ಕುತ್ತಾರಿನಲ್ಲಿ ಯಡಿಯೂರಪ್ಪಅವರ 75 ನೇ ಜನ್ಮದಿನಾಚರಣೆ

2:51 PM, Friday, March 2nd, 2018
Share
1 Star2 Stars3 Stars4 Stars5 Stars
(5 rating, 1 votes)
Loading...

Raveendra shettyಕುತ್ತಾರು : ಮಾಜಿ ಮುಖ್ಯಮಂತ್ರಿ, ಬಿಜೆಪಿ ರಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪಅವರ 75 ನೇ  ಜನ್ಮದಿನಾಚರಣೆಯ ಪ್ರಯುಕ್ತ ಕುತ್ತಾರಿನಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ, ಆರೋಗ್ಯ ಚೀಟಿ ವಿತರಣಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.

ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆದಿದ್ದು ಮಾಜಿ ಶಾಸಕ ಕೆ.ಜಯರಾಮ ಶೆಟ್ಟಿ ಉದ್ಘಾಟಿಸಿ ಮಾತನಾಡಿದರು. ಧಾರ್ಮಿಕ ಪರಿಷತ್ ಜಿಲ್ಲಾ ಮಾಜಿ ಸದಸ್ಯ ಕೆ.ಟಿ ಸುವರ್ಣ ಮಾತನಾಡಿ ಯಡಿಯೂರಪ್ಪನವರಿಗೆ ಸಾಕಷ್ಟೂ ಅಭಿಮಾನಿಗಳಿದ್ದಾರೆ. ಅವರ ಜನ್ಮದಿನವನ್ನು ಮನಃಪೂರ್ವಕ ಹಾಗೂ ಪ್ರಮಾಣಿಕವಾಗಿ ಆಚರಿಸುವುದರಲ್ಲಿ ರವೀಂದ್ರ ಶೆಟ್ಟಿಯವರು ಮುಂದಿದ್ದಾರೆ ಇದು ಅಭಿಮಾನದ ಸಂಕೇತವಾಗಿದೆ ಎಂದರು.

Raveendra shettyಕೆ ರವೀಂದ್ರ ಶೆಟ್ಟಿ ಮಾತನಾಡಿ ಯಡಿಯೂರಪ್ಪ ರೈತ ಪರ ಹೋರಾಟಗಾರರಾಗಿದ್ದು ಅವರ ಅಧಿಕಾರವಾಧಿಯಲ್ಲಿ ಸಾಕಷ್ಟು ಜನಪರ ಕೆಲಸಗಳು ನಡೆದಿವೆ. ಅವರು ಮತ್ತೆ ಮುಖ್ಯ ಮಂತ್ರಿಯಾದಲ್ಲಿ ರಾಜ್ಯ ಮತ್ತಷ್ಟು ಅಭಿವೃದ್ಧಿಯಾಗಲಿದೆ ಎಂದು ಹೇಳಿದರು .

ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸತೀಶ್ ಕುಂಪಲ ,ಗಟ್ಟಿ ಸಮಾಜದ ಅಧ್ಯಕ್ಷೆ ಪವಿತ್ರಾ ಗಟ್ಟಿ , ಬಿಜೆಪಿ ಜಿಲ್ಲಾ ಕಾರ್ಯದರ್ಶಿ ನಮಿತಾ ಶ್ಯಾಂ, ಕ್ಷೇತ್ರ ಮಾಜಿ ಅಧ್ಯಕ್ಷ ಚಂದ್ರಶೇಖರ್ ಉಚ್ಚಿಲ್, ಜಿಲ್ಲಾ ಪಂಚಾಯತ್ ಸದಸ್ಯ ಧನಲಕ್ಷೀ ಗಟ್ಟಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Raveendra shetty

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English