[1]ಬೆಂಗಳೂರು: ಜಯನಗರ ವಿಧಾನಸಭೆ ಕ್ಷೇತ್ರ ಚುನಾವಣೆಯಲ್ಲಿ ಜಯಗಳಿಸಿರುವ ಸೌಮ್ಯ ರೆಡ್ಡಿ ಅವರನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅಭಿನಂದಿಸಿದರು.
ತಮ್ಮ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿದ್ದ ಸೌಮ್ಯ ರೆಡ್ಡಿ ಅವರನ್ನು ಸಿದ್ದರಾಮಯ್ಯ ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬೆಂಗಳೂರು ನಗರದ 28 ಕ್ಷೇತ್ರದ ಪೈಕಿ 16 ಕ್ಷೇತ್ರಗಳಲ್ಲಿ ಕಾಂಗ್ರೆಸ್ಗೆ ಮತದಾರರು ಆಶೀರ್ವಾದ ಮಾಡಿದ್ದಾರೆ.
ರಾಜ್ಯದಲ್ಲಿ ಶೇ.38 ರಷ್ಟು ಮತ ಲಭಿಸಿದೆ. ಈಗ ಇನ್ನೆರಡು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದೇವೆ. ರಾಜ್ಯದ ಜನತೆಯ ಒಲವು ನಮ್ಮೊಂದಿಗೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜಯನಗರ ಕ್ಷೇತ್ರದಲ್ಲಿ ಶಾಸಕರಾಗಿದ್ದ ವಿಜಯ್ ಕುಮಾರ್ ನಿಧನದ ಅನುಕಂಪದ ಅಲೆಯನ್ನೂ ಮೀರಿ ನಮ್ಮ ಆಡಳಿತದ ಶ್ರೇಷ್ಠತೆಗೆ ಬೆಲೆ ಸಿಕ್ಕಿದೆ. ಬೆಂಗಳೂರು ನಗರದಲ್ಲಿ ಜನ ನಮಗೆ ಹೆಚ್ಚಿನ ಬೆಂಬಲ ನೀಡಿದ್ದಾರೆ ಎಂದರು.