ಮಂಗಳೂರು : ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಸೋಮವಾರ ನಗರದ ಹರಿಪದವು, ಯಯ್ಯಾಡಿ, ಹಾಗೂ ಲ್ಯಾಂಡ್ ಲಿಂಕ್ಸ್ ಟೌನ್ ಶಿಪ್ ಪರಿಸರದಲ್ಲಿ ಚುನಾವಣಾ ಪ್ರಚಾರಕಾರ್ಯ ನಡೆಸಿದರು.
ಅಲ್ಪಸಂಖ್ಯಾತ ಅಭ್ಯರ್ಥಿ ಈ ಬಾರಿ ತಮ್ಮ ಎದುರಾಳಿಯಾಗಿದ್ದು, ಅಲ್ಪಸಂಖ್ಯಾತರು ಮತ್ತು ಬಹುಸಂಖ್ಯಾತರು ತಮ್ಮ ಜೊತೆಗಿದ್ದಾರೆ. ಈ ನಿಟ್ಟಿನಲ್ಲಿ ಈ ಬಾರಿ ಗೆಲುವು ಸಾಧಿಸುವ ಎಲ್ಲಾ ಲಕ್ಷಣಗಳು ಇದೆ, ಜೊತೆಗೆ ನಾನು ಈ ಕ್ಷೇತ್ರದಲ್ಲಿ ಮಾಡಿದ ಜನೋಪಯೋಗಿ ಅಭಿವೃದ್ದಿ ಕಾಮಗಾರಿಗಳೆ ತಮಗೆ ಶ್ರೀ ರಕ್ಷೆ ಎಂದು ಅವರು ಹೇಳಿದರು. ತಮ್ಮ ಅಪಾರ ಸಂಖೆಯ ಕಾರ್ಯಕರ್ತರೊಂದಿಗೆ ಮನೆ ಮನೆಗೆ ಭೇಟಿ ನೀಡಿದ ಅವರು ಸ್ಥಳೀಯ ಸಾರ್ವಜನಿಕ ಸಮಸ್ಯೆಗಳನ್ನು ಆಲಿಸಿ ಮುಂದಿನ ದಿನಗಳಲ್ಲಿ ಈ ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದರು.
Click this button or press Ctrl+G to toggle between Kannada and English