ಬೊಮ್ಮನಹಳ್ಳಿ ವಿಧಾನ ಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಿರ್ಮಾಪಕ ಮಂಜು ಕಣಕ್ಕೆ?

11:39 AM, Monday, April 23rd, 2018
Share
1 Star2 Stars3 Stars4 Stars5 Stars
(No Ratings Yet)
Loading...

k-manjuಬೆಂಗಳೂರು: ಬೊಮ್ಮನಹಳ್ಳಿ ವಿಧಾನ ಸಭಾ ಕ್ಷೇತ್ರದಿಂದ ಕನ್ನಡ ಸಿನಿಮಾ ನಿರ್ಮಾಪಕ ಕೆ ಮಂಜು ಅವರು ಕಣಕ್ಕಿಳಿಯುವ ಸುದ್ದಿ ಬಂದಿದೆ. ಜೆಡಿಎಸ್ ನಿಂದ ಟಿಕೆಟ್ ಪಡೆದು ಸ್ಪರ್ಧಿಸಲು ಕೆ ಮಂಜು ಸಿದ್ಧರಾಗಿದ್ದಾರೆ. ಈ ಮುಂಚೆ ಕಾಂಗ್ರೆಸ್ ಟಿಕೆಟ್ ಬಯಸಿದ್ದರು.

ಅದರೆ, ಈಗ ಜೆಡಿಎಸ್ ವರಿಷ್ಠ ಎಚ್. ಡಿ ದೇವೇಗೌಡರನ್ನು ಭೇಟಿ ಮಾಡಿ, ಬಿ ಫಾರಂ ಪಡೆಯಲಿದ್ದು, ಇಂದೇ ನಾಮಪತ್ರ ಸಲ್ಲಿಸಲಿದ್ದಾರೆ ಎಂಬ ಮಾಹಿತಿಯಿದೆ. ಬೊಮ್ಮನಹಳ್ಳಿ ಕ್ಷೇತ್ರದಿಂದ ಒಕ್ಕಲಿಗ ಮಹಾಸಂಸ್ಥಾನದ ಚಂದ್ರಶೇಖರಸ್ವಾಮೀಜಿ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಈಗ ಕೆ ಮಂಜುಗೆ ಅದೃಷ್ಟ ಒಲಿದಿದೆ. ಬೊಮ್ಮನಹಳ್ಳಿಯಲ್ಲಿ ಬಿಜೆಪಿಯಿಂದ ಸತೀಶ್ ರೆಡ್ಡಿ, ಕಾಂಗ್ರೆಸ್ಸಿನಿಂದ ಪುಷ್ಪ ರಾಜಗೋಪಾಲರೆಡ್ಡಿ ಕಣದಲ್ಲಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English