ಮಂಗಳೂರು : ಉಳ್ಳಾಲದ ಮುಕ್ಕಚ್ಚೇರಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ಜುಬೈರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ. ಅ.4ರಂದು ರಾತ್ರಿ ಜುಬೈರ್ನನ್ನು ಉಳ್ಳಾಲ ಮಸೀದಿ ಸಮೀಪ ತಲವಾರಿನಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಸಂಬಂಧ ಜುಬೈರ್ ಸಹೋದರ ಆಸಿಫ್ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಸುಹೈಲ್, ನಿಜಾಮುದ್ಧೀನ್, ಮಹಮ್ಮದ್ ಮುಸ್ತಫಾ, ತಾಜುದ್ದೀನ್ ಹಾಗೂ ಮಂಡಾ ಆಸೀಫ್ ಎಂಬುವರನ್ನು ಬಂಧಿಸಲಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮಂಗಳೂರು ಪೊಲೀಸ್ ಆಯುಕ್ತ ಟಿ. ಆರ್. ಸುರೇಶ್, ಬಂಧಿತರಲ್ಲಿ ಐವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ. ಇವರಲ್ಲಿ ನಾಲ್ವರು ಹತ್ಯೆಯಲ್ಲಿ ನೇರವಾಗಿ ಭಾಗಿಯಾಗಿದ್ದರೆ, ಇನ್ನೋರ್ವ ಹತ್ಯೆಗೆ ಸಹಕಾರ ನೀಡಿದ್ದಾನೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ. ಆರೋಪಿಗಳು ಬೇರೆ ರಾಜ್ಯಕ್ಕೆ ಪರಾರಿಯಾಗಿದ್ದರು. ಪ್ರಕರಣದ ತನಿಖೆಗೆ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿತ್ತು.ಇದೀಗ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.
ಮಂಗಳೂರಿನಲ್ಲಿ ಹೆಚ್ಚುತ್ತಿರುವ ಪಾತಕ ಕೃತ್ಯದ ಹಿನ್ನೆಲೆಯಲ್ಲಿ ಕಮಿಷನ್ರೇಟ್ ವ್ಯಾಪ್ತಿಯಲ್ಲಿ ಎರಡು ರೌಡಿ ನಿಗ್ರಹ ದಳ ರಚಿಸುವುದಾಗಿ ತಿಳಿಸಿದ ಅವರು, ಸಿಸಿಬಿ ಪೋಲೀಸರೊಂದಿಗೆ ಈ ರೌಡಿ ನಿಗ್ರಹ ದಳವೂ ಕಾರ್ಯಾಚರಣೆ ನಡೆಸಲಿದೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸುಮಾರು ಎರಡು ಸಾವಿರ ರೌಡಿಗಳಿದ್ದು, ಎಲ್ಲಾ ರೌಡಿಗಳನ್ನು ಕರೆಸಿ ಈಗಾಗಲೇ ಎಚ್ಚರಿಕೆಯನ್ನು ನೀಡಲಾಗಿದೆ ಎಂದರು.
Click this button or press Ctrl+G to toggle between Kannada and English