ಕಾಂಗ್ರೆಸ್ ವಿರುದ್ಧ ಘೋಷಣೆ: ರಾಹುಲ್ ಗಾಂಧಿ ಪ್ರತಿಕೃತಿ ದಹನ

12:16 PM, Saturday, October 8th, 2016
Share
1 Star2 Stars3 Stars4 Stars5 Stars
(No Ratings Yet)
Loading...

yuva-morchaಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರನ್ನು ರಕ್ತದ ದಲ್ಲಾಳಿ ಎಂದು ಹೇಳಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು, ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿ ರಾಹುಲ್ ಗಾಂಧಿ ಪ್ರತಿಕೃತಿಯನ್ನು ದಹನ ಮಾಡಿದರು.

ಜಗತ್ತಿನ ಎಲ್ಲಾ ದೇಶಗಳು ಇತ್ತೀಚೆಗೆ ನಡೆದಂತಹ ಸರ್ಜಿಕಲ್ ಸ್ಟ್ರೈಕ್ ಘಟನೆಯ ಬಗ್ಗೆ ಸಹಮತ ವ್ಯಕ್ತಪಡಿಸಿ ಅಮೆರಿಕಾ, ರಷ್ಯಾ, ಚೀನಾದಂತಹ ದೇಶಗಳೇ ಪ್ರಧಾನಿಯವರ ಬಗ್ಗೆ ಶ್ಲಾಘನೆ ಮಾಡಿದರೆ ರಾಹುಲ್ ಗಾಂಧಿ, ಅವರನ್ನೇ ರಕ್ತದ ದಲ್ಲಾಳಿ ಎಂದು ಟೀಕಿಸುವುದು ಸರಿಯಲ್ಲ ಎಂದು ಪ್ರತಿಭಟನಕಾರರು ಹೇಳಿದರು.

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಇಂತಹ ನೀಚ ಹೇಳಿಕೆ ಕೊಡುವ ಮೂಲಕ ಇಡೀ ದೇಶದ ಸೈನಿಕರಿಗೆ ಮತ್ತು ದೇಶದ ಜನತೆಗೆ ಅಪಮಾನ ಮಾಡಿದ್ದಾರೆ. ಸೈನಿಕರ ನೈತಿಕ ಸ್ಥೈರ್ಯ ಕುಂದಿಸುವ ಈ ಹೇಳಿಕೆಯು ಅತೀ ಖಂಡನಾರ್ಹ. ರಾಹುಲ್ ಗಾಂಧಿಯವರು ದೇಶದ ಸೈನಿಕರು ಹಾಗೂ ಜನತೆಯ ಮುಂದೆ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English