ಸಾಲ ಮನ್ನಾ ಬಗ್ಗೆ ಬಿಜೆಪಿ ಬ್ಲ್ಯಾಕ್‌ಮೇಲ್ ಮಾಡಲು ಸಾಧ್ಯವಿಲ್ಲ: ಡಿ.ಕೆ.ಶಿವಕುಮಾರ್

6:09 PM, Friday, May 25th, 2018
Share
1 Star2 Stars3 Stars4 Stars5 Stars
(No Ratings Yet)
Loading...

d-k--shivkumarಬೆಂಗಳೂರು: ಸಾಲ ಮನ್ನಾ ವಿಚಾರವಾಗಿ ಬಿಜೆಪಿ ಡೆಡ್‌ಲೈನ್ ಕೊಡಲು ಸಾಧ್ಯವಿಲ್ಲ. ಬಹುಮತ ಸಾಬೀತು ವೇಳೆ ವಾಕ್ ಔಟ್ ಮಾಡುವ ಮೂಲಕ ಬಿಜೆಪಿ ಪ್ರಜಾಪ್ರಭುತ್ವಕ್ಕೆ ಅಪಮಾನ ಮಾಡಿದ್ದಾರೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು.

ವಿಧಾನ ಸೌಧದಲ್ಲಿ ಮಾತನಾಡಿದ ಅವರು, ರೈತರು ಶಾಂತಿಯುತವಾಗಿ ವರ್ತಿಸಬೇಕು. ಯಡಿಯೂರಪ್ಪಗೆ ಸಿಎಂ ಆಗಲು ಅಡ್ಡಿಯಾಗಿದ್ದು, ಕಾಂಗ್ರೆಸ್ ಶಕ್ತಿ. ನನ್ನಿಂದ ಮಾತ್ರ ಅದು ಆಗಿಲ್ಲವೆಂದು ಸ್ಪಷ್ಟಪಡಿಸಿದರು.

ಯಡಿಯೂರಪ್ಪ ಅವರು ಇಂದು ಕೆಟ್ಟ ಸಂಸದೀಯ ವ್ಯವಹಾರವನ್ನು ಶುರು ಮಾಡಿದ್ದಾರೆ. ಬಂದ್ ಮಾಡುತ್ತೇವೆ ಎಂದು ಹೇಳುವ ಮೂಲಕ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ. ಅವರು ಹೇಳಿದಂತೆ ಸರ್ಕಾರ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಇದೇ ವೇಳೆ ಡಿ ಕೆ ಶಿವಕುಮಾರ್‌ ತಿಳಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English