ಮಂಗಳೂರು: ಜನರಕ್ಷಾಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಚಾಲನೆ

4:37 PM, Monday, October 2nd, 2017
Share
1 Star2 Stars3 Stars4 Stars5 Stars
(5 rating, 1 votes)
Loading...

BJP

ಮಂಗಳೂರು: ಕೇರಳದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆ ಖಂಡಿಸಿ ಕೇರಳ ಬಿಜೆಪಿ ಅಕ್ಟೋಬರ್ 3, 4 ಮತ್ತು 5 ರಂದು ಜನರಕ್ಷಾಯಾತ್ರೆ ಹಮ್ಮಿಕೊಂಡಿದೆ. ಕೇರಳದ ಕಣ್ಣೂರಿನಿಂದ ತಿರುವನಂತಪುರಂವರೆಗೆ ನಡೆಯುವ ಈ ಜನರಕ್ಷಾಯಾತ್ರೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭಾಗವಹಿಸಲಿದ್ದಾರೆ.

ಅಕ್ಟೋಬರ್ 3 ರಂದು ಆಯೋಜಿಸಿರುವ ಜನರಕ್ಷಾಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಚಾಲನೆ ನೀಡಿ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.  ಅಕ್ಟೋಬರ್ 2 ರಂದು ಮದ್ಯಾಹ್ನ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಶಾ ನಂತರ ನೇರವಾಗಿ ಕೇರಳಕ್ಕೆ ತೆರಳಲಿದ್ದಾರೆ.

ಮಂಗಳೂರಿನಲ್ಲಿ ಅಮಿತ್ ಶಾ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಟಂದೂರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅಕ್ಟೋಬರ್ 3 ರಂದು ಕಣ್ಣೂರಿನಲ್ಲಿ ಜನರಕ್ಷಾ ಯಾತ್ರೆಯಲ್ಲಿ ಭಾಗವಹಿಸಿ ಸಂಜೆ ಮಂಗಳೂರಿಗೆ ಮರಳಲಿದ್ದಾರೆ ಎಂದು ತಿಳಿಸಿದ್ದಾರೆ.

ಅಕ್ಟೋಬರ್ 4 ರಂದು ಅಮಿತ್ ಶಾ ನೇತೃತ್ವದಲ್ಲಿ ಮಂಗಳೂರಿನಲ್ಲಿ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ ನಡೆಸಲಿದೆ.  ನಂತರ ಸಂಜೆ ಮಂಗಳೂರಿನ ಟಿ.ಎಂ.ಎ ಪೈ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖರೊಂದಿಗೆ ಅಮಿತ್ ಶಾ ಸಂವಾದ ನಡೆಸಲಿದ್ದಾರೆ. ಅಕ್ಟೋಬರ್ 4 ರಂದು ಮಂಗಳೂರಿನಲ್ಲಿಯೇ ತಂಗಲಿರುವ ಅಮಿತ್ ಶಾ ಅಕ್ಟೋಬರ್ 5 ರಂದು ಮುಂಜಾನೆ ಮಂಗಳೂರಿನಿಂದ ತೆರಳಲಿದ್ದಾರೆ ಎಂದು ಅವರು ತಿಳಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English