ಕೆಸ್‌‌ಆರ್‌‌ಟಿಸಿ ಬಸ್‌‌ ಬೈಕ್‌‌ಗೆ ಡಿಕ್ಕಿ ಹೊಡೆದು ಬೈಕ್‌‌ ಸವಾರ ಯುವಕ ಸಾವು

11:58 AM, Wednesday, October 5th, 2016
Share
1 Star2 Stars3 Stars4 Stars5 Stars
(No Ratings Yet)
Loading...

ksrtc-accidentಮಂಗಳೂರು: ವಾಹನವೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ಕೆಸ್‌‌ಆರ್‌‌ಟಿಸಿ ಬಸ್‌‌ ಬೈಕ್‌‌ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಬಂಟ್ವಾಳ ಸಮೀಪದ ಮಣಿಹಳ್ಳ ಬಳಿ ಸಂಭವಿಸಿದೆ.

ಪಿಲಾತಬೆಟ್ಟು ಗ್ರಾಮದ ಕೊಡೆಂಜಾರು ನಿವಾಸಿ ಜನಾರ್ದನ ರೈ ಎಂಬುವರ ಪುತ್ರ, ಬೈಕ್ ಸವಾರ ಸುಶಾಂತ್ ರೈ(30) ಮೃತ ಯುವಕ. ಮೃತ ಸುಶಾಂತ್ ಬೈಕ್‌ನಲ್ಲಿ ಕಾರ್ಯ ನಿಮಿತ್ತ ಬಂಟ್ವಾಳ ಕಡೆಯಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಎಂದು ತಿಳಿದುಬಂದಿದೆ.

ಈ ವೇಳೆ ಧರ್ಮಸ್ಥಳದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕೆಸ್‌‌ಆರ್‌‌ಟಿಸಿ ಬಸ್‌‌ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೈಕ್‌‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಸುಶಾಂತ್ ಬಸ್‌‌ ಕೆಳಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದು ತಕ್ಷಣ ಅವರನ್ನು ಸ್ಥಳೀಯರು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿದರಾದರೂ ದಾರಿ ಮಧ್ಯೆ ಕೊನೆಯುಸಿರೆಳೆದ್ದಾರೆ.

ಬಸ್ ಚಾಲಕನ ಅತೀ ವೇಗ ಮತ್ತು ಅಜಾಗರೂಕತೆಯ ಚಾಲನೆಯೇ ಅವಘಡಕ್ಕೆ ಕಾರಣವೆನ್ನಲಾಗಿದ್ದು ಆಕ್ರೋಶಗೊಂಡ ಸ್ಥಳೀಯರು ಸ್ಥಳದಿಂದ ಬಸ್ ತೆಗೆಯದಂತೆ ರಸ್ತೆ ತಡೆ ನಡೆಸಿದರು. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಬಂಟ್ವಾಳ ಗ್ರಾಮಾಂತರ ಠಾಣೆಯ ಎಸ್‌ಐ ಎ.ಕೆ.ರಕ್ಷಿತ್ ಗೌಡ, ನಗರ ಠಾಣೆಯ ಎಸ್‌ಐ ನಂದಕುಮಾರ್, ಟ್ರಾಫಿಕ್ ಎಸ್‌ಐ ಚಂದ್ರಶೇಖರಯ್ಯ ಆಕ್ರೋಶಿತ ಜನರ ಮನವೊಲಿಸಿ ಅಪಘಾತಕ್ಕೀಡಾದ ವಾಹನಗಳನ್ನು ಸ್ಥಳದಿಂದ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು.

ksrtc-accidentಅಪಘಾತ ಸಂಭವಿಸಿದಂತೆ ಬಸ್ ಸಿಬ್ಬಂದಿ ಇಳಿದು ಪರಾರಿಯಾಗಿದ್ದಾರೆ. ಮೃತ ಸುಶಾಂತ್ ಬಂಟ್ವಾಳದ ಹಿಂದೂಸ್ತಾನ್ ಸೋಪ್ ಪ್ರೈವೆಟ್ ಲಿಮಿಟೆಡ್‌ನ ಉದ್ಯೋಗಿಯಾಗಿದ್ದರು. ಮೂಲತಃ ಸಕಲೇಶಪುರದವರಾಗಿದ್ದು ಪಿಲಾಯಬೆಟ್ಟುವಿವಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ. ಅಲ್ಲದೇ ವರ್ಷದ ಹಿಂದಷ್ಟೇ ಮದುವೆಯಾಗಿದ್ದು ಪತ್ನಿ ತುಂಬು ಗರ್ಭಿಣಿ ಎಂಬುದು ತಿಳಿದು ಬಂದಿದೆ.

ksrtc-accident

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English