ಸದಾನಂದ ಗೌಡ ಜೆಡಿಎಸ್ ಸೇರ್ಪಡೆಗೊಳ್ಳುವ ಸುಳಿವು ನೀಡಿದ ಕೆಜೆಪಿ ಉಪಾಧ್ಯಕ್ಷ ಧನಂಜಯ್ ಕುಮಾರ್

8:23 PM, Sunday, February 17th, 2013
Share
1 Star2 Stars3 Stars4 Stars5 Stars
(No Ratings Yet)
Loading...

Dananjaya Kumarಮಂಗಳೂರು  :  ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ  ಜೆಡಿಎಸ್ ಸೇರ್ಪಡೆಗೊಳ್ಳಲು ವೇದಿಕೆ ಸಿದ್ದ ಮಾಡಿಕೊಳ್ಳುತ್ತಿದ್ದು, ಈ ಹಿನ್ನಲೆಯಲ್ಲಿಯೇ ಶನಿವಾರ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಚುನಾವಣಾ ಸಿದ್ದತಾ ಸಭೆಗೆ ಗೈರು ಹಾಜರಾಗಿದ್ದಾರೆ ಎಂದು  ಕೆಜೆಪಿ ಉಪಾಧ್ಯಕ್ಷ, ಮಾಜಿ ಕೇಂದ್ರ ಸಚಿವ ಧನಂಜಯ್ ಕುಮಾರ್ ಹೇಳಿದ್ದಾರೆ.

ಸದಾನಂದ ಗೌಡರು ಮುಖ್ಯಮಂತ್ರಿಗಳಾಗಿದ್ದ ವೇಳೆ ಜೆಡಿಎಸ್‌ನೊಂದಿಗೆ ನಿಕಟ ಸಂಪರ್ಕವಿಟ್ಟುಕೊಂಡಿದ್ದರು. ಆಡಳಿತ ನಡೆಸುವಾಗ ಜೆಡಿಎಸ್ ವರಿಷ್ಟರ ಮಾತಿಗೆ ಮನ್ನಣೆ ನೀಡುತ್ತಿದ್ದರೆಂದರಲ್ಲದೆ, ಈಗಲೂ ಜೆಡಿಎಸ್ ಜೊತೆ ಉತ್ತಮ ಬಾಂಧವ್ಯ ಹೊಂದಿರುವ ಸದಾನಂದ ಗೌಡರು ಜೆಡಿಎಸ್ ಸೇರಲಿದ್ದಾರೆ ಎಂದು ಮಂಗಳೂರಿನಲ್ಲಿ ಇಂದು  ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.

ಕೆಜೆಪಿಗೆ ಬಿಜೆಪಿಯ ಯಾವುದೇ ಸಚಿವ, ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡುವುದಿಲ್ಲ. ಅವರಾಗಿಯೇ ಬಂದರೆ ಮುಕ್ತವಾಗಿ ಪಕ್ಷಕ್ಕೆ ಸ್ವಾಗತಿಸುವುದಾಗಿ ತಿಳಿಸಿದರು.

ಮುಂಬರುವ ವಿಧಾನಸಭಾ ಚುನಾವಣೆ ಹಾಗೂ ಥಳೀಯ ಸಂಸ್ಥೆ ಚುನಾವಣೆಯಲ್ಲಿಯೂ ಕೆಜೆಪಿ ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳದೆ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಹೇಳಿದರು.


ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English