ವಿದ್ಯಾರ್ಥಿಗಳಿಗೆ ವಂಚನೆ ಖಂಡಿಸಿ ಎಬಿವಿಪಿಯಿಂದ ಪ್ರತಿಭಟನೆ

9:54 AM, Saturday, December 16th, 2017
Share
1 Star2 Stars3 Stars4 Stars5 Stars
(5 rating, 1 votes)
Loading...

ABVP-mangaluruಮಂಗಳೂರು: ನಗರದ ಕೊಲಾಸೋ ಪ್ಯಾರಾಮೆಡಿಕಲ್ ಕಾಲೇಜಿನ ಸುಮಾರು 150 ವಿದ್ಯಾರ್ಥಿಗಳಿಗೆ ಸರ್ಕಾರಿ ಪ್ಯಾರಾಮೆಡಿಕಲ್ ಸೀಟು, ಹಾಸ್ಟೆಲ್ ವ್ಯವಸ್ಥೆ ಹಾಗೂ ವಿದ್ಯಾರ್ಥಿ ವೇತನ ಕೊಡಿಸುವುದಾಗಿ ನಂಬಿಸಿ 7,000ಕ್ಕೂ ಹೆಚ್ಚು ಹಣ ಪಡೆದು ವಂಚನೆ ಮಾಡಿರುವ ಪ್ರಕರಣ ಖಂಡಿಸಿ ಎಬಿವಿಪಿಯಿಂದ ಪ್ರತಿಭಟನೆ ನಡೆಸಲಾಯಿತು.

ಆರೋಪಿ ಮನೋಜ್ ಪೌಲ್ ವಿರುದ್ಧ ಈಗಾಗಲೇ ದೂರು ದಾಖಲಾಗಿದ್ದು, ಆತ ತಲೆ ಮರೆಸಿಕೊಂಡಿದ್ದಾನೆ. ಪೊಲೀಸ್ ಇಲಾಖೆ ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಿ ಕಾನೂನು ರೀತಿಯಲ್ಲಿ ಕಠಿಣ ಶಿಕ್ಷೆಗೊಳಪಡಿಸಬೇಕು. ಅಲ್ಲದೆ ಬಡ-ಗ್ರಾಮೀಣ ವಿದ್ಯಾರ್ಥಿಗಳಿಂದ ವಂಚಿಸಿ ವಸೂಲಿ ಮಾಡಿರುವ ಹಣವನ್ನು ಹಿಂದಿರುಗಿಸುವ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿ ಪ್ರತಿಭಟನಾಕಾರರು ಪೊಲೀಸ್ ಕಮಿಷನರ್ ಟಿ.ಕೆ.ಸುಧೀರ್ ಅವರಿಗೆ ಮನವಿ ಸಲ್ಲಿಸಿದರು.

ಎಬಿವಿಪಿ ವಿಭಾಗ ಸಂಘಟನಾ ಕಾರ್ಯದರ್ಶಿ ತೇಜಸ್ವಿ, ವಿಭಾಗ ಸಹ ಸಂಚಾಲಕ್ ಶೀತಲ್ ಕುಮಾರ್ ಜೈನ್, ವಿಕಾಸ್, ಶಿವರಾಜ್, ಲತೇಶ್, ಲಕ್ಷ್ಮಣ್, ಮಧು, ಅಧ್ವಿಕ್, ನಗರ ಕಾರ್ಯದರ್ಶಿ ಮೃಣಾಲ್ ಅಡ್ಯಾರ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English