ಉಳ್ಳಾಲ ಕೊಲೆ ಯತ್ನ ಆರೋಪಿಯ ಬಂಧನ

Monday, February 12th, 2018
Rajaneesh

ಮಂಗಳೂರು  : ಉಳ್ಳಾಲ ಗ್ರಾಮದ ಮುಕ್ಕಚ್ಚೇರಿಯಲ್ಲಿ ಸಮೂಸಾ ಫ್ಯಾಕ್ಟರಿಯಲ್ಲಿ ಕೆಲಸ ಮಾಡಲು ಮನೆಯಿಂದ ಹೊರಟು ಉಳ್ಳಾಲ ಪೇಟೆಯಲ್ಲಿರುವ ರೆಹಮಾನಿಯಾ ಮಸೀದಿ ಬಳಿಗೆ ರಾತ್ರಿ 10-00 ಗಂಟೆಗೆ ತನ್ನ ಬೈಕ್ ನಲ್ಲಿ ಕೆಲಸದ ನಿಮಿತ್ತ ಬರುತಿದ್ದ ನೌಷಾದ್ ಹುಸೈನ್ ಎಂಬವರಿಗೆ ಬೈಕ್ ನಲ್ಲಿ ಬಂದು ತಲವಾರಿನಿಂದ ಹಲ್ಲೆ ನಡೆಸಿದ ಪ್ರಮುಖ ಆರೋಪಿಯನ್ನು ರೌಡಿ ನಿಗ್ರಹ ದಳ ಸಿಬ್ಬಂದಿ ಗಳು ಸೋಮವಾರ ಬಂಧಿಸಿದ್ದಾರೆ. ಈ ಪ್ರಕರಣದ ಕುರಿತು 2017 ರ ಮಾರ್ಚ್ 26 ರಂದು ರಂದು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ರಿ […]