ಅವಿಭಜಿತ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಸಂಭ್ರಮಕ್ಕೆ ಚಾಲನೆ

11:24 AM, Saturday, December 16th, 2017
Share
1 Star2 Stars3 Stars4 Stars5 Stars
(5 rating, 1 votes)
Loading...

puttur-talukಪುತ್ತೂರು: ಅವಿಭಜಿತ ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯ ವಠಾರದಲ್ಲಿ ದೀಪ ಬೆಳಗಿಸುವ ಮೂಲಕ ಕಡಬ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಬು ಮುಗೇರ ಅವರು ಇಂದು ಬೆಳಗ್ಗೆ ಅದ್ಧೂರಿ ಚಾಲನೆ ನೀಡಿದರು.

puttur-taluk-2ತಾಲೂಕು ಪಂಚಾಯತ್ ಸದಸ್ಯ ಫಝಲ್ ಕೋಡಿಂಬಾಳ ಕನ್ನಡ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೆರವಣಿಗೆ ಆರಂಭವಾಯಿತು. ಕಡಬದ ರಾಜಬೀದಿಯಿಂದ ಪರಿಸರದ ಎಲ್ಲಾ ಶಾಲಾ ವಿದ್ಯಾರ್ಥಿಗಳು ಬೃಹತ್ ಶೋಭಾಯಾತ್ರೆಯು ಕಡಬದ ರಾಜಬೀದಿಯಲ್ಲಿ ಸಾಗುತ್ತಿದೆ.

ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಬಿ.ಟಿ.ಆರಿಗ ಜೈನಿ ಸಭಾಂಗಣದಲ್ಲಿ ಕುಲ್ಕುಂದ ಶಿವರಾಮ ವೇದಿಕೆಯಲ್ಲಿ ಅದ್ದೂರಿಯಾಗಿ ಸಾಹಿತ್ಯ ಸಮ್ಮೇಳನ ನಡೆಯಲಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English