ಕುತೂಹಲ ಮೂಡಿಸಿದೆ ಸಿಎಂ ಸಿದ್ದರಾಮಯ್ಯ-ನಟ ಸುದೀಪ್ ಭೇಟಿ

11:42 AM, Thursday, April 5th, 2018
Share
1 Star2 Stars3 Stars4 Stars5 Stars
(6 rating, 2 votes)
Loading...

sudeepಬೆಂಗಳೂರು: ಚಿತ್ರನಟ ಸುದೀಪ್ ಇಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.

ಈ ಭೇಟಿ ಸಂದರ್ಭ ಯಾವುದೇ ರಾಜಕೀಯ ಚರ್ಚೆ ಅಥವಾ ಪ್ರಚಾರ ಸಂಬಂಧ ಮಾತುಕತೆ ನಡೆದಿಲ್ಲ ಎಂದು ಹೇಳಲಾಗುತ್ತಿದೆ. ಆದರೆ ಪಕ್ಷದ ಪರ ಪ್ರಚಾರ ಸಂಬಂಧ ಸಿಎಂ ಈ ಸಂದರ್ಭ ಪ್ರಸ್ತಾಪಿಸಿದ್ದು, ಸುದೀಪ್ ಅದಕ್ಕೆ ಯಾವ ಪ್ರತಿಕ್ರಿಯೆ ನೀಡಿದ್ದಾರೆ ಎನ್ನುವುದು ತಿಳಿದು ಬಂದಿಲ್ಲ.

sudeep-2ಕಳೆದ ವಾರವಷ್ಟೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದ ಸುದೀಪ್ ದೊಡ್ಡ ಸುದ್ದಿಯಾಗಿದ್ದರು. ಜೆಡಿಎಸ್‍ಗೆ ಪ್ರಸಕ್ತ ಚುನಾವಣೆಯಲ್ಲಿ ಅವರು ಬೆಂಬಲಿಸಲಿದ್ದಾರೆ, ಪ್ರಚಾರದಲ್ಲಿ ತೊಡಗಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಇದೆಲ್ಲವನ್ನೂ ಅಲ್ಲಗಳೆದಿದ್ದ ಸುದೀಪ್ ಸುಮ್ಮನೆ ಭೇಟಿ ಮಾಡಿ ಚರ್ಚಿಸಿದ್ದೆ. ರಾಜಕೀಯ ಸಮಾಲೋಚನೆ ಮಾಡಿಲ್ಲ ಎಂದಿದ್ದರು.

ಇದೀಗ ಸಿಎಂ ಜತೆ ಕೂಡ ಸುದೀಪ್ ಚರ್ಚಿಸಿದ್ದಾರೆ. ದಿಢೀರ್ ನಡೆದ ಈ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದ್ದು, ರಾಜಕೀಯ ಲೆಕ್ಕಾಚಾರಗಳು ಆರಂಭವಾಗಿವೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English