ಕುಂದಾಪುರ : ವಾಹನ ಡಿಕ್ಕಿ ವ್ಯಕ್ತಿ ಸ್ಥಳದಲ್ಲೇ ಮೃತ್ಯು

12:55 PM, Monday, May 13th, 2013
Share
1 Star2 Stars3 Stars4 Stars5 Stars
(No Ratings Yet)
Loading...

Kushal Shettyಕುಂದಾಪುರ :  ಕುಂದಾಪುರ ತೆಕ್ಕಟೆ ಕಣ್ಣುಕ್ಕೇರಿ ಸಮೀಪ ವೇಗವಾಗಿ ಬಂದ ವಾಹನವೊಂದು ರಸ್ತೆ ಬದಿಯಲ್ಲಿ ನಿಂತಿದ್ದ ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೆ ಮೃತಪಟ್ಟ ಘಟನೆ ರವಿವಾರ ಸಂಜೆ ಸಂಭವಿಸಿದೆ. ಮೃತ ವ್ಯಕ್ತಿ ಮಂದಾರ್ಚಿ ನಿವಾಸಿ ಕುಶಾಲ್ ಶೆಟ್ಟಿ (47).

ಮೃತ ವ್ಯಕ್ತಿ ಕುಶಾಲ್ ಶೆಟ್ಟಿ ಯವರು ಉಡುಪಿಯಲ್ಲಿ ಹೊಟೇಲ್ ಉದ್ಯಮ ಮಾಡಿಕೊಂಡಿದ್ದರು. ಸಂಬಂಧಿಕರ ಶುಭ ಸಮಾರಂಭಕ್ಕೆ ಆಗಮಿಸಿದ್ದ ಕುಶಾಲ್ ಶೆಟ್ಟಿಯವರು ಬೇರೊಬ್ಬರ ನಿರೀಕ್ಷೆಯಲ್ಲಿ ರಸ್ತೆ ಬದಿಯಲ್ಲಿ ಕಾಯುತ್ತಿದ್ದ ವೇಳೆ ಕುಂದಾಪುರದಿಂದ ಬಂದ ಅಪರಿಚಿತ ವಾಹನವೊಂದು ಇವರಿಗೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂದರ್ಭದಲ್ಲಿ ಘಟನೆ ನಡೆದ ಸ್ಥಳದಲ್ಲಿ ಯಾರೂ ಇಲ್ಲದ ಕಾರಣ ಘಟನೆಗೆ ಕಾರಣವಾದ ವಾಹನದ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಕೋಟ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English