ಹೊಟ್ಟೆಕಿಚ್ಚಿಗೆ ಮದ್ದಿಲ್ಲ ಅನ್ನೋದು ಜಗತ್ತಿಗೆ ಗೊತ್ತಿರುವ ವಿಚಾರ: ಲಕ್ಷ್ಮಿ ಹೆಬ್ಬಾಳ್ಕರ್

5:11 PM, Monday, June 18th, 2018
Share
1 Star2 Stars3 Stars4 Stars5 Stars
(No Ratings Yet)
Loading...

laxmi-hebbalkarಬೆಂಗಳೂರು: ಜಯಮಾಲಾರ ಹೊಟ್ಟೆಕಿಚ್ಚಿಗೆ ಮದ್ದಿಲ್ಲ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಹೊಟ್ಟೆಕಿಚ್ಚಿಗೆ ಮದ್ದಿಲ್ಲ ಅನ್ನೋದು ಜಗತ್ತಿಗೆ ಗೊತ್ತಿರುವ ವಿಚಾರವೆಂದು ಮಾರ್ಮಿಕವಾಗಿ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ನಮ್ಮ ಕಡೆ ಸೇವೆ ಅಂದ್ರೆ ಬೇರೆ ಇದೆ. ಸೇವೆ ಅಂದ್ರೆ ದೇವ್ರ ಸೇವೆ, ಅಭಿಷೇಕದ ಸೇವೆ, ಉರುಳು ಸೇವೆ, ಪಕ್ಷದ ಸೇವೆ, ಆಗಿರಬಹುದು. ಜಯಾಮಾಲರ ರಾಜಕೀಯ ಸೇವೆ ಪಕ್ಷಕ್ಕೆ ಇಷ್ಟವಾಗಿರಬಹುದು. ಹೀಗಾಗಿ ಅವರಿಗೆ ಸಚಿವ ಸ್ಥಾನ ಸಿಕ್ಕಿರಬಹುದು. ಅವರು ಯಾವ ಅರ್ಥ ತಿಳಿದುಕೊಂಡಿದ್ದಾರೋ ಗೊತ್ತಿಲ್ಲವೆಂದು ಸ್ಪಷ್ಟಪಡಿಸಿದರು.

ಇದೇ ವೇಳೆ ಸಚಿವ ಸ್ಥಾನದ ವಿಚಾರವಾಗಿ ಮಾತನಾಡಿದ ಹೆಬ್ಬಾಳ್ಕರ್, ಅದು ಹೈಕಮಾಂಡ್‌ಗೆ ಬಿಟ್ಟ ವಿಚಾರ. ಸಚಿವ ಸ್ಥಾನ ಕೊಟ್ಟರೂ ಸಂತೋಷ, ಕೊಡದಿದ್ದರೂ ಬೇಜಾರಿಲ್ಲ. ನಾನು ಪಕ್ಷದ ಶಿಸ್ತಿನ ಸಿಪಾಯಿ. ನಾನು ಪ್ರಸ್ತುತದಲ್ಲಿ ನಂಬಿಕೆಯಿಟ್ಟವಳು. ನಾಳೆ ನಾಡಿದ್ದು ಅನ್ನೋದ್ರಲ್ಲಿ ನಂಬಿಕೆ ಇಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಎಲ್ಲರನ್ನು ತೃಪ್ತಿಪಡಿಸಲು ಸಾಧ್ಯವಿಲ್ಲ ಎಂದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English