ಡಿ.ಕೆ.ಶಿವಕುಮಾರ್ ಒಬ್ಬಂಟಿಯಲ್ಲ, ಕಾಂಗ್ರೆಸ್ ಪಕ್ಷ ಅವರ ಜೊತೆಗಿದೆ: ಮಾಜಿ ಸಿಎಂ ಸಿದ್ದರಾಮಯ್ಯ

6:25 PM, Friday, June 1st, 2018
Share
1 Star2 Stars3 Stars4 Stars5 Stars
(No Ratings Yet)
Loading...

siddaramaihಬೆಂಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬೆನ್ನಿಗೆ ಮಾಜಿ ಸಿಎಂ ಸಿದ್ದರಾಮಯ್ಯ ನಿಂತು, ಸಿಬಿಐ ದಾಳಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿರುವ ಸಿದ್ದರಾಮಯ್ಯ, ರಾಜಕೀಯ ದ್ವೇಷ ಸಾಧನೆಗೆ ನರೇಂದ್ರ ಮೋದಿ ಸರ್ಕಾರ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತಿರುವುದು‌ ಖಂಡನೀಯ. ಇಂತಹ ಬೆದರಿಕೆಗೆ ಕಾಂಗ್ರೆಸ್ ನಾಯಕರು ಜಗ್ಗುವುದಿಲ್ಲ, ಬಗ್ಗುವುದೂ ಇಲ್ಲ. ಡಿ.ಕೆ.ಶಿವಕುಮಾರ್ ಒಬ್ಬಂಟಿಯಲ್ಲ, ಕಾಂಗ್ರೆಸ್ ಪಕ್ಷ ಅವರ ಜೊತೆಗಿದೆ ಎಂದು ಡಿಕೆಶಿಗೆ ಅಭಯ ನೀಡಿದ್ದಾರೆ.

ರಾಜಕೀಯ ದ್ವೇಷ ಸಾಧನೆಗೆ ನರೇಂದ್ರ ಮೋದಿ ಸರ್ಕಾರ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತಿರುವುದು‌ ಖಂಡನೀಯ. ಇಂತಹ ಬೆದರಿಕೆಗೆ ಕಾಂಗ್ರೆಸ್ ನಾಯಕರು ಜಗ್ಗುವುದಿಲ್ಲ, ಬಗ್ಗುವುದೂ ಇಲ್ಲ. ಡಿ.ಕೆ.ಶಿವಕುಮಾರ್ ಒಬ್ಬಂಟಿಯಲ್ಲ, ಕಾಂಗ್ರೆಸ್ ಪಕ್ಷ ಜತೆಗಿದೆ.@INCKarnataka @INCIndia

ಡಿಕೆ ಬ್ರದರ್ಸ್ ಆಪ್ತರ ಮೇಲೆ ಗುರುವಾರ ಸಿಬಿಐ ದಾಳಿ ಮಾಡಿದೆ. ಈ ಹಿನ್ನೆಲೆಯಲ್ಲಿ ಡಿಕೆಶಿ ಪರ ಸಿದ್ದರಾಮಯ್ಯ ಮಾತನಾಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English