಡಿಕ್ಕಿ, ಚಿಕಿತ್ಸೆ ಫಲಕಾರಿಯಾಗದೆ ಸಾವು

Thursday, March 14th, 2024
dayananda-shetty

ಉಡುಪಿ : ಬಸ್ ಮಾಲಕನೋರ್ವ ತನ್ನ ಸ್ವಂತ ಬಸ್ ಡಿಕ್ಕಿ ಹೊಡೆದು ಮೃತಪಟ್ಟ ದಾರುಣ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದಯಾನಂದ ಶೆಟ್ಟಿ ಮೃತಪಟ್ಟ ದುರ್ದೈವಿಯಾಗಿದ್ದಾರೆ. ದಯಾನಂದ ಶೆಟ್ಟಿ ಅವರ ಬಸ್ ಅನ್ನು ರಿಪೇರಿಗಾಗಿ ಅತ್ರಾಡಿಯ ಗ್ಯಾರೇಜ್​ಗೆ ಕೊಂಡೊಯ್ಯಲಾಗಿತ್ತು. ಹೀಗಾಗಿ ತಮ್ಮ ಬಸ್​ನ ದುರಸ್ತಿ ಕಾರ್ಯ ನೋಡಿಕೊಳ್ಳಲು ಸ್ವತಃ ದಯಾನಂದ ಅವರೇ ಗ್ಯಾರೇಜ್​ಗೆ ಹೋಗಿದ್ದರು. ಅದರಂತೆ ಬಸ್ ಮುಂಭಾಗದಲ್ಲಿ ನಿಂತಿದ್ದರು. ಈ ವೇಳೆ, ಗ್ಯಾರೇಜ್​ನ ಮೆಕ್ಯಾನಿಕ್ ಅಜಾಗರೂಕತೆಯಿಂದ ಎಂಜಿನ್ ಸ್ಟಾರ್ಟ್ ಮಾಡಿದ […]

ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಬಿ.ಎಸ್ ಯಡಿಯೂರಪ್ಪ ಭೇಟಿ ಆದ ಶೋಭಾ

Thursday, March 14th, 2024
shobha-karandlaje

ಬೆಂಗಳೂರು: ಲೋಕಸಭಾ ಚುನಾವಣೆಗೆ ಬೆಂಗಳೂರು ಉತ್ತರದಿಂದ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಕೇಂದ್ರಸ ಚಿವೆ ಶೋಭಾ ಕರಂದ್ಲಾಜೆಯವರು ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ರಾಷ್ಟ್ರೀಯ ನಾಯಕರ ಮೇಲೆ ವಿಶ್ವಾಸ ನನಗೆ ಇತ್ತು. ಪಕ್ಷ ಕೊಟ್ಟ ಎಲ್ಲ ಜವಾಬ್ದಾರಿಗಳನ್ನು ನಿರ್ವಹಿಸಿದ್ದೇನೆ. ಉಡುಪಿ- ಚಿಕ್ಕಮಗಳೂರು ಜಿಲ್ಲೆಯಲ್ಲೂ ಅಭಿವೃದ್ಧಿ ಆಗಿತ್ತು. ಆದರೆ ಕೆಲವರು ಸಹಿಸಲಿಲ್ಲ. ಪ್ರಾಯೋಜಿತ ಪ್ರತಿಭಟನೆಗಳು ನಡೆದವು. ತಮಗೆ ಟಿಕೆಟ್ ಬೇಕು ಎಂದು ಕೆಲವರು ಮಾಡಿಸಿದರು, ಅವರು ಯಶಸ್ವಿ ಆಗಲಿಲ್ಲ. ಅವರು […]

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬ್ರಿಜೇಶ್ ಚೌಟ

Wednesday, March 13th, 2024
Brijesh chow

ಮಂಗಳೂರು : ಬಹಳ ಕುತೂಹಲ ಮೂಡಿಸಿದ್ದ ದಕ್ಷಿಣ ಕನ್ನಡ ಬಿಜೆಪಿ ಟಿಕೆಟ್ ಹಂಚಿಕೆ ಕೊನೆಗೆ ಬ್ರಿಜೇಶ್ ಚೌಟ ಅವರಿಗೆ ದಕ್ಕಿದೆ. ಕಳೆದ ಚುನಾವಣೆಯಲ್ಲಿ ಪ್ರಚಂಡ ಬಹುಮತದಿಂದ ವಿಜಯ ಗಳಿಸಿದ ನಳಿನ್ ಕುಮಾರ್ ಕಟೀಲ್ ಈ ಬಾರಿ ಬಿಜೆಪಿ ಹೈಕಮಾಂಡ್ ನಿರ್ಧಾರಕ್ಕೆ ಮಣಿದು ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಬ್ರಿಜೇಶ್ ಚೌಟ ಆಯ್ಕೆಯ ಈ ವಿಷಯವನ್ನು ಸ್ವತಃ ನಳಿನ್ ಕುಮಾರ್ ಕಟೀಲ್ ಅವರೇ ಹಂಚಿಕೊಂಡಿದ್ದಾರೆ. ನಿವೃತ್ತ ಸೇನಾಧಿಕಾರಿ, ಯುವ ನಾಯಕ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರೇ […]

40 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಮಾಲಾಡಿ ಕೋರ್ಟ್ ಪಾರ್ಕ್ ಉದ್ಘಾಟನೆ

Wednesday, March 13th, 2024
Bharath-Shetty

ಮಂಗಳೂರು : ಬಂಗ್ರಕೂಳೂರು ವಾರ್ಡ್‍ಗೆ ಒಳಪಟ್ಟ ಮಾಲಾಡಿಕೋರ್ಟ್ ಬಡಾವಣೆಯಲ್ಲಿ ನಿರ್ಮಾಣ ಗೊಂಡ ಪಾರ್ಕ್‍ನ ಉದ್ಘಾಟನೆ ಬುಧವಾರ ನಡೆಯಿತು. ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಉದ್ಘಾಟಿಸಿ ಮಂಗಳೂರು ನಗರಾಭಿವೃದ್ಧಿ ಇಲಾಖೆಯ ಅನುದಾನ ಅಂದಾಜು 40 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಲಾಗಿದೆ. ಈ ಹಿಂದಿನ ನನ್ನ ಶಾಸಕ ಅವ„ಯಲ್ಲಿ ಇದಕ್ಕೆ ಮುಡಾದ ವತಿಯಿಂದ ಅನುದಾನ ಮೀಸಲಿಡಲಾಗಿತ್ತು.ಅನೇಕ ಕಿರು ಪಾರ್ಕ್‍ಗಳನ್ನು ನಿರ್ಮಿಸಿ ಹಸಿರು ವಾತಾವರಣ ಹಾಗೂ ಕೆರೆಗಳ ಪುನರುಜ್ಜೀವನಕ್ಕೆ ಒತ್ತು ನೀಡಿ ಕಾಮಗಾರಿಗಳು ನಡೆದಿವೆ ಎಂದರು. ಕೊಟ್ಟಾರಚೌಕಿಯಲ್ಲಿ ಪಾರ್ಕ್ ನಿರ್ಮಾಣ ಸಹಿತ […]

ಉಡುಪಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ಘಾಟನೆ

Wednesday, March 13th, 2024
Udupi-CM

ಉಡುಪಿ : ದೇಶದ ಸಂವಿಧಾನವನ್ನು ಬದಲಿಸುವ ಹುನ್ನಾರವನ್ನು ಬಿಜೆಪಿ ನಡೆಸಿದೆ. ಇದು ಬಿಜೆಪಿಯ ಹಿಡನ್ ಅಜೆಂಡಾ ಆಗಿದ್ದು, ದೇಶದ ಜನ ಇದನ್ನು ವಿಫಲಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಬುಧವಾರ ಮಹಾತ್ಮ ಗಾಂಧಿ ಮೈದಾನದಲ್ಲಿ ಉಡುಪಿ ಜಿಲ್ಲಾಡಳಿತ ಆಯೋಜಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು. ಸಂವಿಧಾನವನ್ನು ಬದಲಿಸುವುದಕ್ಕಾಗಿಯೇ ಅಧಿಕಾರಕ್ಕೆ ಬಂದಿರುವುದಾಗಿ ಉತ್ತರ ಕನ್ನಡ ಸಂಸದ ಅನಂತಕುಮಾರ್ […]

ಕೆಪಿಸಿಸಿ ರಾಜ್ಯ ವಕ್ತಾರರಾಗಿ ಎಂ ಜಿ ಹೆಗಡೆ ನೇಮಕ

Wednesday, March 13th, 2024
MG-Hegde

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ರಾಜ್ಯ ವಕ್ತಾರರಾಗಿ ಎಂ ಜಿ ಹೆಗಡೆ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ಅನುಮೋದನೆ ನೀಡಿದ್ದಾರೆ. ಈ ಸಂಬಂಧ ಮಾರ್ಚ್ 13ರಂದು ಕೆಪಿಸಿಸಿ ಸಂವಹನ ಮತ್ತು ಸಾಮಾಜಿಕ ಜಾಲತಾಣಗಳ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಅಧಿಸೂಚನೆ ಹೊರಡಿಸಿದ್ದಾರೆ. ಹೆಗ್ಗಡೆಯವರು ತಮ್ಮ ತೀಕ್ಷ್ಣವಾದ ಬುದ್ಧಿ ಮತ್ತು ನಿರರ್ಗಳ ಮಾತುಗಾರಿಕೆಗೆ ಹೆಸರಾದವರು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಜಿಲ್ಲಾ ವಕ್ತಾರರಾಗಿ […]