ಗಾಂಜಾ ಸಾಗಾಟದ ಆರೋಪ, ವ್ಯಕ್ತಿಯ ಬಂಧನ

11:25 AM, Saturday, October 21st, 2017
Share
1 Star2 Stars3 Stars4 Stars5 Stars
(5 rating, 1 votes)
Loading...

ganjaಮಂಗಳೂರು:ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗಾಂಜಾ ಸಾಗಾಟದ ಆರೋಪದಲ್ಲಿ ದುಬೈಗೆ ಪ್ರಯಾಣಿಸಬೇಕಿದ್ದ ವ್ಯಕ್ತಿಯೊಬ್ಬನನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತನನ್ನು ಮಂಜೇಶ್ವರದ ಅಭಿಲಾಷ್ ಪ್ರದೀಪ್ ಸುವರ್ಣ (20) ಎಂದು ಗುರುತಿಸಲಾಗಿದೆ. ತಪಾಸಣೆ ವೇಳೆ ಸುಮಾರು ಲಕ್ಷ ರೂ. ಮೌಲ್ಯದ 4 ಕೆ. ಜಿ. ಗಾಂಜಾ ಪತ್ತೆಯಾಗಿದೆ.

ಈತ ಮಂಗಳೂರಿನಿಂದ ದುಬೈಗೆ ತೆರಳುವ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಟಿಕೆಟ್ ಬುಕ್ ಮಾಡಿಕೊಂಡಿದ್ದ. ತಪಾಸಣೆ ವೇಳೆ ಗಾಂಜಾ ಪತ್ತೆಯಾಗಿದ್ದರಿಂದ ದುಬೈಗೆ ಹೋಗುವ ಬದಲು ಜೈಲಿಗೆ ಹೋಗುವಂತಾಗಿದೆ. ಪ್ರಕರಣವನ್ನು ಬಜ್ಪೆ ಪೊಲೀಸರಿಗ ಹಸ್ತಾಂತರಿಸಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English