ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ

8:06 PM, Thursday, June 22nd, 2017
Share
1 Star2 Stars3 Stars4 Stars5 Stars
(5 rating, 1 votes)
Loading...

sp ಮಂಗಳೂರು :  ರಾಜ್ಯ ಸರಕಾರದ ಆದೇಶದಂತೆ ದ.ಕ. ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೂತನವಾಗಿ ನೇಮಕಗೊಂಡಿರುವ ಸುಧೀರ್ ಕುಮಾರ್ ರೆಡ್ಡಿ ಇಂದು ಅಧಿಕಾರ ಸ್ವೀಕರಿಸಿದರು.

ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ, ಪ್ರಸ್ತುತ ಬೆಂಗಳೂರಿನ ನಗರ ಪೊಲೀಸ್ ಆಡಳಿತ ವಿಭಾಗಕ್ಕೆ ವರ್ಗಾವಣೆಗೊಂಡಿರುವ ಭೂಷಣ್ ಗುಲಾಬ್ ರಾವ್ ಬೊರಸೆ ನೂತನ ಎಸ್ಪಿಗೆ ಅಧಿಕಾರ ಹಸ್ತಾಂತರಿಸಿದರು.

ಸುಧೀರ್ ಕುಮಾರ್ ರೆಡ್ಡಿ 2010ನೆ ಸಾಲಿನ ಐಪಿಎಸ್ ಅಧಿಕಾರಿಯಾಗಿದ್ದು, ಮಂಡ್ಯದಲ್ಲಿ ಎಸ್ಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮೂಲತ: ಆಂಧ್ರ ಪ್ರದೇಶದ ಗುಂಟೂರಿನವರು.  ಈ ಹಿಂದೆ ಭಟ್ಕಳದಲ್ಲಿ ಎಎಸ್ಪಿಯಾಗಿ, ಚಿಕ್ಕಬಳ್ಳಾಪುರ, ಬೀದರ್‍ನಲ್ಲಿ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

ಭೂಷಣ್ ಗುಲಾಬ್‍ರಾವ್ ಬೊರಸೆ ಅವರು 2016ರ ಮೇ 20ರಂದು ದ.ಕ. ಜಿಲ್ಲಾ ಎಸ್ಪಿಯಾಗಿ ಅಧಿಕಾರ ವಹಿಸಿದ್ದರು. ಬಂಟ್ವಾಳದ ಕಲ್ಲಡ್ಕ ಸೇರಿದಂತೆ ಸುತ್ತಮುತ್ತ ನಡೆದ ಅಹಿತಕರ ಘಟನೆಗೆ ಸಂಬಂಧಿಸಿ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

 

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English