ಅಮಿತ್ ಶಾ ಗೆ ನನ್ನ ಕಂಡರೆ ಭಯವಿದೆ : ಸಿದ್ದರಾಮಯ್ಯ

5:55 PM, Thursday, March 29th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

siddaramaihಮೈಸೂರು: ಅಮಿತ್ ಶಾ ಗೆ ನನ್ನನ್ನು ಕಂಡರೆ ಭಯವಿದೆ. ಹಾಗಾಗಿ ನಾನೂ ಹೋದಲೆಲ್ಲ ಅವರು ಹಿಂಬಾಲಿಸುತ್ತಿದ್ದಾರೆ ಎಂದು ಮೈಸೂರಿನಲ್ಲಿ ಬಿಜೆಪಿ ಚಾಣಕ್ಯ ಅಮಿತ್ ಶಾ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾ ಯಾವ ಮಠಕ್ಕಾದರೂ ಹೋಗಲಿ, ಎಲ್ಲಿಗೆ ಬೇಕಾದರೂ ಹೋಗಲಿ. ಅದು ಅವರ ವೈಯಕ್ತಿಕ ಸ್ವಾತಂತ್ರ್ಯ. ಆ ಬಗ್ಗೆ ನಾನೂ ಏನನ್ನು ಹೇಳುವುದಿಲ್ಲ. ಅಮಿತ್ ಶಾ ನನ್ನನ್ನು ಅಹಿಂದು ಎಂದು ಹೇ‌ಳಿದ್ದಾರೆ. ಆದರೆ ಮಿತ್ ಶಾ ಜೈನ ಧರ್ಮದವರು. ಅವರು ಹಿಂದೂನಾ ಅಥವಾ ಅಹಿಂದುನಾ ಅಂತ ಸ್ಪಷ್ಟಪಡಿಸಲಿ ಎಂದಿದ್ದಾರೆ.

ಇನ್ನು ಬೈ ಎಲೆಕ್ಷನ್’ನಲ್ಲಿ ಯಡಿಯೂರಪ್ಪ ಸೇರಿ ಎಲ್ಲರೂ ಬಂದಿದ್ದರು. ಉಪ ಚುನಾವಣೆ ಮುಂದಿನ ಚುನಾವಣೆಗೆ ದಿಕ್ಸೂಚಿ ಅಂದಿದ್ದರು. ಆದರೆ ಗೆದ್ದಿದ್ದು ಯಾರು ಎಂದು ಇಡೀ ರಾಜ್ಯದ ಜನರಿಗೆ ಗೊತ್ತಿದೆ. ಜೈಲಿಗೆ ಹೋಗಿ ಬಂದವರೆಲ್ಲ ನನಗೆ ಪಾಠ ಹೇಳಿ ಕೊಡ್ತಾರಾ.? ಎಂದು ಬಿಎಸ್’ವೈ ವಿರುದ್ಧವೂ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ನಾನು ಈ ಬಾರಿಯ ವಿಧಾನಸಭಾ ಚುನಾವನೆಯ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧಿಸಿ ಮತ್ತೆ ನಾನೇ ಗೆಲ್ಲುತ್ತೇನೆ. ನನ್ನ ಕ್ಷೇತ್ರದ ಬಗ್ಗೆ ನನಗೆ ನಂಬಿಕೆ ಇದೆಇನ್ನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಸೋಲು ಖಚಿತ ಎಂಬ ಕುಮಾರಸ್ವಾಮಿ ಟೀಕೆಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಕೇಳಿಕೊಂಡು ನಾನು ರಾಜಕಾರಣ ಮಾಡಬೇಕಿಲ್ಲ ಅಂತ ಹೆಚ್.ಡಿಕೆ ಮೇಲೆ ಹರಿಹಾಯ್ದರು.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಾನು ಎಷ್ಟು ಸಲ ನಿಂತಿದ್ದೀನಿ ಅಂತ ಕುಮಾರಸ್ವಾಮಿಗೆ ಗೊತ್ತಾ.

ನಾನು ಚಾಮುಂಡೇಶ್ವರಿಯಲ್ಲಿ 7 ಬಾರಿ ಸ್ಪರ್ಧಿಸಿದ್ದೇನೆ. 5 ಬಾರಿ ಗೆದ್ದಿದ್ದು, 2 ಬಾರಿ ಸೋತಿದ್ದೇನೆ. ಈ ಬಾರಿ ಕೂಡ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧಿಸಿ ಗೆಲುವು ಪಡೆಯಲಿದ್ದೇನೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದರು. ಚಾಮುಂಡೇಶ್ವರಿ ಕ್ಷೇತ್ರದ ಮೇಲೆ ನನಗೆ ನಂಬಿಕೆ ಇದೆ. ನಾನು ಮತ್ತೆ ಗೆಲ್ಲುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English