ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ : ಡಿ.ವಿ

12:48 PM, Wednesday, March 6th, 2013
Share
1 Star2 Stars3 Stars4 Stars5 Stars
(No Ratings Yet)
Loading...

DV Sadananda Gowdaಮಂಗಳೂರು : ವೈಯಕ್ತಿಕ ಕಾರಣಗಳಿಂದಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂಬುದಾಗಿ ಮಾಜಿ ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡ ಹೇಳಿದ್ದಾರೆ.

ಮಂಗಳೂರಿನಲ್ಲಿ ಮಂಗಳವಾರ ತನ್ನನ್ನು ಭೇಟಿಯಾದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಲಿರುವ ಬಿಜೆಪಿಯ 125 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಾರ್ಚ್ 25ರ ಒಳಗೆ ಪ್ರಕಟಿಸಲಾಗುವುದು. ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದ ಬಳಿಕ ರಾಜ್ಯದ ಬಿಜೆಪಿ ನಾಯಕರು ಹಾಗೂ ಉನ್ನತ ಮಟ್ಟದ ನಾಯಕರ ಸಭೆ ನಡೆಸಲಾಗುವುದು. ಇದರಲ್ಲಿ ವಿಧಾನಸಭಾ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ಧಪಡಿಸಲಾಗುವುದು. ನಂತರ ಎರಡನೇ ಹಂತದಲ್ಲಿ ಅಂತಿಮ ಪಟ್ಟಿ ಪ್ರಕಟಿಸಲಾಗುವುದು ಎಂದರು.

ಕಾಂಗ್ರೆಸ್ ಸೇರ್ಪಡೆಗೊಂಡ ಶಕುಂತಳಾ ಶೆಟ್ಟಿ ಬಗ್ಗೆ ಪ್ರತಿಕ್ರಿಯಿಸಿದ ಅವರು ಶಕುಂತಳಾ ಶೆಟ್ಟಿ  ಸೇರ್ಪಡೆಯಿಂದಾಗಿ ಬಿಜೆಪಿ ಗೆ ಹೆಚ್ಚು ಲಾಭವಾಗಲಿದೆ. ಈಗಾಗಲೇ ಕಾಂಗ್ರೆಸ್‌ನಲ್ಲಿ ಹಲವು ಗುಂಪುಗಳಿದ್ದು. ಇವರ ಪ್ರವೇಶದಿಂದಾಗಿ ಗುಂಪುಗಾರಿಕೆ ಜೀವಂತವಾಗಲಿದೆ. ಕಾಂಗ್ರೆಸ್‌ನ ಗುಂಪುಗಾರಿಕೆ ಬಿಜೆಪಿಗೆ ವರವಾಗಲಿದೆ ಎಂದವರು ಹೇಳಿದರು.

ಚುನಾವಣಾ ಫಲಿತಾಂಶ ವಿಷಯವಾಗಿ ಕಳೆದ 5 ವರ್ಷಗಳಲ್ಲಿ ಬಿಜೆಪಿ ಸರಕಾರ ರಾಜ್ಯದಲ್ಲಿ ಮಾಡಿರುವ ಸಾಧನೆಗಳು ಬಿಜೆಪಿ ಗೆ ಮತ್ತೆ ಅಧಿಕಾರದ ಮೆಟ್ಟಿಲು ಏರಿಸಲಿದೆ ಎಂದು  ಹೇಳಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English