ಉಜಿರೆ: ಉಜಿರೆಯ ರುಡ್ಸೆಟ್ ಸಂಸ್ಥೆಯಲ್ಲಿ ಮಹಿಳೆಯರ ಟೈಲರಿಂಗ್ ತರಬೇತಿ ಕಾರ್ಯಕ್ರಮದ ಸಮಾರೋಪದ ಉದ್ಘಾಟನಾ ಸಮಾರಂಭವು ನಡೆಯಿತು.
ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸಿಂಡಿಕೇಟ್ಬ್ಯಾಂಕಿನ ಮಂಗಳೂರು ವಲಯದ ಉಪ ಮಹಾಪ್ರಬಂಧಕರಾದ ಶ್ರೀ ತಿಮ್ಮಯ್ಯರವರು ಕಾರ್ಯಕ್ರಮದ ಉದ್ಘಾಟನೆ ಮಾಡಿ ಮಾತನಾಡುತ್ತಾ ಬ್ಯಾಂಕಿನಿಂದ ಸಿಗುವ ಸವಲತ್ತುಗಳನ್ನು ಪಡೆದುಕೊಂಡು ಸ್ವಂತ ಉದ್ಯೋಗ ಪ್ರಾರಂಬಿಸಿ ಎಂದು ಹಿತವಚನ ನೀಡಿದರು.
ವೇದಿಕೆಯಲ್ಲಿ ಸಿಂಡಿಕೇಟ್ಬ್ಯಾಂಕಿನ ಮಂಗಳೂರು ವಲಯದ ಸಹಾಯಕ ಮಹಾಪ್ರಬಂಧಕರಾದ ಶ್ರೀ ಶಿವಸ್ವಾಮಿಯವರು ಉಪಸ್ಥಿತರಿದ್ದರು. ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಶ್ರೀ ಅಬ್ರಹಾಂ ಜೇಮ್ಸ್ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತವಿಕವಾಗಿ ಮಾತನಾಡಿದರು, ಹಿರಿಯ ಉಪನ್ಯಾಸಕರಾದ ಶ್ರೀಮತಿ ಅನಸೂಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಈ ತರಬೇತಿ ಕಾರ್ಯಕ್ರಮದಲ್ಲಿ 35 ಮಹಿಳಾ ಶಿಭಿರಾರ್ಥಿಗಳು ಟೈಲರಿಂಗ್ ಕೌಶಲ್ಯವನ್ನು ಕಲಿಯುತ್ತಿದ್ದಾರೆ.
Click this button or press Ctrl+G to toggle between Kannada and English