ಕೊಟ್ಟಾರ ಸಮೀಪ ಬಂಗ್ರಕೂಳೂರು ಬಳಿ ಸೇತುವೆಗೆ ಡಿಕ್ಕಿ ಹೊಡೆದ ಬಸ್, ತಪ್ಪಿದ ಅನಾಹುತ

5:30 PM, Tuesday, May 28th, 2013
Share
1 Star2 Stars3 Stars4 Stars5 Stars
(No Ratings Yet)
Loading...

bus skids Bangrakulurಮಂಗಳೂರು : ಮಂಗಳವಾರ ಹುಬ್ಬಳ್ಳಿಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕೊಟ್ಟಾರ ಸಮೀಪದ ಬಂಗ್ರಕೂಳೂರು ಬಳಿಯ ಕಿರು ಸೇತುವೆಯ ತಡೆಗೋಡೆಗೆ ಹೊಡೆದು ನಿಂತ ಘಟನೆ ನಡೆದಿದೆ.

ಹುಬ್ಬಳ್ಳಿಯಿಂದ ಹೊರಟ ಕೆ.ಎಸ್.ಆರ್.ಟಿ.ಸಿ ಬಸ್ ಮಂಗಳೂರಿನ ಕೂಳೂರು ಸಮೀಪಿಸುತ್ತಿದ್ದಂತೆ ಬಸ್ ನಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡು, ಬಸ್ ನ ಸ್ಟೀರಿಂಗ್ ವ್ಹೀಲ್ ತುಂಡಾಗಿದೆ. ಚಾಲಕ ಬಸ್ ನ್ನು ನಿಧಾನವಾಗಿ ಚಲಾಯಿಸಿಕೊಂಡು ಬಂದರೂ ಬಂಗ್ರಕೂಳೂರು ಸಮೀಪ  ಸುರಿದ ಮಳೆಯಿಂದಾಗಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್  ಕಿರು ಸೇತುವೆಗೆ ಅಪ್ಪಳಿಸಿದೆ. ಸುಮಾರು 45 ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಬಸ್ ಸೇತುವೆಯಿಂದ ಕೆಳಗೆ ಬಿದ್ದಿದ್ದೆ ಆದಲ್ಲಿ ದೊಡ್ಡ ಅನಾಹುತವೊಂದು ಸಂಭವಿಸುತ್ತಿತ್ತು ಆದರೆ ಚಾಲನಿಂದಾಗಿ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English