ಕಾಶಿನಾಥ್‌ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

1:25 PM, Thursday, January 18th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

siddaramiahಮೈಸೂರು: ಹಿರಿಯ ನಟ ಕಾಶಿನಾಥ್ ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಿಎಂ ಸಿದ್ದರಾಮಯ್ಯ ಸುತ್ತೂರಿನ ಹೆಲಿಪ್ಯಾಡ್‌ನಲ್ಲಿ ಸಂತಾಪ ಸೂಚಿಸಿದರು.

ಇಂದು ಸುತ್ತೂರು ಜಾತ್ರಾ ಮಹೋತ್ಸವ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಸುತ್ತೂರಿಗೆ ಆಗಮಿಸಿ ಮಾಧ್ಯಮಗಳೊಂದಿಗೆ ಮಾತನಾಡಿದರು. ನಾನು ಸಹ ಅವರ 2 ಚಿತ್ರಗಳನ್ನು ನೋಡಿದ್ದೇನೆ. ಒಳ್ಳೆಯ ಹಾಸ್ಯ ಕಲಾವಿದರಾಗಿದ್ದರು. ಚಿಕ್ಕವಯಸ್ಸಿನಲ್ಲೇ ಸಾವನ್ನಪ್ಪಿದ್ದಾರೆ.

ಹಾಗೆಯೇ ಅವರ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English