ಮಂಗಳೂರು: ಓಖಿ ಚಂಡಮಾರುತದಲ್ಲಿ ಸಂತ್ರಸ್ತರಾದವರು ಹಾಗೂ ಹಾನಿಗೊಳಗಾದ ಪ್ರದೇಶ ವೀಕ್ಷಿಸಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಸೋಮವಾರ ಮಂಗಳೂರಿಗೆ ಆಗಮಿಸಲಿದ್ದು, ರಾತ್ರಿ ಇಲ್ಲಿಯೇ ತಂಗಲಿದ್ದಾರೆ ಎನ್ನಲಾಗಿದೆ.
ಲಕ್ಷದ್ವೀಪಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ನಾಳೆ ರಾತ್ರಿ 11.30ಕ್ಕೆ ವಿಶೇಷ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣ ತಲುಪಲಿರುವ ಅವರು, ನಗರದ ಸರ್ಕ್ಯೂಟ್ ಹೌಸ್ನಲ್ಲಿ ತಂಗುವ ಸಾಧ್ಯತೆ ಇದೆ.
ಮಂಗಳೂರಿನಲ್ಲಿ ವಾಸ್ತವ್ಯ ಹೂಡುವ ದೇಶದ ಮೊದಲ ಪ್ರಧಾನಿ ನರೇಂದ್ರ ಮೋದಿಯವರಾಗಲಿದ್ದಾರೆ. ಡಿ. 19ರಂದು (ಮಂಗಳವಾರ) ಬೆಳಿಗ್ಗೆ 7.30ಕ್ಕೆ ಮಂಗಳೂರಿನಿಂದ ಸೇನಾ ಹೆಲಿಕಾಪ್ಟರ್ನಲ್ಲಿ ಲಕ್ಷದ್ವೀಪಕ್ಕೆ ತೆರಳಲಿರುವ ಅವರು, ಅಲ್ಲಿ ಓಖಿ ಚಂಡಮಾರುತದಲ್ಲಿ ಸಂತ್ರಸ್ತರಾದವರು ಹಾಗೂ ಹಾನಿಗೊಳಗಾದ ಪ್ರದೇಶ ವೀಕ್ಷಿಸಲಿದ್ದಾರೆ.
Click this button or press Ctrl+G to toggle between Kannada and English