ಬೆಂಜನಪದವಿನಲ್ಲಿ ಎಸ್‌ಡಿಪಿಐ ವಲಯಾಧ್ಯಕ್ಷನನ್ನು ಅಟ್ಟಾಡಿಸಿ ಹತ್ಯೆ

2:18 PM, Wednesday, June 21st, 2017
Share
1 Star2 Stars3 Stars4 Stars5 Stars
(5 rating, 1 votes)
Loading...

sdpi ಬಂಟ್ವಾಳ : ಎಸ್‌ಡಿಪಿಐ ಅಮ್ಮುಂಜೆ ವಲಯ ಅಧ್ಯಕ್ಷರನ್ನು ಮಾರಕಾಯುಧಗಳಿಂದ ಬರ್ಬರವಾಗಿ ಹತ್ಯೆಗೈದ ಘಟನೆ ಬೆಂಜನಪದವಿನ ಕರಾವಳಿ ಕಾಲೇಜು ಬಳಿ ಇಂದು ಬೆಳಗ್ಗೆ ನಡೆದಿದೆ.

ಮೃತರನ್ನು ಮಲ್ಲೂರು ಅಮ್ಮುಂಜೆಯ ಕಲಾಯಿ ನಿವಾಸಿ ಅಶ್ರಫ್(35) ಎಂದು ಗುರುತಿಸಲಾಗಿದೆ.  ಎಸ್‌ಡಿಪಿಐ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಅಶ್ರಫ್ ಕಲಾಯಿ ಇಂದು ಬೆಳಗ್ಗೆ ಕಲಾಯಿಯಲ್ಲಿ ಧ್ವಜಾರೋಹಣ ನೆರೆವೇರಿಸಿ, ಬಳಿಕ ಹೊಂಡಮಯವಾಗಿರುವ ಕಲಾಯಿ ರಸ್ತೆಯ ದುರಸ್ತಿಗೊಳಿಸಲು ಸಾರ್ವಜನಿಕರೊಂದಿಗೆ ಶ್ರಮದಾನ ಮಾಡಿದ್ದರು. ಆ ಬಳಿಕ ಅವರ ಬಾಡಿಗೆಗೆಂದು ಬೆಂಜನಪದವು ಕರಾವಳಿ ಸೈಟ್‌ಗೆ ತೆರಳಿದ್ದರೆಂದು ತಿಳಿದುಬಂದಿದೆ.

ಕಲಾಯಿಯಲ್ಲಿ ರಿಕ್ಷಾ ಚಾಲಕರಾಗಿದ್ದ ಅಶ್ರಫ್ ಬಾಡಿಗೆಗೆಂದು ಕಳ್ಳಿಗೆ ಗ್ರಾಮದ ಬೆಂಜನಪದವಿನ ಕರಾವಳಿ ಸೈಟ್ ಎಂಬಲ್ಲಿಗೆ ಇಂದು ಬೆಳಗ್ಗೆ ತೆರಳಿದ್ದರು.  ಕರಾವಳಿ ಸೈಟ್‌ನಲ್ಲಿ ಬೀಡಿ ತೆಗೆಯುತ್ತಿದ್ದ ವ್ಯಕ್ತಿಯೊಬ್ಬರು ಬಾಡಿಗೆಗೆ ಅಶ್ರಫ್ ಅವರ ರಿಕ್ಷಾದಲ್ಲಿ ತೆರಳಿದ್ದರು.

sdpi  ಮನೆಯೊಂದರ ಎದುರು ರಿಕ್ಷಾವನ್ನು ನಿಲ್ಲಿಸಿದ್ದ ಸಂದರ್ಭದಲ್ಲಿ ಮೂರು ಬೈಕ್‌ಗಳಲ್ಲಿ ಬಂದ ಎಂಟು ಮಂದಿ ದುಷ್ಕರ್ಮಿಗಳ ತಂಡ ಈ ಕೃತ್ಯ ಎಸಗಿದೆ.

ದುಷ್ಕರ್ಮಿಗಳು ತಲವಾರು ಸಹಿತ ಮಾರಕಾಸ್ತ್ರಗಳಿಂದ ಅಶ್ರಫ್ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಪಾರಾಗಲೆಂದು ಅಲ್ಲೇ ಪಕ್ಕದಲ್ಲಿದ್ದ ಮನೆಯೊಳಗೆ ನುಗ್ಗಿದ ಅಶ್ರಫ್ ಅವರನ್ನು ದುಷ್ಕರ್ಮಿಗಳು ಅಟ್ಟಾಡಿಸಿ ಹಿಡಿದು ಮನೆಯ ಹೊರಗೆ ತಂದು ಭೀಕರವಾಗಿ ಕೊಚ್ಚಿ ಕೊಲೆಗೈದಿದ್ದಾರೆ ಎಂದು ತಿಳಿದುಬಂದಿದೆ.

ದುಷ್ಕರ್ಮಿಗಳು ತಲವಾರುವೊಂದನ್ನು ಮನೆಯೊಳಗೆಯೇ ಬಿಟ್ಟು ಪರಾರಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಆಗಮಿಸಿದ್ದು, ತನಿಖೆ ಮುಂದುವರಿಸಿದ್ದಾರೆ.

ಅಶ್ರಫ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಳೂರಿನ ಎ.ಜೆ. ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಆಸ್ಪತ್ರೆಯ ಎದು ಭಾರೀ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English