ನಲಪಾಡ್‌‌ಗೆ ಸುಪ್ರೀಂಕೋರ್ಟ್‌ನಲ್ಲೂ ಜಾಮೀನು ಸಿಗುವುದು ಡೌಟ್‌‌!

5:02 PM, Wednesday, March 21st, 2018
Share
1 Star2 Stars3 Stars4 Stars5 Stars
(5 rating, 1 votes)
Loading...

nalapad-harrisಬೆಂಗಳೂರು: ವಿದ್ವತ್ ಕೊಲೆ ಯತ್ನದ ಕೇಸ್‌‌ನಲ್ಲಿ ಜೈಲು ಸೇರಿರುವ ನಲಪಾಡ್ ಹ್ಯಾರಿಸ್‌‌ಗೆ ಸುಪ್ರೀಂಕೋರ್ಟ್‌ನಲ್ಲೂ ಜಾಮೀನು ಸಿಗದಂತೆ ಮಾಡುವ ನಿಟ್ಟಿನಲ್ಲಿ ಸಿಸಿಬಿ ಅಧಿಕಾರಿಗಳು ಇಂದು ಕೇವಿಯೆಟ್ ಅರ್ಜಿ ಸಲ್ಲಿಸಿದ್ದಾರೆ.

ಸುಪ್ರೀಂಕೋರ್ಟ್‌ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದಾರೆ. ನಲಪಾಡ್ ಪರ ವಕೀಲರು ಸುಪ್ರೀಂಕೋರ್ಟ್ ಮೊರೆ ಹೋಗುವ ಮುನ್ನವೇ ಸಿಸಿಬಿ ಅಧಿಕಾರಿಗಳು ಕೇವಿಯೆಟ್ ಅರ್ಜಿ ಸಲ್ಲಿಸಿದ್ದಾರೆ.

ನಲಪಾಡ್ ಹ್ಯಾರಿಸ್ ಜಾಮೀನು ಅರ್ಜಿ ಸಲ್ಲಿಸಿದರೆ ಆದೇಶ ನೀಡುವ ಮುನ್ನ ನಮ್ಮ ಅಭಿಪ್ರಾಯ ಪಡೆಯುವಂತೆ ಕೋರಿ ಕೇವಿಯೆಟ್ ಸಲ್ಲಿಸಲಾಗಿದೆ. ಆರೋಪಿ ನಲಪಾಡ್‌‌ಗೆ ಮಧ್ಯಂತರ ಜಾಮೀನು ಅಥವಾ ಪೂರ್ಣ ಪ್ರಮಾಣದ ಜಾಮೀನು ನೀಡುವ ಮೊದಲು ತಮ್ಮ ಅಭಿಪ್ರಾಯ ಕೇಳುವಂತೆ ಮನವಿ ಮಾಡಿಕೊಳ್ಳಲಾಗಿದೆ.

ಇಂದು ಸಿಸಿಬಿ ಪರ ವಕೀಲರು ಸುಪ್ರೀಂಕೋರ್ಟ್‌ನಲ್ಲಿ ಕೇವಿಯೆಟ್ ಅರ್ಜಿ ಸಲ್ಲಿಸಿದ್ದಾರೆ. ಸೆಷನ್ಸ್ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ನಲಪಾಡ್ ಜಾಮೀನು ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಹೇಗಾದರೂ ಮಾಡಿ ಜಾಮೀನು ಪಡೆಯಲೇಬೇಕೆಂದು ಎಲ್ಲ ರೀತಿಯ ಕಾನೂನು ಸಲಹೆ ಪಡೆದು ನಂತರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಲು ನಲಪಾಡ್ ಪರ ವಕೀಲರು ನಿರ್ಧರಿಸಿದ್ದಾರೆ. ಈ ಮಧ್ಯೆ ಅವರಿಗಿಂತ ಮೊದಲೇ ಸಿಸಿಬಿ ಅಧಿಕಾರಿಗಳು ಜಾಮೀನು ತಪ್ಪಿಸಲು ಕಾರ್ಯತಂತ್ರ ಆರಂಭಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English