- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ರಿಕ್ಷಾ ಚಾಲಕ, ಪಡೀಲ್ ನಿವಾಸಿ ಮುಖೇಶ್ ಮೇಲೆ ಹಲ್ಲೆ

Mukhesh [1]ಮಂಗಳೂರು: ವೃತ್ತಿಯಲ್ಲಿ ರಿಕ್ಷಾ ಚಾಲಕನಾಗಿರುವ ಪಡೀಲ್ ಭಜರಂಗದಳದ ಸದಸ್ಯನೂ ಆಗಿರುವ ಯುವಕನೋರ್ವನ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿದ ಘಟನೆ ನಿನ್ನೆ ಸಂಜೆ ನಗರದ ಫೈಸಲ್‍ನಗರದಲ್ಲಿ ನಡೆದಿದೆ.

ಹಲ್ಲೆಗೊಳಗಾದ ಯುವಕನನ್ನು ಪಡೀಲ್ ನಿವಾಸಿ ಮುಖೇಶ್ ಎಂದು ಗುರುತಿಸಲಾಗಿದೆ. ಮುಖೇಶ್ ತನ್ನ ರಿಕ್ಷಾದಲ್ಲಿ ಫೈಸಲ್‍ನಗರಕ್ಕೆ ಬಾಡಿಗೆಗೆ ತೆರಳಿದ್ದ. ಈ ವೇಳೆ ರಸ್ತೆಯಲ್ಲಿ ಶೇಖರಣೆಯಾಗಿದ್ದ ಕೆಸರು ನೀರು ರಸ್ತೆ ಬದಿ ನಿಂತಿದ್ದ ಯುವಕನೋರ್ವನ ಮೇಲೆ ಎರಚಿದೆ. ಇದನ್ನೇ ನೆಪವಾಗಿರಿಸಿದ ಸ್ಥಳೀಯ ಯುವಕರು ಮುಖೇಶ್‍ನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದೇ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಮೂವರು ಯುವಕರು ಕಬ್ಬಿಣದ ಪೈಪಿನಿಂದ ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಿಂದ ಗಾಯಗೊಂಡ ಮುಖೇಶ್‍ನನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾನೆಂದು ತಿಳಿದು ಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆ ಮಾಹಿತಿ ಲಭಿಸಿದೆ.