ಬೆಳ್ತಂಗಡಿ ತಾ.ಪಂ. ಮಾಜಿ ಅಧ್ಯಕ್ಷ ರಸ್ತೆ ಅಪಘಾತಕ್ಕೆ ಬಲಿ

1:07 PM, Tuesday, July 9th, 2013
Share
1 Star2 Stars3 Stars4 Stars5 Stars
(4 rating, 5 votes)
Loading...

T G Joyಬೆಳ್ತಂಗಡಿ: ಬೆಳ್ತಂಗಡಿ ತಾ.ಪಂ. ಮಾಜಿ ಅಧ್ಯಕ್ಷ ಟಿ.ಜಿ. ಜೋಯ್(49) ಹಾಸನದ ಬೆಳ್ಳೂರು ಕ್ರಾಸ್ ಬಳಿ ಜುಲೈ 4ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಗೆ ಇವರನ್ನು ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಯಿಂದ ಚೇತರಿಕೆ ಕಂಡು ಬಾರದೆ ಭಾನುವಾರ ರಾತ್ರಿ ಕೊನೆಯುಸಿರೆಳೆದರು. ಪತ್ನಿ, ತಾಯಿ, ಪುತ್ರನನ್ನು ಅಗಲಿದ್ದಾರೆ. ಸಿರಿಯನ್ ಕೆಥೋಲಿಕ್ ಸೊಸೈಟಿ ಅಧ್ಯಕ್ಷರಾಗಿದ್ದ ಜೋಯ್, ಮಲಯಾಳಿ ಕ್ರಿಶ್ಚಿಯನ್ ಅಸೋಶಿಯೇಶನ್ ಉಪಾಧ್ಯಕ್ಷರಾಗಿದ್ದರು. ತಾ.ಪಂ.ಮಾಜಿ ಅಧ್ಯಕ್ಷರಾಗಿ, ಎಪಿಎಂಸಿ ಸದಸ್ಯರಾಗಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English