ಪುಟ್ಟಣ್ಣಯ್ಯ ಸಾವಿನ ಸುದ್ದಿ ದಿಗ್ಭ್ರಮೆ ಮೂಡಿಸಿದೆ: ಸಿಎಂ ಸಂತಾಪ

4:56 PM, Monday, February 19th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

siddaramaihಮಂಡ್ಯ : ಪುಟ್ಟಣ್ಣಯ್ಯ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ. ಸರ್ವೋದಯ ಪಕ್ಷದ ಶಾಸಕರಾದ ಹಿರಿಯ ರೈತ ಹೋರಾಟಗಾರ ಕೆ.ಎಸ್. ಪುಟ್ಟಣ್ಣಯ್ಯ ಅವರ ಸಾವಿನ ಸುದ್ದಿ ದಿಗ್ಭ್ರಮೆ ಉಂಟು ಮಾಡಿದೆ.

ರೈತ ಚಳುವಳಿ ಒಬ್ಬ ಧೀಮಂತ ನಾಯಕನನ್ನು ಕಳೆದುಕೊಂಡಿದೆ. ಬಹುಕಾಲದ ಸ್ನೇಹಿತನ ಅಗಲಿಕೆ ನನಗೆ ಅತೀವ ದು:ಖವನ್ನುಂಟು ಮಾಡಿದೆ. ಅವರ ಕುಟುಂಬಕ್ಕೆ ನನ್ನ ಸಾಂತ್ವನಗಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇನ್ನು ಪುಟ್ಟಣ್ಣಯ್ಯರಿಗೆ ಪ್ರಥಮ ಚಿಕಿತ್ಸೆ ನೀಡಿದ್ದ ವೈದ್ಯ ಡಾ.ರಾಘವೇಂದ್ರ ಮಾತನಾಡಿ, ರಾತ್ರಿ 10.10ರ ಸುಮಾರಿಗೆ ಪುಟ್ಟಣ್ಣಯ್ಯ ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಆಸ್ಪತ್ರೆಗೆ ಬಂದಾಗ ಪುಟ್ಟಣ್ಣಯ್ಯ ಪ್ರಜ್ಙಾ ಹೀನರಾಗಿದ್ದರು, ಮಾತನಾಡ್ತಿರಲಿಲ್ಲ. ತಕ್ಷಣ ಇಸಿಜಿ ಮಾಡಿ, ಬ್ಲಡ್ ಡ್ರಾ ಮಾಡಿದ್ದೆವು. ಇಸಿಜಿಯಲ್ಲಿ ಹೃದಯ ಸಂಬಂಧಿ ಕಾಯಿಲೆ ಕಂಡಿತ್ತು. ಟ್ರೀಟ್‌‌ಮೆಂಟ್ ಕೊಡುತ್ತಿದ್ದರೂ ಚಿಕಿತ್ಸೆಗೆ ಸ್ಪಂದಿಸಲಿಲ್ಲ. ಪುಟ್ಟಣ್ಣಯ್ಯ ಅವರಿಗೆ ಈ ಮೊದಲೇ ಎರಡು ಸಲ ಹೃದಯ ಶಸ್ತ್ರಚಿಕಿತ್ಸೆ ಆಗಿತ್ತು. ಡಯಾಬಿಟಿಕ್, ರಕ್ತದೊತ್ತಡದಿಂದ ಬಳಲುತ್ತಿದ್ದರು ಎಂದು ತಿಳಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English