ಕದ್ರಿಗುಡ್ಡೆಯಲ್ಲಿರುವ ಯುದ್ಧ ಸ್ಮಾರಕದಲ್ಲಿ ವೀರ ಯೋಧರ ಸ್ಮಾರಕಗಳಿಗೆ ಗೌರವ

1:20 PM, Wednesday, July 27th, 2016
Share
1 Star2 Stars3 Stars4 Stars5 Stars
(No Ratings Yet)
Loading...

kargil-vijay-divasಮಂಗಳೂರು: ಕಾರ್ಗಿಲ್ ವಿಜಯೋತ್ಸವ ದಿನದ ನಿಮಿತ್ತ ಮಂಗಳವಾರ ಸಂಜೆ ಇಲ್ಲಿಯ ಕದ್ರಿಗುಡ್ಡೆಯಲ್ಲಿರುವ ಯುದ್ಧ ಸ್ಮಾರಕದಲ್ಲಿ ದೇಶಕ್ಕಾಗಿ ಮಡಿದ ವೀರ ಯೋಧರ ಸ್ಮಾರಕಗಳಿಗೆ ಪುಷ್ಪಾರ್ಚನೆ ಹಾಗೂ ಮೊಂಬತ್ತಿ ದೀಪ ಬೆಳಗಿಸಿ ಗೌರವ ಸಲ್ಲಿಸಲಾಯಿತು.

ದ. ಕ. ಜಿಲ್ಲಾ ಮಾಜಿ ಸೈನಿಕರ ಸಂಘ, ಶಾಸ್ತಾವು ಭೂತನಾಥೇಶ್ವರ ಪ್ರತಿಷ್ಠಾನ, ಲಯನ್ಸ್ ಕ್ಲಬ್ ಮತ್ತು ಸಮಗ್ರ ಕಲಿಕಾ ಕೇಂದ್ರದ ಸಹಯೋಗದೊಂದಿಗೆ ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಹಾಗೂ ಮಹಿಳೆಯರು ಮಡಿದ ಯೋಧರಿಗೆ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ವಿಕ್ರಮ್ ದತ್ತ, ಪದಾಧಿಕಾರಿಗಳಾದ ಎಸ್. ಎಂ. ಐರನ್, ಬಾಲಕೃಷ್ಣ, ಕರ್ನಲ್ ನಿಟ್ಟೆಗುತ್ತು ಶರತ್ ಭಂಡಾರಿ, ದೀಪಕ್ ಅಡ್ಯಂತಾಯ ಮೊದಲಾದವರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English