ರಿಕ್ಷಾ ಚಾಲಕನ ಮೇಲೆ ದುಷ್ಕರ್ಮಿಗಳು ತಲವಾರು ದಾಳಿ ಪ್ರಕರಣ : 9 ಆರೋಪಿಗಳು ಬಂಧನ

Tuesday, October 22nd, 2019
talavaru-daali

ಮಂಗಳೂರು : ನೀರುಮಾರ್ಗದ ಪಡು ಬಿತ್ತ್‌ಪಾದೆ ಸಮೀಪ ರಿಕ್ಷಾ ಚಾಲಕನ ಮೇಲೆ ದುಷ್ಕರ್ಮಿಗಳು ತಲವಾರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಬತ್ತು ಆರೋಪಿಗಳನ್ನು ಮಂಗಳೂರು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಅ.17ರಂದು ಸಂಕ್ರಮಣವಾದ ಕಾರಣ ಸಂತೋಷ್ ಅವರು ಬಿತ್ತ್‌ಪಾದೆಯ ಅಂಗಡಿಯೊಂದರಲ್ಲಿ ಎಳ್ಳೆಣ್ಣೆ ಖರೀದಿಸಿ ತನ್ನ ಮನೆ ಗುತ್ತಿಗೆಯತ್ತ ರಿಕ್ಷಾದಲ್ಲಿ ಹೋಗುತ್ತಿದ್ದರು. ಈ ಸಂದರ್ಭ ಕಪ್ಪು ಬಣ್ಣದ ಆಕ್ಟೀವಾದಲ್ಲಿ ಬಂದ ಇಬ್ಬರು ಯುವಕರು ಸಂತೋಷ್‌ನನ್ನು ಅಡ್ಡಗಟ್ಟಿ ತಗಾದೆ ತೆಗೆದಿದ್ದಾರೆ. ಈ ಸಂದರ್ಭ ಮಾತಿಗೆ ಮಾತು ಬೆಳೆದಾಗ ತಾವು ತಂದಿದ್ದ ತಲವಾರಿನಿಂದ […]

ಶಕ್ತಿ ರೆಸಿಡೆನ್ಶಿಯಲ್ ಶಾಲೆ ಮತ್ತು ಪಿ.ಯುಕಾಲೇಜಿನ 7ವಿದ್ಯಾರ್ಥಿಗಳು ರಾಜ್ಯ ಮಟ್ಟದ ಕರಾಟೆಯಲ್ಲಿ ಚಾಂಪಿಯನ್

Tuesday, October 22nd, 2019
karate

ಮಂಗಳೂರು : ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ಹಾಗೂ ಶಕ್ತಿ ಪಿ.ಯುಕಾಲೇಜಿನ 7ವಿದ್ಯಾರ್ಥಿಗಳು ವಾಮಂಜೂರಿನ ಸಂತರೈಮಂಡ್ಸ್ ಶಾಲೆಯಲ್ಲಿ ಜೆಎಸ್‌ಕೆಎ ಕರ್ನಾಟಕ ವತಿಯಿಂದ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಮಂಗಳೂರು ಮುಕ್ತ ಕರಾಟೆ ಚಾಂಪಿಯನ್‌ಶಿಪ್ 2019 ಕರಾಟೆಯಲ್ಲಿ ಚಾಂಪಿಯನ್‌ ಆಗಿರುತ್ತಾರೆ. ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕವನ್ನು 6 ವಿದ್ಯಾರ್ಥಿಗಳು ಪಡೆದಿರುತ್ತಾರೆ. ಶಕ್ತಿ ಶಾಲೆಯ ವಿದ್ಯಾರ್ಥಿಗಳಾದ ನಾಫಿ ಶೇಖ್‌ಕಟ ಮತ್ತು ಕುಮಿಟೆ ಕರಾಟೆಯಲ್ಲಿ ಚಿನ್ನ ಮತ್ತು ಕಂಚು, ಚಿರಂತ್‌ಎನ್‌ಎಮ್‌ಕೆ ಕುಮಿಟೆ ಕರಾಟೆಯಲ್ಲಿ ಬೆಳ್ಳಿ ಮೆಹಫೂಝ್‌ ರೂಮಿಕಟ ಕರಾಟೆಯಲ್ಲಿ ಬೆಳ್ಳಿ, ನೆಹಶಲ್‌ […]

ಕರ್ನಾಟಕದಲ್ಲಿ ಪುನಃ ಗೋಹತ್ಯೆ ನಿಷೇದ ಕಾನೂನು ಜಾರಿಗೊಳಿಸಿ ಮನವಿ

Tuesday, October 22nd, 2019
hindu-jana-jagrati

ಬೆಳ್ತಂಗಡಿ : 2010 ರಲ್ಲಿ ಆಗಿನ ಭಾರತೀಯ ಜನತಾ ಪಕ್ಷದ ಆಡಳಿತಾವಧಿಯಲ್ಲಿ ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಕಾನೂನು ಜಾರಿಗೊಳಿಸಿತ್ತು. 2014ರಲ್ಲಿ ಕಾಂಗ್ರೆಸ್ ಆಡಳಿತ ಸರಕಾರ ಅಧಿಕಾರಕ್ಕೆ ಬಂದ ಬಳಿಕ ತಕ್ಷಣವೇ ಆ ಕಾನೂನನ್ನು ರದ್ದುಗೊಳಿಸಿತ್ತು. ಈಗ ಪುನಃ ಸುದೈವದಿಂದ ಭಾರತೀಯ ಜನತಾಪಕ್ಷವು ಅಧಿಕಾರದಲ್ಲಿದೆ. ಆದುದರಿಂದ ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪರವರು ರಾಜ್ಯದಲ್ಲಿ ಪುನಃ ಗೋಹತ್ಯೆ ನಿಷೇಧ ಕಾನೂನು ಜಾರಿಗೊಳಿಸಬೇಕು ಮತ್ತು ಗೋಮಾಂಸ ಮಾರಾಟ ಮತ್ತು ಸಾಗಾಣಿಕೆಯ ಮೇಲೆ ಕಠಿಣ ನಿರ್ಬಂಧವನ್ನು ವಿಧಿಸಬೇಕೆಂದು ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತ ಶ್ರೀ […]

ಮೈಸೂರಿನಲ್ಲಿ ಬ್ಯಾಂಕ್ ವಿಲೀನ ವಿರೋಧಿಸಿ ಬ್ಯಾಂಕ್ ನೌಕರರ ಪ್ರತಿಭಟನೆ

Tuesday, October 22nd, 2019
Mysuru

ಮೈಸೂರು : ಬ್ಯಾಂಕ್ ವಿಲೀನಿಕರಣ ನಿಲ್ಲಿಸಿ, ಅನುತ್ಪಾದಕ ಸಾಲಗಳ ವಸೂಲಾತಿಯನ್ನು ಇನ್ನಷ್ಟು ತೀವ್ರಗೊಳಿಸಿ ಎಂದು ಒತ್ತಾಯಿಸಿ ಮೈಸೂರು ಜಿಲ್ಲಾ ಬ್ಯಾಂಕ್ ನೌಕರರ ಸಂಘದ ವತಿಯಿಂದ ಇಂದು ಪ್ರತಿಭಟನೆ ನಡೆಸಲಾಯಿತು. ಮೈಸೂರು ನಗರ ಕೇಂದ್ರಭಾಗದಲ್ಲಿಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಬ್ಯಾಂಕಿಂಗ್ ಸೇವೆ ಇಂದಿಗೂ ಕೂಡ ಸಾವಿರಾರು ಹಳ್ಳಿಗಳನ್ನು ತಲುಪಿಲ್ಲ. ಸಾವಿರಾರು ಜನರು ಬ್ಯಾಂಕಿಂಗ್ ಸೇವೆಗಳಿಂದ ವಂಚಿತರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಬ್ಯಾಂಕ್ ಗಳ ವಿಸ್ತರಣೆ ಮುಖ್ಯವೇ ಹೊರತು ವಿಲೀಕರಣವಲ್ಲ. ಬ್ಯಾಂಕ್ ಗಳ ವಿಲೀನಕ್ಕೆ ನಮ್ಮ ವಿರೋಧವಿದೆ. ವಿಲೀನಿಕರಣದಿಂದ […]

ಮೈಸೂರು : ಪಾಲಿಕೆಯ ಸದಸ್ಯ ಕುಡಿಯುವ ನೀರನ್ನು ಸರಿಯಾಗಿ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

Tuesday, October 22nd, 2019
kudiyuva-neeru

ಮೈಸೂರು : ನಗರ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ತೊಂದರೆ ಆಗಿದೆ ಎಂದು ಆರೋಪಿಸಿ ಪಾಲಿಕೆ ಸದಸ್ಯರೊಬ್ಬರು ಪ್ರತಿಭಟನೆ ಮಾಡಿದ್ದಾರೆ. ತನ್ನ ಮುಂದೆ ಖಾಲಿ ಕೊಡವನ್ನಿಟ್ಟುಕೊಂಡು ಪಾಲಿಕೆಯ ಸದಸ್ಯರೋರ್ವರು ಕುಡಿಯುವ ನೀರನ್ನು ಸರಿಯಾಗಿ ನೀಡುವಂತೆ ಒತ್ತಾಯಿಸಿ ವಿಶಿಷ್ಟವಾಗಿ ಪ್ರತಿಭಟನೆ ನಡೆಸಿದ ಘಟನೆ ಇಂದು ಪಾಲಿಕೆಯ ಸಭೆಯಲ್ಲಿ ನಡೆದಿದೆ. ಮಂಗಳವಾರ ಮೈಸೂರು ಮಹಾನಗರಪಾಲಿಕೆಯಲ್ಲಿ ಸಾಮಾನ್ಯ ಸಭೆಯು ಮೇಯರ್ ಪುಷ್ಪಲತಾ ಜಗನ್ನಾಥ್ ಅಧ್ಯಕ್ಷತೆಯಲ್ಲಿ ನಡೆಯುತ್ತಿತ್ತು. ರಾಜ್ಯದಲ್ಲಿ ನೆರೆ ಪರಿಸ್ಥಿತಿ ‌ಇದ್ದರೂ ನಗರದಲ್ಲಿ ಕುಡಿಯುವ ‌ನೀರಿಗೆ ಜನರು ಪರದಾಡುವಂತಾಗಿದೆ. ಇದಕ್ಕೆ ಅಧಿಕಾರಿಗಳು […]

ಮಂಗಳೂರು : ಒಂದೇ ವೇದಿಕೆಯಲ್ಲಿ 50 ಬಡ ಕುಟುಂಬಗಳಿಗೆ ಸಹಾಯ ಹಸ್ತ

Tuesday, October 22nd, 2019
rajakesari

ಮಂಗಳೂರು  : ಅಮೃತಸಂಜೀವಿ(ರಿ.) ಮಂಗಳೂರು ಇದರ ಆಶ್ರಯದಲ್ಲಿ ಸಂಸ್ತೆಯ 50 ನೇ ಮಾಸಿಕ ಯೋಜನೆಯ ಅಂಗವಾಗಿ ರಾಜಕೇಸರಿ ಯೂತ್ ಕ್ಲಬ್ ಗಂಜಿಮಠ ರಿ. ಗಂಜಿಮಠ ಇದರ ಸಹಯೋಗದಲ್ಲಿ 50 ಬಡ ಕುಟುಂಬಗಳಿಗೆ ಒಂದೇ ವೇದಿಕೆಯಲ್ಲಿ ಸಹಾಯ ಹಸ್ತ ನೀಡುವ ಕಾರ್ಯಕ್ರಮ ಶ್ರೀ ರಾಮ ಮಂದಿರ ಎಡಪದವಿನಲ್ಲಿ ನಡೆಯಿತು. ಶ್ರೀ ರಾಮ ಮಂದಿರ ಎಡಪದವಿನ ಅಧ್ಯಕ್ಷರಾದ ಮುರಲೀಧರ ಶೆಟ್ಟಿ ಕಾರ್ಯಕ್ರಮ ಉದ್ಘಾಟನೆ ಮಾಡಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶ್ರೀ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿಗಳು ಸಂಸ್ಥೆಯ ಯುವಕರ […]

ಪತ್ರಕರ್ತರಿಗೆ ನಿವೇಶನ ನೀಡಲು ತಕ್ಷಣ ಕ್ರಮ : ಭರವಸೆ ನೀಡಿದ ಆರ್.ಅಶೋಕ್

Tuesday, October 22nd, 2019
R-Ashok

ಮಂಗಳೂರು : ಪತ್ರಕರ್ತರಿಗೆ ನಿವೇಶನ ನೀಡಲು ಸರಕಾರ ತಕ್ಷಣ ಕ್ರ‌ಮ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಭರವಸೆ ನೀಡಿದ್ದಾರೆ. ಪತ್ರಕರ್ತರಿಗೆ ನಿವೇಶನ ಒಸಗಿಸುವುದಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಸಚಿವರು ಪತ್ರಕರ್ತರಿಗೆ ನಿವೇಶನ ನೀಡುವ ಕುರಿತು ಬೆಂಗಳೂರಿನಿಂದಲೂ ಮನವಿ ಬಂದಿದ್ದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಈ ಸಂದರ್ಭದಲ್ಲಿ ಶಾಸಕರಾದ […]

ಸೂರಲ್ಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಎನ್ನೆಸ್ಸಸ್ ಶಿಬಿರ ಸಮಾರೋಪ

Tuesday, October 22nd, 2019
NSS

ಮಂಗಳೂರು : ವಿದ್ಯಾರ್ಥಿದೆಸೆಯಿಂದಲೇ ಮಕ್ಕಳಿಗೆ ನಾಯಕತ್ವ ಗುಣ, ಕೂಡಿಬಾಳುವುದು, ಸಾಮರಸ್ಯದ ಪ್ರಜ್ಞೆಯನ್ನು ಮೂಡಿಸುವ ನಿಟ್ಟಿನಲ್ಲಿ ಶಿಕ್ಷಣ. ಇಲಾಖೆಯ ನಿರ್ದೇಶನದಂತೆ ಸೈಂಟ್ ರೈಮಂಡ್ಸ್ ಪದವಿ ಪೂರ್ವ ಕಾಲೇಜು ವಾಮಂಜೂರು ಇದರ 7 ದಿನಗಳ ವಾರ್ಷಿಕ ವಿಶೇಷ ಶಿಬಿರವು ಶುಭದ ಸಂಸ್ಥೆಯ ಸಹಯೋಗದೊಂದಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೂರಲ್ಪಾಡಿಯಲ್ಲಿ ನಡೆದು ಸಮಾರೋಪಗೊಂಡಿತು. ಸಮರೋಪ ಸಮಾರಂಭದ ಅಧ್ಯಕ್ಷತೆಯನ್ನು ಶುಭದ ಸಂಸ್ಥೆಯ ನಿರ್ದೇಶಕರಾದ ವಂ| ಭಗಿನಿ ಲೀನಾ ಪಿರೇರಾರವರು ವಹಿಸಿ, ವ್ಯಕ್ತಿತ್ವ ವಿಕಸನದೊಂದಿಗೆ ಮೌಲ್ಯಾಧಾರಿತ ಶಿಕ್ಷಣ ನೀಡುವಲ್ಲಿ ಎನ್ನೆಸ್ಸಸ್ ಸಹಾಯಕ ಎಂದರು. […]

ಮೈಸೂರು : ಜಿಂಕೆ ಬೇಟೆಯಾಡಿ ಮಾಂಸ ಮಾರಾಟ – ಆರೋಪಿ ಪರಾರಿ

Tuesday, October 22nd, 2019
deer meat

ಮೈಸೂರು : ನಾಗರಹೊಳೆ ಉದ್ಯಾನದ ಹುಣಸೂರು ವಲಯದಲ್ಲಿ ಜಿಂಕೆ ಬೇಟೆಯಾಡಿ ಮಾಂಸ ಮಾರಾಟ ಮಾಡುತ್ತಿದ್ದ ವೇಳೆ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿ ಮಾಂಸ ಹಾಗೂ ತಕ್ಕಡಿಯನ್ನು ವಶಕ್ಕೆ ಪಡೆದಿದ್ದು, ಆರೋಪಿ ಪರಾರಿಯಾದ ಘಟನೆ ನಡೆದಿದೆ. ನಾಗರಹೊಳೆ ಉದ್ಯಾನದಂಚಿನ ಪಿರಿಯಾಪಟ್ಟಣ ತಾಲೂಕಿನ ಬೂತನಹಳ್ಳಿಯ ಶಿವಣ್ಣ ಅವರ ಪುತ್ರ ಅಭಿಲಾಷ್‌ ಕುಮಾರ್‌ ತಂಬಾಕು ಹದ ಮಾಡುವ ಬ್ಯಾರನ್‌ನಲ್ಲಿ ಜಿಂಕೆ ಮಾಂಸ ಪತ್ತೆಯಾಗಿದೆ. ಖಚಿತ ಮಾಹಿತಿ ಮೇರೆಗೆ ಹುಣಸೂರು ವಲಯದ ಆರ್‌ಎಫ್‌ಒ ಹನುಮಂತರಾಜು ನೇತೃತ್ವದಲ್ಲಿ ಸಿಬ್ಬಂದಿ ದಾಳಿ ನಡೆಸಿದ ವೇಳೆ […]

ಉಡುಪಿ : ಬ್ಯಾಂಕ್‌ಗಳ ವಿಲೀನ ಕೇಂದ್ರ ಸರಕಾರದ ನಿರ್ಧಾರವನ್ನು ವಿರೋಧಿಸಿ; ಬ್ಯಾಂಕ್ ನೌಕರರಿಂದ ಮುಷ್ಕರ

Tuesday, October 22nd, 2019
Udupi-bank-mushkara

ಉಡುಪಿ : ಬ್ಯಾಂಕ್‌ಗಳ ವಿಲೀನೀಕರಣಗೊಳಿಸಿರುವ ಕೇಂದ್ರ ಸರಕಾರದ ನಿರ್ಧಾರವನ್ನು ವಿರೋಧಿಸಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ ಮತ್ತು ಬ್ಯಾಂಕ್ ಎಂಪ್ಲಾಯಿಸ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಘಟಕಗಳ ನೇತೃತ್ವದಲ್ಲಿ ಮಂಗಳವಾರ ಕಾರ್ಪೊರೇಶನ್ ಬ್ಯಾಂಕ್ ಉಡುಪಿ ವಲಯ ಕಚೇರಿ ಎದುರು ಹಮ್ಮಿಕೊಳ್ಳಲಾದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು. ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಬ್ಯಾಂಕ್‌ಗಳನ್ನು ವಿಲೀನ ಮಾಡುವ ಮೂಲಕ ಬ್ಯಾಂಕ್‌ಗಳನ್ನು ಮುಚ್ಚುವ ಹುನ್ನಾರ ನಡೆಸಲಾಗುತ್ತಿದೆ ಎಂದು ಉಡುಪಿ ಕಾರ್ಪೊರೇಶನ್ ಬ್ಯಾಂಕ್ ನೌಕರರ ಸಂಘದ ಉಪಾಧ್ಯಕ್ಷ ರಘುರಾಮಕೃಷ್ಣ ಬಲ್ಲಾಳ್ […]